Featured

ಭಾರತವನ್ನು ಅಸ್ಥಿರಗೊಳಿಸಬಹುದೆಂದು ನೆರೆಯ ದೇಶ ಭಾವಿಸಿದರೆ ಆ ಕನಸನ್ನು ಬಿಟ್ಟುಬಿಡಿ : ಪಾಕಿಗೆ ಮೋದಿ ಎಚ್ಚರಿಕೆ – Vishwanews24

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿ, ಭಾರತವನ್ನು ಅಸ್ಥಿರಗೊಳಿಸಬಹುದು ಎಂದು ನೆರೆಯ ದೇಶ ಭಾವಿಸಿದರೆ ಅದನ್ನು ಮರೆತು ಬಿಡಲಿ ಅದು ಸಾಧ್ಯವಿಲ್ಲ ಎಂದು  ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.

ಯೋಧರ ಮೇಲೆ ದಾಳಿ ನಡೆಸಿ ಉಗ್ರರು ಭಾರೀ ದೊಡ್ಡ ತಪ್ಪು ಮಾಡಿದ್ದಾರೆ, ಅದಕ್ಕೆ ತಕ್ಕ ಬೆಲೆಯನ್ನು ಅವರು ತೆರಬೇಕಾಗುತ್ತದೆ ಇಂತಹ ಕೃತ್ಯಗಳಿಂದ ಭಾರತವನ್ನು ಅಸ್ಥಿರಗೊಳಿಸಬಹುದು ಎಂದು ಭಾವಿಸಿದ್ದರೆ ಅದು ಸಾಧ್ಯವಿಲ್ಲ ಎಂದಿದ್ದಾರೆ.

ದೇಶಕ್ಕೆ ನಾನು ಭರವಸೆ ನೀಡುತ್ತೇನೆ. ಈ ದಾಳಿ ಹಿಂದೆ ಯಾವ ಶಕ್ತಿ ಇದ್ದರೂ, ಯಾರೇ ಇದ್ದರೂ ಅವರು ಮಾಡಿದ ತಪ್ಪಿಗೆ ತಕ್ಕ ಶಿಕ್ಷೆ ನೀಡುತ್ತೇವೆ. ಈ ಸಮಯದಲ್ಲಿ ನಮ್ಮನ್ನು ನೆನಪಿಸಿಕೊಳ್ಳುತ್ತಿರುವವರ ಭಾವನೆಯನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದರು.

ತಾನು ನಿರ್ಮಿಸಿದ ದಾರಿಯಲ್ಲಿ ಪಾಕಿಸ್ತಾನ ಕೇವಲ ದಾಳಿ ನೋಡುತ್ತಾ ಬಂದಿದ್ದರೆ, ನಾವು ನಿರ್ಮಿಸಿದ ದಾರಿಯಲ್ಲಿ ಕೇವಲ ಅಭಿವೃದ್ಧಿ ನೋಡುತ್ತಾ ಬಂದಿದ್ದೇವೆ. ಭಾರತದ 130 ಕೋಟಿ ಜನರು ಸೇರಿ ಈ ರೀತಿಯ ದಾಳಿಗೆ ಸರಿಯಾದ ಉತ್ತರ ನೀಡುತ್ತಾರೆ ಎಂದರು.

ದೆಹಲಿಯಿಂದ ವಾರಣಾಸಿಗೆ ಸಂಚರಿಸುವ ಹೊಸ ಸೆಮಿ ಹೈ ಸ್ಪೀಡ್ ರೈಲು ವಂದೇ ಭಾರತ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಮೋದಿಯವರು ರೈಲಿಗೆ ಚಾಲನೆ ನೀಡುವುದಕ್ಕೆ ಮುನ್ನ ನೆರೆದಿದ್ದ ಗಣ್ಯರು ನಿನ್ನೆ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಎರಡು ನಿಮಿಷಗಳ ಕಾಲ ಮೌನಾಚರಣೆ ಸಲ್ಲಿಸಿದರು.ಇದೊಂದು ಭಾವನಾತ್ಮಕ ಮತ್ತು ಸೂಕ್ಷ್ಮ ಸಮಯ. ಆಡಳಿತದಲ್ಲಿರಲಿ ಅಥವಾ ವಿರೋಧ ಪಕ್ಷದಲ್ಲಿರಲಿ ಈ ಸಂದರ್ಭದಲ್ಲಿ ನಾವು ರಾಜಕೀಯದಿಂದ ದೂರವುಳಿಯಬೇಕು. ದೇಶದ ಎಲ್ಲರೂ ಒಂದಾಗಬೇಕು ಎಂದು ಕರೆ ನೀಡಿದರು.

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

8 hours ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

9 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

9 hours ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

10 hours ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

11 hours ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

11 hours ago