ನವದೆಹಲಿ: ಭಾರತವು ಆತ್ಮ ನಿರ್ಭರ ಭಾರತದ ಕನಸನ್ನುಸಾಕಾರಗೊಳಿಸುತ್ತದೆ ಎನ್ನುವ ವಿಶ್ವಾಸ ನನಗಿದೆ. ಭಾರತೀಯರ ಸಾಮರ್ಥ್ಯದ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಜ್ಘಾಟ್ಗೆ ತೆರಳಿದ ಪ್ರಧಾನಿ ಮೋದಿ ಅವರು ಗಾಂಧೀಜಿ ಸಮಾಧಿಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಬಳಿಕ ಕೆಂಪುಕೋಟೆ ತಲುಪಿದ ಪ್ರಧಾನಿ ಅವರನ್ನು ರಕ್ಷಣ ಸಚಿವ ರಾಜನಾಥ್ ಸಿಂಗ್ ಸ್ವಾಗತಿಸಿದರು. ನಂತರ ಕೆಂಪುಕೋಟೆಯಲ್ಲಿ ಧ್ವಜ ವಂದನೆ ಸ್ವೀಕರಿಸಿದ ಅವರು, ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿ ಮಾತನಾಡಿದರು.
ಇಂದು 74ನೇ ಸ್ವಾತಂತ್ರ್ಯೋತ್ಸವ ವೇಳೆ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕೊರೊನಾವು ದೇಶದ ಉಜ್ವಲ ಭವಿಷ್ಯಕ್ಕೆ ಅಡ್ಡಿಯಾಗಿದೆ. ಕೊರೊನಾ ನಿಯಂತ್ರಣ ಮಾಡುವಲ್ಲಿ ಕೊರೊನಾ ಯೋಧರ ಹೋರಾಟ ಶ್ಲಾಘನೀಯವಾಗಿದೆ ಎಂದು ಹೇಳಿದರು.
ಈ ದಿನ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪು ಮಾಡುವ ದಿನವಾಗಿದೆ. ನಮ್ಮ ಭದ್ರತೆ ಮಾಡುತ್ತಿರು ಸೇನೆ ಸೇರಿದಂತೆ ಅರೆಸೈನಿಕ, ಪೊಲೀಸರು, ಭದ್ರತಾ ಸಿಬ್ಬಂದಿಗಳಿಗೆ ನನ್ನ ಕೃತಜ್ಞತೆಗಳು ಎಂದರು.
ನನಗೆ ದೇಶದ ಮಹಿಳೆಯರು ಮಕ್ಕಳ ಮೇಲೆ ವಿಶ್ವಾಸವಿದೆ. ಆತ್ಮ ನಿರ್ಭರ ಭಾರತವನ್ನು ನಾವು ಸಾಧಿಸುತ್ತೇವೆ ಎನ್ನುವ ನಂಬಿಕೆಯಿದೆ. ಯುವ ಶಕ್ತಿಯಿಂದ ತುಂಬಿರುವಂತ ದೇಶ ಭಾರತ. ಆತ್ಮ ನಿರ್ಭರ ಭಾರತವು ದೇಶದ 130 ಕೋಟಿ ಜನರ ಮಂತ್ರವಾಗಿದೆ. ಭಾರತವು ಆತ್ಮ ನಿರ್ಭರ ಭಾರತವನ್ನು ಸಾಕಾರಗೊಳಿಸುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ತಿಳಿಸಿದರು.
ಇಡೀ ಜಗತ್ತಿನ ಕಲ್ಯಾಣಕ್ಕಾಗಿ ಭಾರತವು ಆತ್ಮ ನಿರ್ಭರವಾಗಬೇಕಿದೆ. ಇದು ಕೃಷಿ ಕ್ಷೇತ್ರದಲ್ಲಿ ಕೂಡಾ ಸಾಧಿಸಿ ತೋರಿಸಿದೆ. ನಮ್ಮ ರೈತರು ದೇಶದ ಹೊಟ್ಟೆ ತುಂಬಿಸುತ್ತಿದ್ದಾರೆ. ಜಗತ್ತಿಗೆ ರೈತರು ನೀಡಿದ ಕೊಡುಗೆ ಅಪಾರವಾಗಿದೆ. ಈ ಸಂದರ್ಭ ವೋಕಲ್ ಫಾರ್ ಲೋಕಲ್ ಮಂತ್ರ ಜಪಿಸಿದ ಪ್ರಧಾನ ಮೋದಿ, ಸ್ಥಳೀಯ ಉತ್ಪನ್ನಗಳಿಗೆ ಪ್ರಾಶಸ್ತ್ಯ ನೀಡಲು ತಿಳಿಸಿದರು. ಇದರಿಂದ ಸ್ಥಳೀಯರಿಗೆ ಬೆಂಬಲ ದೊರಕುತ್ತದೆ ಎಂದು ಹೇಳಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…