ನವದೆಹಲಿ: ಭಾರತದ ವಾಯು ಸೇನೆಗೆ ಫ್ರಾನ್ಸ್ ನಿಂದ 5ನೇ ಬ್ಯಾಚ್ನ ರಫೇಲ್ ಯುದ್ಧ ವಿಮಾನ ಬಂದು ತಲುಪಿದೆ. ಈ ಮೂಲಕ ಭಾರತೀಯ ವಾಯು ಸೇನೆ ಮತ್ತಷ್ಟು ಬಲಿಷ್ಠಗೊಂಡಿದೆ.
5ನೇ ಬ್ಯಾಚ್ನ ರಫೇಲ್ ಯುದ್ಧ ವಿಮಾನಗಳು ಫ್ರಾನ್ಸ್ ನಿಂದ ಸುಮಾರು 8000 ಕಿಲೋ ಮೀಟರ್ ಹಾರಿ ಬಂದು ಭಾರತಕ್ಕೆ ತಲುಪಿದೆ. ಆದರೆ ಎಷ್ಟು ವಿಮಾನಗಳು ಬಂದಿದೆ ಎಂದು ಸ್ಪಷ್ಟಪಡಿಸಿಲ್ಲ. ಕೆಲ ಮೂಲಗಳ ಮಾಹಿತಿ ಪ್ರಕಾರ 4 ರಫೇಲ್ ವಿಮಾನಗಳು ಬಂದಿದೆ ಎಂದು ವರದಿಯಾಗಿದೆ.
ಭಾರತದ ವಾಯುಸೇನೆಯ ಸಿಬ್ಬಂದಿ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಆರ್.ಕೆ.ಎಸ್ ಭದೌರಿಯಾ ಅವರು ಫ್ರಾನ್ಸ್ ಪ್ರವಾಸದಲ್ಲಿದ್ದು, ಅವರು ಫ್ರಾನ್ಸ್ ನ ಮೆರಿಗ್ಯ್ನಾಕ್ ವಾಯುನೆಲೆಯಿಂದ ರಫೇಲ್ ಯುದ್ಧ ವಿಮಾನಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟರು ಎಂದು ವರದಿಯಾಗಿದೆ.
ಏರ್ ಚೀಫ್ ಮಾರ್ಷಲ್ ಆರ್.ಕೆ.ಎಸ್ ಭದೌರಿಯಾ ಅವರು ಫ್ರಾನ್ಸ್ ಪ್ರವಾಸದಲ್ಲಿದ್ದು, ಅವರು ಫ್ರಾನ್ಸ್ ನ ಮೆರಿಗ್ಯ್ನಾಕ್ ವಾಯುನೆಲೆಯಿಂದ ರಫೇಲ್ ಯುದ್ಧ ವಿಮಾನಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಮಾರ್ಗ ಮಧ್ಯದಲ್ಲಿ ಫ್ರಾನ್ಸ್ ಮತ್ತು ಯುಎಇ ವಾಯು ಪಡೆ ರೀಫ್ಯೂಲಿಂಗ್ ಮಾಡಿ ವಿಮಾನವನ್ನು ಸರಿಯಾದ ಸಮಯಕ್ಕೆ ಕಳುಹಿಸಿ ಕೊಟ್ಟಿದ್ದೀರಿ, ಇದಕ್ಕೆ ಧನ್ಯವಾದಗಳು ಎಂದು ಭಾರತದ ರಾಯಭಾರಿ ಕಚೇರಿ ಟ್ವಿಟ್ಟರ್ ನಲ್ಲಿ ಹಾಕಿಕೊಂಡಿದೆ.
ಹಳೆಯಂಗಡಿ : ಸಿಡಿಲು ಬಂಡಿದು ಗಂಭೀರ ಸ್ಥಿತಿಯಲ್ಲಿದ್ದ ಮತ್ತೋರ್ವ ಬಾಲಕ ಸಾವು -Vshwanews24
ಭಾರತ 2016ರ ಸೆಪ್ಟೆಂಬರ್ ತಿಂಗಳಲ್ಲಿ ಫ್ರಾನ್ಸ್ ನೊಂದಿಗೆ 58 ಸಾವಿರ ಕೋಟಿ ವೆಚ್ಚದಲ್ಲಿ 36 ರಫೇಲ್ ಫೈಟರ್ ಜೆಟ್ಗಳನ್ನು ಖರೀದಿಸಲು ಭಾರತ ಅಂತರ್-ಸರ್ಕಾರಿ ಒಪ್ಪಂದ ಮಾಡಿಕೊಂಡಿತ್ತು, ಇದರಂತೆ ಈಗಾಗಲೇ ಭಾರತದಲ್ಲಿ 14 ರಫೇಲ್ ಯುದ್ಧ ವಿಮಾನಗಳು ಕಾರ್ಯಾಚರಿಸುತ್ತಿದೆ. ಇದೀಗ ಮತ್ತೆ ನಾಲ್ಕು ವಿಮಾನಗಳು ಸೇರ್ಪಡೆಯೊಂದಿಗೆ ಇದರ ಸಂಖ್ಯೆ 18ಕ್ಕೆ ಏರಿಕೆ ಕಂಡಿದೆ.
ಕಳೆದ ವರ್ಷ ಜುಲೈ 28 ರಂದು ಐದು ಯುದ್ಧ ವಿಮಾನಗಳು ಬಂದಿಳಿದ್ದವು. ಆ ಬಳಿಕ 4 ಹಂತಗಳಲ್ಲಿ ಭಾರತಕ್ಕೆ ರಫೇಲ್ ಯುದ್ಧ ವಿಮಾನ ಬಂದಿಳಿದ್ದಿತ್ತು. ಇದೀಗ 5ನೇ ಹಂತದಲ್ಲಿ ಮತ್ತೆ ರಫೇಲ್ ಬಲ ಹೆಚ್ಚಿದೆ. 2023ರ ವೇಳೆಗೆ ಒಪ್ಪಂದದಂತೆ ಎಲ್ಲಾ 36 ರಫೇಲ್ ವಿಮಾನಗಳು ಭಾರತದಲ್ಲಿರಲಿದೆ.
ಮೈಸೂರು: ಹೆಚ್ಚುತ್ತಿರುವ ಕೊರೋನಾ ಪ್ರಕರಣ : ಮೇ.4ರವರೆಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿಷೇಧ -Vishwanews24
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…