ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದು ಮಾಡಿದ ಭಾರತದ ನಿರ್ಧಾರವನ್ನು ಜಾಗತಿಕ ವಿಷಯವನ್ನಾಗಿ ಮಾಡಲು ವಿವಿಧ ವೇದಿಕೆಗಳಲ್ಲಿ ಅವಮಾನ ಅನುಭವಿಸಿದ್ದ ಪಾಕಿಸ್ತಾನಕ್ಕೆ ಇದೀಗ ಮುಸ್ಲಿಂ ರಾಷ್ಟ್ರಗಳೂ ಕೂಡ ಪರೋಕ್ಷವಾಗಿ ತಪರಾಕಿ ಹಾಕಿವೆ.
ಭಾರತದ ವಿರುದ್ಧ ಯುದ್ಧೋನ್ಮಾದ ಪ್ರದರ್ಶಿಸುವ ಬದಲು ತಾಳ್ಮೆಯಿಂದ ವರ್ತಿಸಿ ಎಂದು ಪ್ರಮುಖ ಮುಸ್ಲಿಂ ರಾಷ್ಟ್ರಗಳ ನಾಯಕರು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್’ಗೆ ಸಲಹೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ.
ಸೆ.3ರಂದು ಸೌದಿ ಅರೇಬಿಯಾದ ವಿದೇಶಾಂಗ ಖಾತೆ ರಾಜ್ಯ ಸಚಿವ ಆದಿಲ್ ಅಲ್ ಜುಬೈಲ್, ಯುಎಇ ವಿದೇಶಾಂಗ ಸಚಿವ ಅಬ್ದುಲ್ಲಾ ಬಿನ್ ಅಲ್ ನಹ್ಯಾನ್ ಪಾಕಿಸ್ತಾನಕ್ಕೆ ಆಗಮಿಸಿದ ಪ್ರಧಾನಿ ಇಮ್ರಾನ್ ಖಾನ್, ವಿದೇಶಾಂಗ ಸಚಿವ ಶಾ.ಮೊಹಮ್ಮದ್ ಖುರೇಷಿ, ಸೇನಾ ಮುಖ್ಯಸ್ಥ ಖಮರ್ ಜಾವೇದ್ ಬಜ್ವಾ ಜೊತೆಗೆ ಮಾತುಕತೆ ನಡೆಸಿದ್ದರು.
ಈ ವೇಳೆ ಭಾರತದೊಂದಿಗೆ ಸಂಘರ್ಷ ನಡೆಸುವುದನ್ನು ಬಿಟ್ಟು ತಾಳ್ಮೆ ಪ್ರದರ್ಶಿಸಬೇಕು. ಸದ್ಯ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಭಾರತದ ಜೊತೆ ಹಿಂಬಾಗಿಲ ರಾಜತಾಂತ್ರಿಕ ಮಾತುಕತೆ ನಡೆಸಬೇಕು ಎಂದು ಸಲಹೆ ನೀಡೀದ್ದಾರೆಂದು ವರದಿಗಳು ತಿಳಿಸಿವೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…