ನವದೆಹಲಿ,: ದೇಶದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾವನ್ನು ಕಡ್ಡಾಯವಾಗಿ ನಿಷೇಧ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿವಸೇನಾ ಆಗ್ರಹಿಸಿದೆ.
ಶ್ರೀಲಂಕಾದಲ್ಲಿ ಉಗ್ರರ ದಾಳಿಯ ಬಳಿಕ ಬುರ್ಖಾ ಧರಿಸಿ ಓಡಾಡುವುದನ್ನು ನಿಷೇಧಿಸಿದ ಬೆನ್ನಲ್ಲೇ ಶಿವಸೇನಾ ಈ ಒತ್ತಾಯ ಮಾಡಿದೆ.
ಭಾರತವೂ ಶ್ರೀಲಂಕಾದ ಮಾದರಿಯನ್ನೇ ಅನುಸರಿಸಿ ಬುರ್ಖಾ ನಿಷೇಧ ಮಾಡಬೇಕು ಎಂದು ಬಿಜೆಪಿಯ ಮಿತ್ರಪಕ್ಷ ಶಿವಸೇನಾ ತನ್ನ ಮುಖವಾಣಿ ‘ಸಾಮ್ನಾ’ ಪತ್ರಿಕೆಯ ಸಂಪಾದಕೀಯದಲ್ಲಿ ಹೇಳಿದೆ.
ಭಾರತದಲ್ಲಿ ತ್ರಿವಳಿ ತಲಾಖ್ ಮಾತ್ರವಲ್ಲ, ಬುರ್ಖಾವನ್ನೂ ಕೂಡ ಈಗ ನಿಷೇಧ ಮಾಡಬೇಕಿದೆ. ರಾವಣದ ರಾಜ್ಯವಾದ ಶ್ರೀಲಂಕಾದಲ್ಲಿ ಬುರ್ಖಾ ನಿಷೇಧ ಆಗಿರಬೇಕಾದರೆ, ರಾಮನ ದೇಶವಾಗಿರುವ ಭಾರತದಲ್ಲಿ ಏಕೆ ಅದನ್ನು ಜಾರಿಗೊಳಿಸಲು ಸಾಧ್ಯವಿಲ್ಲ? ಎಂದು ಶಿವಸೇನಾ ಪ್ರಶ್ನಿಸಿದೆ.
ಮಂಗಳವಾರ ಬಲಪಂಥೀಯ ಸಂಘಟನೆ ಹಿಂದೂ ಸೇನಾ ಗೃಹಸಚಿವಾಲಯಕ್ಕೆ ಪತ್ರ ಬರೆದಿತ್ತು. ದೇಶದಲ್ಲಿ ಮುಖ ಮುಚ್ಚುವ ದಿರಿಸುಗಳನ್ನು, ಬುರ್ಖಾ ಮತ್ತು ನಿಕಾಬ್ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕೆಂದು ಒತ್ತಾಯಿಸಿತ್ತು.
‘ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಒಳಗೆ ಬುರ್ಖಾ, ನಿಕಾಬ್ನಂತಹ ಸಂಪೂರ್ಣ ಮುಖ ಮುಚ್ಚುವ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಬೇಕು. ಈ ರೀತಿಯ ತಲೆಯನ್ನು ಸಂಪೂರ್ಣವಾಗಿ ಮುಚ್ಚುವ ಉಡುಪುಗಳು ಉಗ್ರರು ತಮ್ಮ ಗುರುತನ್ನು ಸಿಸಿಟಿವಿ ಕ್ಯಾಮೆರಾಗಳಿಂದ ಮುಚ್ಚಿಡಲು ನೆರವಾಗುತ್ತವೆ. ಶ್ರೀಲಂಕಾ ಈಗಾಗಲೇ ಈ ನೀತಿಯನ್ನು ಜಾರಿ ಮಾಡಿದೆ’ ಎಂದು ಪತ್ರದಲ್ಲಿ ಹೇಳಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…