Featured

ಭಾರತದ ಸಂಸತ್ ನಲ್ಲಿ ವಿರೋಧ ಪಕ್ಷದವರು ಮಾತನಾಡುವಾಗ ಮೈಕ್ ಗಳನ್ನು ಬಂದ್ ಮಾಡಲಾಗುತ್ತದೆ :  ಬ್ರಿಟಿಷ್ ಸಂಸದರ ಬಳಿ ರಾಹುಲ್ – Vishwanews24

ಭಾರತದ ಸಂಸತ್ ನಲ್ಲಿ ವಿರೋಧ ಪಕ್ಷದವರು ಮಾತನಾಡುವಾಗ ಮೈಕ್ ಗಳನ್ನು ಬಂದ್ ಮಾಡಲಾಗುತ್ತದೆ :  ಬ್ರಿಟಿಷ್ ಸಂಸದರ ಬಳಿ ರಾಹುಲ್

ಲಂಡನ್: ಯುಕೆ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಭಾರತದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರುವುದನ್ನು ಮುಂದುವರಿಸಿದ್ದಾರೆ. ಭಾರತದ ಸಂಸತ್ ನಲ್ಲಿ ವಿರೋಧ ಪಕ್ಷದವರು ಮಾತನಾಡುವಾಗ ಮೈಕ್ ಗಳನ್ನು ಬಂದ್ ಮಾಡಲಾಗುತ್ತದೆ ಎಂದಿದ್ದಾರೆ.

ಲಂಡನ್‌ನ ಹೌಸ್ ಆಫ್ ಕಾಮನ್ಸ್‌ ನ ಗ್ರ್ಯಾಂಡ್ ಕಮಿಟಿ ರೂಮ್‌ನಲ್ಲಿ ಹಿರಿಯ ಭಾರತೀಯ ಮೂಲದ ವಿರೋಧ ಪಕ್ಷದ ಲೇಬರ್ ಪಾರ್ಟಿ ಸಂಸದ ವೀರೇಂದ್ರ ಶರ್ಮಾ ಅವರು ಆಯೋಜಿಸಿದ್ದ ಕಾರ್ಯಕ್ರಮದ ಸಂದರ್ಭದಲ್ಲಿ ರಾಹುಲ್ ಗಾಂಧಿ ಈ ರೀತಿ ಹೇಳಿದರು.

“ನಮ್ಮ ಮೈಕ್‌ ಗಳು ಸರಿಯಾಗಿಲ್ಲ, ಅವು ಕಾರ್ಯನಿರ್ವಹಿಸುತ್ತಿವೆ, ಆದರೆ ನೀವು ಅವುಗಳನ್ನು ಇನ್ನೂ ಆನ್ ಮಾಡಲು ಸಾಧ್ಯವಿಲ್ಲ. ನಾನು ಮಾತನಾಡುತ್ತಿರುವಾಗ ಅದು ನನಗೆ ಹಲವಾರು ಬಾರಿ ಅನುಭವಕ್ಕೆ ಬಂದಿದೆ” ಎಂದು ತನ್ನ ಬ್ರಿಟಿಷ್ ಸಹವರ್ತಿಗಳೊಂದಿಗೆ ಭಾರತದಲ್ಲಿ ರಾಜಕಾರಣಿಯಾಗಿರುವ ಅನುಭವದ ಬಗ್ಗೆ ರಾಹುಲ್ ಗಾಂಧಿ ಹೇಳಿದರು.

ನೋಟು ಅಮಾನ್ಯೀಕರಣದ ಬಗ್ಗೆ ಚರ್ಚಿಸಲು ಅವರಿಗೆ ಅವಕಾಶ ಇರಲಿಲ್ಲ ಎಂದು ಕಾಂಗ್ರೆಸ್ ಸಂಸದರು ಹೇಳಿದ್ದಾರೆ. ಇದು “ಅನಾಹುತಕಾರಿ ಆರ್ಥಿಕ ನಿರ್ಧಾರ” ಎಂದು ಅವರು ಹೇಳಿದರು.

ಭಾರತದ ಗಡಿಯೊಳಗೆ ಚೀನಾ ಪಡೆಗಳು ನುಗ್ಗುತ್ತವೆ, ಆದರೆ ಇದರ ಬಗ್ಗೆ ನಮಗೆ ಮಾತನಾಡಲು ಅವಕಾಶವಿಲ್ಲ. ಬಿಸಿ ಬಿಸಿ ಚರ್ಚೆಗಳು, ವಾದಗಳು ಮತ್ತು ಭಿನ್ನಾಭಿಪ್ರಾಯಗಳು ಇದ್ದ ಸಂಸತ್ತು ನನಗೆ ನೆನಪಿದೆ, ಆದರಲ್ಲಿ ನಾವು ಮಾತುಕತೆ ನಡೆಸಿದ್ದೇವೆ. ಅಂತಹ ಸಂಸತ್ತನ್ನು ನಾನು ಮಿಸ್ ಮಾಡಿಕೊಳ್ಳುತ್ತೇನೆ. ಉಸಿರುಗಟ್ಟುವಿಕೆ ನಡೆಯುತ್ತಿದೆ” ಎಂದು ರಾಹುಲ್ ಹೇಳಿದರು.

Vishwa News 24

Recent Posts

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ – vishwanews24

ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…

8 hours ago

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…

11 hours ago

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…

12 hours ago

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ – vishwanews24

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…

12 hours ago

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…

14 hours ago

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…

15 hours ago