Featured

ಭಾರತದ ಸಂಸ್ಕೃತಿಯನ್ನು ಮತ್ತಷ್ಟು ಶ್ರೀಮಂತಗೊಳಿಸಲು ಪ್ರಧಾನಿ ಮೋದಿಯವರು ಅಭೂತಪೂರ್ವ ಕೊಡುಗೆಯನ್ನು ನೀಡಿದ್ದಾರೆ : ಅಮಿತ್‌ ಶಾ -Vishwanews24

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 69ನೇ ಹುಟ್ಟುಹಬ್ಬದ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶುಭ ಕೋರಿದ್ದು, ಮೋದಿಯವರು ದೃಢ ಇಚ್ಛಾಶಕ್ತಿ, ನಿರ್ಣಾಯಕ ನಾಯಕತ್ವ ಮತ್ತು ದಣಿವರಿಯದ ಪರಿಶ್ರಮದ ಸಂಕೇತ ಎಂದು ಹೊಗಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇಶ ಕಂಡ ಪ್ರಸಿದ್ಧ ನಾಯಕ ಮೋದಿ. ನಿಮ್ಮ ನಾಯಕತ್ವದ ಅಡಿಯಲ್ಲಿ ಹೊರಹೊಮ್ಮುತ್ತಿರುವ ನವ ಭಾರತವು ಪ್ರಬಲ, ಸುರಕ್ಷಿತ ಮತ್ತು ವಿಶ್ವಾಸಾರ್ಹ ರಾಷ್ಟ್ರವಾಗಿ ವಿಶ್ವದಲ್ಲಿ ಒಂದು ಛಾಪು ಮೂಡಿಸಿದೆ ಎಂದು ಶಾ ಟ್ವೀಟ್‌ ಮಾಡಿದ್ದಾರೆ.

ಭಾರತದ ಸಂಸ್ಕೃತಿಯನ್ನು ಮತ್ತಷ್ಟು ಶ್ರೀಮಂತಗೊಳಿಸಲು ಪ್ರಧಾನಿ ಮೋದಿಯವರು ಅಭೂತಪೂರ್ವ ಕೊಡುಗೆಯನ್ನು ನೀಡಿದ್ದಾರೆ. ಸುಧಾರಣಾವಾದಿಯಾಗಿ ಪ್ರಧಾನಿ ನರೇಂದ್ರ ಮೋದಿಯವರು ಕೇವಲ ರಾಜಕೀಯಕ್ಕೆ ಮಾತ್ರ ಹೊಸ ಮಾರ್ಗವನ್ನು ನೀಡಿಲ್ಲ. ಆರ್ಥಿಕ ಸುಧಾರಣೆಗಳೊಂದಿಗೆ ದಶಕಗಳಿಂದ ಇದ್ದ ಸಮಸ್ಯೆಗಳಿಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ಮೂಲಕ ಎಲ್ಲರಿಗೂ ಹೆಮ್ಮೆ ತಂದಿದ್ದಾರೆ.

ಪ್ರತಿಯೊಬ್ಬ ಭಾರತೀಯನ ಜೀವನವನ್ನು ಸುಲಭಗೊಳಿಸಲು ನಿಮ್ಮ ಕಠಿಣ ಪರಿಶ್ರಮ ಮತ್ತು ದೃಢ ನಿರ್ಣಯವು ನಮಗೆ ಸ್ಫೂರ್ತಿಯಾಗಿದೆ. ಸಾರ್ವಜನಿಕ ಪ್ರತಿನಿಧಿಯಾಗಿ, ಕೆಲಸಗಾರರಾಗಿ ಮತ್ತು ದೇಶವಾಸಿಗಳಾಗಿ ರಾಷ್ಟ್ರ ನಿರ್ಮಾಣದಲ್ಲಿ ನಿಮ್ಮೊಂದಿಗೆ ಪಾಲುದಾರರಾಗಿರುವುದೇ ಪುಣ್ಯ. ನಿಮ್ಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

19 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago