ಭಾರತವನ್ನು ಕಳೆದುಕೊಳ್ಳುವ ಭಯ ಬಂತು. ಅದಕ್ಕಾಗಿಯೇ ಸರಕಾರಿ ಸೇವೆಯಿಂದ ಹೊರಬಂದಿರುವೆ : ಸಸಿಕಾಂತ್ ಸೆಂಥಿಲ್ Vishwanews24

ಉಳ್ಳಾಲ, : ಹಿಂದೂ ರಾಷ್ಟ್ರ ಇನ್ನು ಒಂದು ಸಾವಿರ ವರ್ಷವಾದರೂ ಮಾಡಲು ಅಸಾಧ್ಯ. ಸಂವಿಧಾನ ಮುಟ್ಟಲು ಹೋದರೆ ಭಾರತೀಯರು ಸುಮ್ಮನಿರುವುದಿಲ್ಲ ಎಂದು ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅಭಿಪ್ರಾಯಪಟ್ಟರು.

ಉಳ್ಳಾಲ ಮುಸ್ಲಿಂ ಒಕ್ಕೂಟ ವತಿಯಿಂದ ಉಳ್ಳಾಲದ ಹಝ್ರತ್ ಶಾಲಾ ಮೈದಾನದಲ್ಲಿ ಜರಗಿದ ಎನ್ ಪಿ ಆರ್, ಎನ್ ಆರ್ ಸಿ ಹಾಗೂ ಸಿಎಎ ವಿರುದ್ಧ ಭಾನುವಾರ ಹಮ್ಮಿಕೊಳ್ಳಲಾದ ಬೃಹತ್ ಸಮಾನ ಮನಸ್ಕರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ದೇಶದಲ್ಲಿ ಸಂವಿಧಾನ ವಿರೋಧಿ ಕಾನೂನು ಜಾರಿಗೊಳಿಸುವ ಮೂಲಕ ಕೇಂದ್ರ ಸರಕಾರದ ನೀತಿಯಿಂದಾಗಿ ಇದುವರೆಗೆ ಕೈಯಲ್ಲಿ ತಿರಂಗಾ ಹಿಡಿಯದವನು ತಿರಂಗ ಹಿಡಿದಿದ್ದಾನೆ. ಪ್ರಜಾಪ್ರಭುತ್ವ ಏನು ಎಂಬುವುದನ್ನು ಕೇಂದ್ರ ತೋರಿಸಿಕೊಡಲು ಅವಕಾಶ ಕಲ್ಪಿಸಿದೆ. ಮಾಧ್ಯಮ, ವಿಶ್ವವಿದ್ಯಾಲಯಗಳನ್ನು ಕೈಯಲ್ಲಿ ಇಟ್ಟುಕೊಳ್ಳುತ್ತಾ ದೇಶವನ್ನು ಅಧೋಗತಿಯತ್ತ ಕೊಂಡೊಯ್ಯಲು ಹೊರಟಿದ್ದಾರೆ. ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಲು ರಾಜ್ಯವನ್ನೇ ಜೈಲಾಗಿ ಮಾಡಿ ಕಾನೂನು ಜಾರಿಗೆ ತಂದರು. ಇಲ್ಲಿಂದ ಭಾರತವನ್ನು ಕಳೆದುಕೊಳ್ಳುವ ಭಯ ಬಂತು. ಅದಕ್ಕಾಗಿಯೇ ಸರಕಾರಿ ಸೇವೆಯಿಂದ ಹೊರಬಂದಿರುವೆನು ಎಂದಿದ್ದಾರೆ.

ಪ್ರಧಾನಿ ರಾಷ್ಟ್ರೀಯ ಮಾಧ್ಯಮಗಳಲ್ಲಿ ಬರೀ ಸುಳ್ಳು ಹೇಳುತ್ತಿದ್ದಾರೆ. ಹಿಂದೂ ಅಲ್ಪಸಂಖ್ಯಾತರಿಗಾಗಿ ಕಾಯ್ದೆ ಅನ್ನುವ ಸುಳ್ಳು ಹೇಳುತ್ತಿದ್ದಾರೆ. ಆದರೆ ಜಾರಿಯಾದ ಕಾಯಿದೆಯಲ್ಲಿ ರಿಲೀಜಿಯಿಸ್ ಪರ್ಸಿಕ್ಯುಲೇಟಡ್ ಅನ್ನುವ ಪದವೇ ಇರಲಿಲ್ಲ. ಪ್ರಧಾನಿ ಹಾಗೂ ಗೃಹಮಂತ್ರಿ ನಡುವೆ ಚರ್ಚೆಯೇ ನಡೆಯದೇ, ದಿನಕ್ಕೊಂದು ಹೇಳಿಕೆಗಳನ್ನು ಜನತೆ ಮುಂದೆ ನೀಡುತ್ತಾ ಗೊಂದಲದ ವಾತಾವರಣ ಸೃಷ್ಟಿ ಮಾಡುತ್ತಿದ್ದಾರೆ. ಇದು ಭಾರತದ ಸೌಹಾರ್ದತೆಗೆ ಕಠಿಣ ಹಾಗೂ ವಿರೋಧಿ ಕಾನೂನು ಆಗಿದೆ. ನಾಯಕತ್ವ ಇಲ್ಲದೇ ಎಲ್ಲರೂ ಸಂವಿಧಾನ ಉಳಿಸಲು ಹೊರಬರುತ್ತಿದ್ದಾರೆ. ಎನ್ ಪಿ ಆರ್, ಎನ್ ಆರ್ ಸಿ ಮೂಲಕ ಜನರನ್ನು ಜನರಿಂದ ದೂರ ಮಾಡಿ, ದ್ವೇಷ ಹುಟ್ಟಿಸಿ, ಅವರಿಂದ ಮತ ಪಡೆಯಬೇಕು ಅನ್ನುವ ಹುನ್ನಾರ ಸರಕಾರಕ್ಕಿದೆ. ಕೇಂದ್ರ ಗಲಭೆ ಆಗಲು ಕಾಯುತ್ತಲೇ ಇದ್ದಾರೆ. 25 ದಿನಗಳವರೆಗೂ ಎಲ್ಲಿಯೂ ಆಗಿಲ್ಲ. ಇದರಿಂದ ಕೇಂದ್ರ ಸರಕಾರ ಸೋಲು ಅನುಭವಿಸಿದೆ. ಇದು ಕೋಪ ತೋರಿಸುವ ಸಮಯವಲ್ಲ, ಧೈರ್ಯ ತೋರಿಸುವ ಸಮಯ. ಗೃಹಸಚಿವರಿಗೆ ಈಗಾಗಲೇ ಪತ್ರ ಬರೆದಿದ್ದೇನೆ. ಎನ್ ಆರ್ ಸಿ ಕೇಳಿಕೊಂಡು ಮನೆವರಗೆ ಅಧಿಕಾರಿಗಳು ಬಂದಲ್ಲಿ ಯಾವುದೇ ದಾಖಲೆಗಳನ್ನು ದೇವರಾಣೆಗೂ ಕೊಡುವುದಿಲ್ಲ. ಜೈಲಿಗೆ ಹಾಕಿದರೂ ಸಿದ್ಧ ಎಂದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

4 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago