ಬೆಂಗಳೂರು: ಕಳೆದ 75 ವರ್ಷಗಳಲ್ಲಿ ಭಾರತವನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷವೇ ಹೊರತು ಒಂಬತ್ತು ವರ್ಷಗಳಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಭಾರತ್ ಜೋಡೊ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಹಾಗೂ ಮುಂಬರುವ ಲೋಕಸಭಾ ಚುನಾವಣಾ ಪೂರ್ವ ತಯಾರಿ ಸಭೆಯಲ್ಲಿ ಅವರು ಮಾತನಾಡಿ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಉದಾತ್ತ ಇತಿಹಾಸ ಕಾಂಗ್ರೆಸ್ ಗೆ ಇದೆ. ಇದಾದ ಮೇಲೆ ದೇಶದ ಚುಕ್ಕಾಣಿ ಹಿಡಿದ ಜವಾಹರ್ ಲಾಲ್ ನೆಹರು ಸೇರಿದಂತೆ ಅನೇಕರು ಅರ್ಥಪೂರ್ಣ ಕೆಲಸಗಳನ್ನು ಮಾಡುವ ಮೂಲಕ ಭಾರತವನ್ನು ದೈತ್ಯ ಆರ್ಥಿಕ ಶಕ್ತಿಯಾಗಿ ಬೆಳೆಸಿದರು. ಇದನ್ನು ಮೋದಿ ಸೇರಿದಂತೆ ಬಿಜೆಪಿ ನಾಯಕರು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
ದೇಶದಲ್ಲಿರುವ ಅಣೆಕಟ್ಟುಗಳಲ್ಲಿ ಶೇಕಡ 95 ರಷ್ಟು ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ಹಾಗೆಯೇ ಐಐಎಂ, ಐಐಟಿ, ಏಮ್ಸ್, ಕ್ಷೀರಕ್ರಾಂತಿ, ಕೃಷಿ ಕ್ರಾಂತಿ, ಡಿಜಿಟಲ್ ಕ್ರಾಂತಿ ಇವೆಲ್ಲವನ್ನು ಮಾಡಿದ್ದು ನಮ್ಮ ಪಕ್ಷವೇ ಹೊರತು ಕೋಮುವಾದಿ ರಾಜಕಾರಣ ಮಾಡುತ್ತಿರುವ ಮೋದಿಯಲ್ಲ. ಅವರೇನಿದ್ದರೂ ಚೆನ್ನಾಗಿ ಭಾಷಣ ಮಾಡಬಲ್ಲರು ಅಷ್ಟೇ ಎಂದು ವ್ಯಂಗ್ಯವಾಡಿದರು.
ದೇಶದಲ್ಲಿ ಬಡವರ ಸಬಲೀಕರಣ ಆಗಬೇಕೆಂಬ ಕನಸಿನೊಂದಿಗೆ ಆಹಾರ ಭದ್ರತೆ ಮತ್ತು ಕಡ್ಡಾಯ ಶಿಕ್ಷಣದ ಕಾಯ್ದೆಗಳನ್ನು ಜಾರಿಗೆ ತಂದ ಕೀರ್ತಿ ಕಾಂಗ್ರೆಸ್ಸಿನದೇ ಆಗಿದೆ ಎಂದರು.
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…
ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ…