Featured

ಭಾರತವು ಆತ್ಮ ನಿರ್ಭರ ಭಾರತದ ಕನಸನ್ನುಸಾಕಾರಗೊಳಿಸುತ್ತದೆ ಭಾರತೀಯರ ಸಾಮರ್ಥ್ಯದ ಬಗ್ಗೆ ನನಗೆ ವಿಶ್ವಾಸವಿದೆ : ಕೆಂಪುಕೋಟೆಯಲ್ಲಿ ಪ್ರಧಾನಿ -Vishwanews24

ನವದೆಹಲಿ: ಭಾರತವು ಆತ್ಮ ನಿರ್ಭರ ಭಾರತದ ಕನಸನ್ನುಸಾಕಾರಗೊಳಿಸುತ್ತದೆ ಎನ್ನುವ ವಿಶ್ವಾಸ ನನಗಿದೆ. ಭಾರತೀಯರ ಸಾಮರ್ಥ್ಯದ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ರಾಜ್‌ಘಾಟ್‌ಗೆ ತೆರಳಿದ ಪ್ರಧಾನಿ ಮೋದಿ ಅವರು ಗಾಂಧೀಜಿ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಬಳಿಕ ಕೆಂಪುಕೋಟೆ ತಲುಪಿದ ಪ್ರಧಾನಿ ಅವರನ್ನು ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಸ್ವಾಗತಿಸಿದರು. ನಂತರ ಕೆಂಪುಕೋಟೆಯಲ್ಲಿ ಧ್ವಜ ವಂದನೆ ಸ್ವೀಕರಿಸಿದ ಅವರು, ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿ ಮಾತನಾಡಿದರು.

ಇಂದು 74ನೇ ಸ್ವಾತಂತ್ರ್ಯೋತ್ಸವ ವೇಳೆ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕೊರೊನಾವು ದೇಶದ ಉಜ್ವಲ ಭವಿಷ್ಯಕ್ಕೆ ಅಡ್ಡಿಯಾಗಿದೆ. ಕೊರೊನಾ ನಿಯಂತ್ರಣ ಮಾಡುವಲ್ಲಿ ಕೊರೊನಾ ಯೋಧರ ಹೋರಾಟ ಶ್ಲಾಘನೀಯವಾಗಿದೆ ಎಂದು ಹೇಳಿದರು.

ಈ ದಿನ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪು ಮಾಡುವ ದಿನವಾಗಿದೆ. ನಮ್ಮ ಭದ್ರತೆ ಮಾಡುತ್ತಿರು ಸೇನೆ ಸೇರಿದಂತೆ ಅರೆಸೈನಿಕ, ಪೊಲೀಸರು, ಭದ್ರತಾ ಸಿಬ್ಬಂದಿಗಳಿಗೆ ನನ್ನ ಕೃತಜ್ಞತೆಗಳು ಎಂದರು.

ನನಗೆ ದೇಶದ ಮಹಿಳೆಯರು ಮಕ್ಕಳ ಮೇಲೆ ವಿಶ್ವಾಸವಿದೆ. ಆತ್ಮ ನಿರ್ಭರ ಭಾರತವನ್ನು ನಾವು ಸಾಧಿಸುತ್ತೇವೆ ‌ಎನ್ನುವ ನಂಬಿಕೆಯಿದೆ. ಯುವ ಶಕ್ತಿಯಿಂದ ತುಂಬಿರುವಂತ ದೇಶ ಭಾರತ. ಆತ್ಮ ನಿರ್ಭರ ಭಾರತವು ದೇಶದ 130 ಕೋಟಿ ಜನರ ಮಂತ್ರವಾಗಿದೆ. ಭಾರತವು ಆತ್ಮ ನಿರ್ಭರ ಭಾರತವನ್ನು ಸಾಕಾರಗೊಳಿಸುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.

ಇಡೀ ಜಗತ್ತಿನ ಕಲ್ಯಾಣಕ್ಕಾಗಿ ಭಾರತವು ಆತ್ಮ ನಿರ್ಭರವಾಗಬೇಕಿದೆ. ಇದು ಕೃಷಿ ಕ್ಷೇತ್ರದಲ್ಲಿ ಕೂಡಾ ಸಾಧಿಸಿ ತೋರಿಸಿದೆ. ನಮ್ಮ ರೈತರು ದೇಶದ ಹೊಟ್ಟೆ ತುಂಬಿಸುತ್ತಿದ್ದಾರೆ. ಜಗತ್ತಿಗೆ ರೈತರು ನೀಡಿದ ಕೊಡುಗೆ ಅಪಾರವಾಗಿದೆ. ಈ ಸಂದರ್ಭ ವೋಕಲ್‌‌ ಫಾರ್‌‌ ಲೋಕಲ್‌‌ ಮಂತ್ರ ಜಪಿಸಿದ ಪ್ರಧಾನ ಮೋದಿ, ಸ್ಥಳೀಯ ಉತ್ಪನ್ನಗಳಿಗೆ ಪ್ರಾಶಸ್ತ್ಯ ನೀಡಲು ತಿಳಿಸಿದರು. ಇದರಿಂದ ಸ್ಥಳೀಯರಿಗೆ ಬೆಂಬಲ ದೊರಕುತ್ತದೆ ಎಂದು ಹೇಳಿದರು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

8 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

8 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago