ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದು ಮಾಡಿದ ಭಾರತದ ನಿರ್ಧಾರವನ್ನು ಜಾಗತಿಕ ವಿಷಯವನ್ನಾಗಿ ಮಾಡಲು ವಿವಿಧ ವೇದಿಕೆಗಳಲ್ಲಿ ಅವಮಾನ ಅನುಭವಿಸಿದ್ದ ಪಾಕಿಸ್ತಾನಕ್ಕೆ ಇದೀಗ ಮುಸ್ಲಿಂ ರಾಷ್ಟ್ರಗಳೂ ಕೂಡ ಪರೋಕ್ಷವಾಗಿ ತಪರಾಕಿ ಹಾಕಿವೆ.
ಭಾರತದ ವಿರುದ್ಧ ಯುದ್ಧೋನ್ಮಾದ ಪ್ರದರ್ಶಿಸುವ ಬದಲು ತಾಳ್ಮೆಯಿಂದ ವರ್ತಿಸಿ ಎಂದು ಪ್ರಮುಖ ಮುಸ್ಲಿಂ ರಾಷ್ಟ್ರಗಳ ನಾಯಕರು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್’ಗೆ ಸಲಹೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ.
ಸೆ.3ರಂದು ಸೌದಿ ಅರೇಬಿಯಾದ ವಿದೇಶಾಂಗ ಖಾತೆ ರಾಜ್ಯ ಸಚಿವ ಆದಿಲ್ ಅಲ್ ಜುಬೈಲ್, ಯುಎಇ ವಿದೇಶಾಂಗ ಸಚಿವ ಅಬ್ದುಲ್ಲಾ ಬಿನ್ ಅಲ್ ನಹ್ಯಾನ್ ಪಾಕಿಸ್ತಾನಕ್ಕೆ ಆಗಮಿಸಿದ ಪ್ರಧಾನಿ ಇಮ್ರಾನ್ ಖಾನ್, ವಿದೇಶಾಂಗ ಸಚಿವ ಶಾ.ಮೊಹಮ್ಮದ್ ಖುರೇಷಿ, ಸೇನಾ ಮುಖ್ಯಸ್ಥ ಖಮರ್ ಜಾವೇದ್ ಬಜ್ವಾ ಜೊತೆಗೆ ಮಾತುಕತೆ ನಡೆಸಿದ್ದರು.
ಈ ವೇಳೆ ಭಾರತದೊಂದಿಗೆ ಸಂಘರ್ಷ ನಡೆಸುವುದನ್ನು ಬಿಟ್ಟು ತಾಳ್ಮೆ ಪ್ರದರ್ಶಿಸಬೇಕು. ಸದ್ಯ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಭಾರತದ ಜೊತೆ ಹಿಂಬಾಗಿಲ ರಾಜತಾಂತ್ರಿಕ ಮಾತುಕತೆ ನಡೆಸಬೇಕು ಎಂದು ಸಲಹೆ ನೀಡೀದ್ದಾರೆಂದು ವರದಿಗಳು ತಿಳಿಸಿವೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…