Featured

ಭಾರತದ ಮೊದಲ ಲೋಕಪಾಲರಾಗಿ ಅಧಿಕಾರ ಸ್ವೀಕರಿಸಿದ ಜಸ್ಟೀಸ್ ಪಿನಾಕಿ ಘೋಷ್- Vishwanews24

ನವದೆಹಲಿ: ಭಾರತದ ಮೊಟ್ಟ ಮೊದಲ ಲೋಕಪಾಲರಾಗಿ ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಶನಿವಾರ ಪ್ರಮಾಣವಚನ ಸ್ವೀಕರಿಸಿದರು.

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಮಾಣವಚನ ಬೋಧಿಸಿದರು. ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಮುಖ್ಯ ನ್ಯಾಯಮೂರ್ತಿ ರಂಜಾನ್ ಗೊಗೋಯ್’ ಸಮ್ಮುಖದಲ್ಲಿ ನ್ಯಾಯಮೂರ್ತಿ ಪಿನಾಕಿ ಚಂದ್ರ ಘೋಷ್ ಪ್ರಮಾಣವಚನ ಸ್ವೀಕರಿಸಿದರು.

2017ರಲ್ಲಿ ಸುಪ್ರೀಂಕೋರ್ಟಿನಿಂದ ನಿವೃತ್ತಿಹೊಂದಿದ ಜಸ್ಟೀಸ್ ಘೋಷ್, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾಗಿದ್ದಾರೆ. ಇದಕ್ಕೂ ಮೊದಲು ಕೋಲ್ಕತ್ತಾದ ಹೈಕೋರ್ಟಿನ ಜಡ್ಜ್ ಹಾಗೂ ಆಂಧ್ರಪ್ರದೇಶ ಹೈಕೋರ್ಟಿನ ಮುಖ್ಯ ನ್ಯಾಯಮುರ್ತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

ಮಾರ್ಚ್ 15ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ಪಿನಾಕಿ ಚಂದ್ರ ಘೋಷ್ ಅವರನ್ನು ಲೋಕಪಾಳರಾಗಿ ಆಯ್ಕೆ ಮಾಡಿ ಘೋಷಿಸಿತ್ತು. ಇವರೊಂದಿಗೆ ನ್ಯಾಯಮೂರ್ತಿ ದಿಲೀಪ್ ಬಿ ಬೊಸ್ಸಾಲೆ, ನ್ಯಾಯಮೂರ್ತಿ ಪಿ.ಕೆ.ಮೊಹಂತಿ, ನ್ಯಾಯಮೂರ್ತಿ ಅಭಿಲಾಶಾ ಕುಮಾರಿ ಮತ್ತು ನ್ಯಾಯಮೂರ್ತಿ ಎ.ಕೆ. ತ್ರಿಪಾಠಿ ಅವರನ್ನು ನ್ಯಾಯಾಂಗ ಸದಸ್ಯರಾಗಿ, ದಿನೇಶ್ ಕುಮಾರ್ ಜೈನ್, ಅರ್ಚನಾ ರಾಮಸುಂದರ್, ಮಹೇಂದರ್ ಸಿಂಗ್ ಮತ್ತು ಐ.ಪಿ.ಗೌತಮ್ ಅವರನ್ನು ಸದಸ್ಯರನ್ನಾಗಿ ನೇಮಿಸಿತ್ತು.

Vishwa News 24

Recent Posts

ಉಡುಪಿ : ವ್ಯಕ್ತಿ ನಾಪತ್ತೆ -vishwanews24

ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬ…

7 hours ago

ಬೈಂದೂರು: ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ಮೀನುಗಾರಿಕಾ ದೋಣಿ ; ಐವರು ಮೀನುಗಾರರು ಪಾರು -vishwanews24

ಬೈಂದೂರು: ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ಮೀನುಗಾರಿಕಾ ದೋಣಿ ; ಐವರು ಮೀನುಗಾರರು ಪಾರು ಬೈಂದೂರು : ಪ್ರಬಲ ಅಲೆಗಳ…

10 hours ago

ಬಂಟ್ವಾಳ: ಆಕಸ್ಮಿಕ ಬೆಂಕಿ ಅವಘಡ; ಬಚ್ಚಲು ಮನೆ ಮತ್ತು ಹಸುವಿನ ಕೊಟ್ಟಿಗೆ ಭಸ್ಮ -vishwanews24

ಬಂಟ್ವಾಳ: ಆಕಸ್ಮಿಕ ಬೆಂಕಿ ಅವಘಡ; ಬಚ್ಚಲು ಮನೆ ಮತ್ತು ಹಸುವಿನ ಕೊಟ್ಟಿಗೆ ಭಸ್ಮ ; ಅದೃಷ್ಟವಶಾತ್ ಜಾನುವಾರುಗಳು ಅಪಾಯದಿಂದ ಪಾರು …

11 hours ago

ಉಡುಪಿ : ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಿಗೆ ಚರ್ಮ ಗಂಟು ರೋಗದ ಭೀತಿ; ಮುನ್ನೆಚ್ಚರಿಕೆ ಕ್ರಮಕ್ಕೆ ಒತ್ತಾಯ -vishwanews24

ಉಡುಪಿ : ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಿಗೆ ಚರ್ಮ ಗಂಟು ರೋಗದ ಭೀತಿ; ಮುನ್ನೆಚ್ಚರಿಕೆ ಕ್ರಮಕ್ಕೆ ಒತ್ತಾಯ ಉಡುಪಿ: ಪರ್ಕಳದಲ್ಲಿ…

12 hours ago

ಜಲಪಾತಗಳಲ್ಲಿ ಪ್ರವಾಸಿಗರ ಹುಚ್ಚಾಟ ; ಅಪಾಯಕಾರಿ ಸಾಹಸ , ಸೆಲ್ಫಿ, ಈಜಾಟ : ಸ್ಥಳೀಯರ ಆಕ್ರೋಶ -vishwanews24

ಜಲಪಾತಗಳಲ್ಲಿ ಪ್ರವಾಸಿಗರ ಹುಚ್ಚಾಟ ; ಅಪಾಯಕಾರಿ ಸಾಹಸ , ಸೆಲ್ಫಿ, ಈಜಾಟ : ಸ್ಥಳೀಯರ ಆಕ್ರೋಶ ಮಡಿಕೇರಿ: ಮಳೆಗಾಲದಲ್ಲಿ ಮೈದುಂಬಿ…

13 hours ago

ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್‌ಗಳಲ್ಲಿ ಜಂಕ್‌ ಫುಡ್‌ ನಿಷೇಧ: ಆರೋಗ್ಯ ಸಚಿವ ಯುಟಿ ಖಾದರ್ -vishwanews24

ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್‌ಗಳಲ್ಲಿ ಜಂಕ್‌ ಫುಡ್‌ ನಿಷೇಧ: ಆರೋಗ್ಯ ಸಚಿವ ಯುಟಿ ಖಾದರ್ ಮಂಗಳೂರು: ರಾಜ್ಯದ ಎಲ್ಲ ಆಸ್ಪತ್ರೆ…

14 hours ago