ನವದೆಹಲಿ:ಸೆಪ್ಟೆಂಬರ್ 14 ರಂದು ಹಿಂದಿ ದಿವಸ್ ಆಚರಿಸಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ, “ಒಂದು ದೇಶ, ಒಂದೇ ಭಾಷೆ” ಎಂಬ ಪರಿಕಲ್ಪನೆಯ ಬಗ್ಗೆ ಮಾತನಾಡಿದ್ದರು. ಇದು ತೀವ್ರ ವಿವಾದ ಸೃಷ್ಟಿಸಿತ್ತು. ದಕ್ಷಿಣ ಭಾರತದ ಕೆಲವು ರಾಜ್ಯಗಳು ಹಿಂದಿ ಹೇರಿಕೆಯನ್ನು ಕಟುವಾಗಿ ವಿರೋಧಿಸಿದ್ದವು. ಇದೀಗ ಬಹುಭಾಷಾ ನೀತಿ ಭಾರತದ ದೌರ್ಬಲ್ಯವಲ್ಲ ಎಂದು ಕಾಂಗ್ರೆಸ್’ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಹಿಂದಿ ಹೇರಿಕೆ ಬಗ್ಗೆ ಎಲ್ಲೆಲ್ಲೂ ಅಪಸ್ವರ ಕೇಳಿಬರುತ್ತಿರುವ ಸಂದರ್ಭದಲ್ಲಿ ಭಾರತದ 23 ಭಾಷೆಗಳನ್ನು ನೆನೆದು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಭಾರತದ ವಿವಿಧ ಭಾಷೆಗಳು ಅದರ ದೌರ್ಬಲ್ಯವಲ್ಲ” ಎಂದಿದ್ದಾರೆ. ಈ ಮೂಲಕ ಹಿಂದಿ ಹೇರಿಕೆಯ ಕೇಂದ್ರ ಸರ್ಕಾರದ ಕ್ರಮವನ್ನು ವಿರೋಧಿಸಿದ್ದಾರೆ.
ಕರ್ನಾಟಕ ಸೇರಿದಂತೆ ಹಲವೆಡೆ ಹಿಂದಿ ಹೇರಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಹಲವರು ಟ್ವೀಟ್ ಮೂಲಕ ತಮ್ಮ ನಿಲುವನ್ನು ತಿಳಿಸುತ್ತಿದ್ದಾರೆ.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…