ಬೆಂಗಳೂರು: ಕಳೆದ 75 ವರ್ಷಗಳಲ್ಲಿ ಭಾರತವನ್ನು ಕಟ್ಟಿದ್ದು ಕಾಂಗ್ರೆಸ್ ಪಕ್ಷವೇ ಹೊರತು ಒಂಬತ್ತು ವರ್ಷಗಳಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಭಾರತ್ ಜೋಡೊ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಹಾಗೂ ಮುಂಬರುವ ಲೋಕಸಭಾ ಚುನಾವಣಾ ಪೂರ್ವ ತಯಾರಿ ಸಭೆಯಲ್ಲಿ ಅವರು ಮಾತನಾಡಿ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಉದಾತ್ತ ಇತಿಹಾಸ ಕಾಂಗ್ರೆಸ್ ಗೆ ಇದೆ. ಇದಾದ ಮೇಲೆ ದೇಶದ ಚುಕ್ಕಾಣಿ ಹಿಡಿದ ಜವಾಹರ್ ಲಾಲ್ ನೆಹರು ಸೇರಿದಂತೆ ಅನೇಕರು ಅರ್ಥಪೂರ್ಣ ಕೆಲಸಗಳನ್ನು ಮಾಡುವ ಮೂಲಕ ಭಾರತವನ್ನು ದೈತ್ಯ ಆರ್ಥಿಕ ಶಕ್ತಿಯಾಗಿ ಬೆಳೆಸಿದರು. ಇದನ್ನು ಮೋದಿ ಸೇರಿದಂತೆ ಬಿಜೆಪಿ ನಾಯಕರು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
ದೇಶದಲ್ಲಿರುವ ಅಣೆಕಟ್ಟುಗಳಲ್ಲಿ ಶೇಕಡ 95 ರಷ್ಟು ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ. ಹಾಗೆಯೇ ಐಐಎಂ, ಐಐಟಿ, ಏಮ್ಸ್, ಕ್ಷೀರಕ್ರಾಂತಿ, ಕೃಷಿ ಕ್ರಾಂತಿ, ಡಿಜಿಟಲ್ ಕ್ರಾಂತಿ ಇವೆಲ್ಲವನ್ನು ಮಾಡಿದ್ದು ನಮ್ಮ ಪಕ್ಷವೇ ಹೊರತು ಕೋಮುವಾದಿ ರಾಜಕಾರಣ ಮಾಡುತ್ತಿರುವ ಮೋದಿಯಲ್ಲ. ಅವರೇನಿದ್ದರೂ ಚೆನ್ನಾಗಿ ಭಾಷಣ ಮಾಡಬಲ್ಲರು ಅಷ್ಟೇ ಎಂದು ವ್ಯಂಗ್ಯವಾಡಿದರು.
ದೇಶದಲ್ಲಿ ಬಡವರ ಸಬಲೀಕರಣ ಆಗಬೇಕೆಂಬ ಕನಸಿನೊಂದಿಗೆ ಆಹಾರ ಭದ್ರತೆ ಮತ್ತು ಕಡ್ಡಾಯ ಶಿಕ್ಷಣದ ಕಾಯ್ದೆಗಳನ್ನು ಜಾರಿಗೆ ತಂದ ಕೀರ್ತಿ ಕಾಂಗ್ರೆಸ್ಸಿನದೇ ಆಗಿದೆ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…