ನವದೆಹಲಿ: ಭಾರತವು ಯಾವುದೇ ದೇಶ ಅಥವಾ ಸಮಾಜಕ್ಕೆ ಎಂದಿಗೂ ಬೆದರಿಕೆಯೊಡ್ಡಿಲ್ಲ ಮತ್ತು ಜಾಗತಿಕ ಸಂಘರ್ಷಗಳ ನಡುವೆಯೂ ಅದು ಇಡೀ ಪ್ರಪಂಚದ ಕಲ್ಯಾಣಕ್ಕಾಗಿ ಯೋಚಿಸುತ್ತಿದೆ ಎಂದು ಗುರುವಾರ ಹೇಳಿದ ಪ್ರಧಾನಿ ನರೇಂದ್ರ ಮೋದಿ, ದೇಶವು ಸಿಖ್ ಗುರುಗಳ ಆದರ್ಶಗಳನ್ನು ಅನುಸರಿಸುತ್ತಿದೆ ಎಂದು ಪ್ರತಿಪಾದಿಸಿದರು.
ಸಿಖ್ ಗುರು ತೇಜ್ ಬಹದ್ದೂರ್ ಅವರ 400 ನೇ ಜನ್ಮದಿನ ಅಂಗವಾಗಿ ಕೆಂಪು ಕೋಟೆಯಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮೋದಿ, ಕೆಂಪು ಕೋಟೆಯ ಸಮೀಪವಿರುವ ಗುರುದ್ವಾರ ಸಿಸ್ ಗಂಜ್ ಸಾಹಿಬ್ ಗುರು ತೇಜ್ ಬಹದ್ದೂರ್ ಅವರ ಅಮರ ತ್ಯಾಗದ ಸಂಕೇತವಾಗಿದೆ ಎಂದರು.
ಈ ಪವಿತ್ರ ಗುರುದ್ವಾರವು ನಮ್ಮ ಶ್ರೇಷ್ಠ ಸಂಸ್ಕೃತಿಯನ್ನು ರಕ್ಷಿಸಲು ಗುರು ತೇಜ್ ಬಹದ್ದೂರ್ ಜಿ ಅವರ ತ್ಯಾಗ ಎಷ್ಟು ದೊಡ್ಡದಾಗಿದೆ ಎಂಬುದನ್ನು ನೆನಪಿಸುತ್ತದೆ. ಆ ಸಮಯದಲ್ಲಿ ದೇಶದಲ್ಲಿ ಧರ್ಮಾಂಧತೆಯ ಬಿರುಗಾಳಿ ಎದ್ದಿತ್ತು. ಧರ್ಮವನ್ನು ತತ್ವಶಾಸ್ತ್ರ, ವಿಜ್ಞಾನ ಮತ್ತು ಆತ್ಮಾವಲೋಕನದ ವಿಷಯವಾಗಿ ಪರಿಗಣಿಸಿದ ಭಾರತದಲ್ಲಿ ಧರ್ಮದ ಹೆಸರಿನಲ್ಲಿ ಜನರು ಹಿಂಸೆ ಮತ್ತು ದೌರ್ಜನ್ಯ ಎದುರಿಸುತ್ತಿದ್ದರು ಎಂದು ಹೇಳಿದರು.
ಆ ಸಮಯದಲ್ಲಿ, ಗುರು ತೇಜ್ ಬಹದ್ದೂರ್ ರೂಪದಲ್ಲಿ ತನ್ನ ಗುರುತನ್ನು ಉಳಿಸಿಕೊಳ್ಳಲು ಭಾರತಕ್ಕೆ ದೊಡ್ಡ ಭರವಸೆ ಇತ್ತು ಎಂದು ರಂಗಜೇಬನ ದಬ್ಬಾಳಿಕೆಯ ಚಿಂತನೆಯ ಮುಂದೆ ಗುರು ತೇಜ್ ಬಹದ್ದೂರ್ ಜೀ ‘ಹಿಂದ್ ಚಾದರ್’ ಆಗಿ ಬಂಡೆಯಂತೆ ನಿಂತರು’ ಎಂದು ಮೋದಿ ತಿಳಿಸಿದರು.
ಭಾರತವು ಯಾವುದೇ ದೇಶ ಅಥವಾ ಸಮಾಜಕ್ಕೆ ಎಂದಿಗೂ ಅಪಾಯವನ್ನು ತಂದಿಲ್ಲ. ಇಂದಿಗೂ ನಾವು ಇಡೀ ಪ್ರಪಂಚದ ಕಲ್ಯಾಣಕ್ಕಾಗಿ ಯೋಚಿಸುತ್ತೇವೆ. ನಾವು ಸ್ವಾವಲಂಬಿ ಭಾರತದ ಬಗ್ಗೆ ಮಾತನಾಡುವಾಗ, ನಾವು ಇಡೀ ಪ್ರಪಂಚದ ಪ್ರಗತಿಯನ್ನು ಆ ಗುರಿಯ ಮುಂದೆ ಇಡುತ್ತೇವೆ ಎಂದು ಅವರು ಹೇಳಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…