Featured

ಭಾರತವೂ ಶ್ರೀಲಂಕಾದ ಮಾದರಿಯನ್ನೇ ಅನುಸರಿಸಿ ಬುರ್ಖಾ ನಿಷೇಧ ಮಾಡಬೇಕು : ಶಿವಸೇನಾ ಆಗ್ರಹ -Vishwanews24

ನವದೆಹಲಿ,: ದೇಶದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾವನ್ನು ಕಡ್ಡಾಯವಾಗಿ ನಿಷೇಧ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿವಸೇನಾ ಆಗ್ರಹಿಸಿದೆ.

ಶ್ರೀಲಂಕಾದಲ್ಲಿ ಉಗ್ರರ ದಾಳಿಯ ಬಳಿಕ ಬುರ್ಖಾ ಧರಿಸಿ ಓಡಾಡುವುದನ್ನು ನಿಷೇಧಿಸಿದ ಬೆನ್ನಲ್ಲೇ ಶಿವಸೇನಾ ಈ ಒತ್ತಾಯ ಮಾಡಿದೆ.

ಭಾರತವೂ ಶ್ರೀಲಂಕಾದ ಮಾದರಿಯನ್ನೇ ಅನುಸರಿಸಿ ಬುರ್ಖಾ ನಿಷೇಧ ಮಾಡಬೇಕು ಎಂದು ಬಿಜೆಪಿಯ ಮಿತ್ರಪಕ್ಷ ಶಿವಸೇನಾ ತನ್ನ ಮುಖವಾಣಿ ‘ಸಾಮ್ನಾ’ ಪತ್ರಿಕೆಯ ಸಂಪಾದಕೀಯದಲ್ಲಿ ಹೇಳಿದೆ.

ಭಾರತದಲ್ಲಿ ತ್ರಿವಳಿ ತಲಾಖ್ ಮಾತ್ರವಲ್ಲ, ಬುರ್ಖಾವನ್ನೂ ಕೂಡ ಈಗ ನಿಷೇಧ ಮಾಡಬೇಕಿದೆ. ರಾವಣದ ರಾಜ್ಯವಾದ ಶ್ರೀಲಂಕಾದಲ್ಲಿ ಬುರ್ಖಾ ನಿಷೇಧ ಆಗಿರಬೇಕಾದರೆ, ರಾಮನ ದೇಶವಾಗಿರುವ ಭಾರತದಲ್ಲಿ ಏಕೆ ಅದನ್ನು ಜಾರಿಗೊಳಿಸಲು ಸಾಧ್ಯವಿಲ್ಲ? ಎಂದು ಶಿವಸೇನಾ ಪ್ರಶ್ನಿಸಿದೆ.

ಮಂಗಳವಾರ ಬಲಪಂಥೀಯ ಸಂಘಟನೆ ಹಿಂದೂ ಸೇನಾ ಗೃಹಸಚಿವಾಲಯಕ್ಕೆ ಪತ್ರ ಬರೆದಿತ್ತು. ದೇಶದಲ್ಲಿ ಮುಖ ಮುಚ್ಚುವ ದಿರಿಸುಗಳನ್ನು, ಬುರ್ಖಾ ಮತ್ತು ನಿಕಾಬ್‌ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕೆಂದು ಒತ್ತಾಯಿಸಿತ್ತು.

‘ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಒಳಗೆ ಬುರ್ಖಾ, ನಿಕಾಬ್‌ನಂತಹ ಸಂಪೂರ್ಣ ಮುಖ ಮುಚ್ಚುವ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಬೇಕು. ಈ ರೀತಿಯ ತಲೆಯನ್ನು ಸಂಪೂರ್ಣವಾಗಿ ಮುಚ್ಚುವ ಉಡುಪುಗಳು ಉಗ್ರರು ತಮ್ಮ ಗುರುತನ್ನು ಸಿಸಿಟಿವಿ ಕ್ಯಾಮೆರಾಗಳಿಂದ ಮುಚ್ಚಿಡಲು ನೆರವಾಗುತ್ತವೆ. ಶ್ರೀಲಂಕಾ ಈಗಾಗಲೇ ಈ ನೀತಿಯನ್ನು ಜಾರಿ ಮಾಡಿದೆ’ ಎಂದು ಪತ್ರದಲ್ಲಿ ಹೇಳಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

31 minutes ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

51 minutes ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

60 minutes ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

1 hour ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

1 hour ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

3 hours ago