ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿ, ಭಾರತವನ್ನು ಅಸ್ಥಿರಗೊಳಿಸಬಹುದು ಎಂದು ನೆರೆಯ ದೇಶ ಭಾವಿಸಿದರೆ ಅದನ್ನು ಮರೆತು ಬಿಡಲಿ ಅದು ಸಾಧ್ಯವಿಲ್ಲ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.
ಯೋಧರ ಮೇಲೆ ದಾಳಿ ನಡೆಸಿ ಉಗ್ರರು ಭಾರೀ ದೊಡ್ಡ ತಪ್ಪು ಮಾಡಿದ್ದಾರೆ, ಅದಕ್ಕೆ ತಕ್ಕ ಬೆಲೆಯನ್ನು ಅವರು ತೆರಬೇಕಾಗುತ್ತದೆ ಇಂತಹ ಕೃತ್ಯಗಳಿಂದ ಭಾರತವನ್ನು ಅಸ್ಥಿರಗೊಳಿಸಬಹುದು ಎಂದು ಭಾವಿಸಿದ್ದರೆ ಅದು ಸಾಧ್ಯವಿಲ್ಲ ಎಂದಿದ್ದಾರೆ.
ದೇಶಕ್ಕೆ ನಾನು ಭರವಸೆ ನೀಡುತ್ತೇನೆ. ಈ ದಾಳಿ ಹಿಂದೆ ಯಾವ ಶಕ್ತಿ ಇದ್ದರೂ, ಯಾರೇ ಇದ್ದರೂ ಅವರು ಮಾಡಿದ ತಪ್ಪಿಗೆ ತಕ್ಕ ಶಿಕ್ಷೆ ನೀಡುತ್ತೇವೆ. ಈ ಸಮಯದಲ್ಲಿ ನಮ್ಮನ್ನು ನೆನಪಿಸಿಕೊಳ್ಳುತ್ತಿರುವವರ ಭಾವನೆಯನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು.
ತಾನು ನಿರ್ಮಿಸಿದ ದಾರಿಯಲ್ಲಿ ಪಾಕಿಸ್ತಾನ ಕೇವಲ ದಾಳಿ ನೋಡುತ್ತಾ ಬಂದಿದ್ದರೆ, ನಾವು ನಿರ್ಮಿಸಿದ ದಾರಿಯಲ್ಲಿ ಕೇವಲ ಅಭಿವೃದ್ಧಿ ನೋಡುತ್ತಾ ಬಂದಿದ್ದೇವೆ. ಭಾರತದ 130 ಕೋಟಿ ಜನರು ಸೇರಿ ಈ ರೀತಿಯ ದಾಳಿಗೆ ಸರಿಯಾದ ಉತ್ತರ ನೀಡುತ್ತಾರೆ ಎಂದರು.
ದೆಹಲಿಯಿಂದ ವಾರಣಾಸಿಗೆ ಸಂಚರಿಸುವ ಹೊಸ ಸೆಮಿ ಹೈ ಸ್ಪೀಡ್ ರೈಲು ವಂದೇ ಭಾರತ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಮೋದಿಯವರು ರೈಲಿಗೆ ಚಾಲನೆ ನೀಡುವುದಕ್ಕೆ ಮುನ್ನ ನೆರೆದಿದ್ದ ಗಣ್ಯರು ನಿನ್ನೆ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಎರಡು ನಿಮಿಷಗಳ ಕಾಲ ಮೌನಾಚರಣೆ ಸಲ್ಲಿಸಿದರು.ಇದೊಂದು ಭಾವನಾತ್ಮಕ ಮತ್ತು ಸೂಕ್ಷ್ಮ ಸಮಯ. ಆಡಳಿತದಲ್ಲಿರಲಿ ಅಥವಾ ವಿರೋಧ ಪಕ್ಷದಲ್ಲಿರಲಿ ಈ ಸಂದರ್ಭದಲ್ಲಿ ನಾವು ರಾಜಕೀಯದಿಂದ ದೂರವುಳಿಯಬೇಕು. ದೇಶದ ಎಲ್ಲರೂ ಒಂದಾಗಬೇಕು ಎಂದು ಕರೆ ನೀಡಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…