ನವದೆಹಲಿ,: ದೇಶದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾವನ್ನು ಕಡ್ಡಾಯವಾಗಿ ನಿಷೇಧ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿವಸೇನಾ ಆಗ್ರಹಿಸಿದೆ.
ಶ್ರೀಲಂಕಾದಲ್ಲಿ ಉಗ್ರರ ದಾಳಿಯ ಬಳಿಕ ಬುರ್ಖಾ ಧರಿಸಿ ಓಡಾಡುವುದನ್ನು ನಿಷೇಧಿಸಿದ ಬೆನ್ನಲ್ಲೇ ಶಿವಸೇನಾ ಈ ಒತ್ತಾಯ ಮಾಡಿದೆ.
ಭಾರತವೂ ಶ್ರೀಲಂಕಾದ ಮಾದರಿಯನ್ನೇ ಅನುಸರಿಸಿ ಬುರ್ಖಾ ನಿಷೇಧ ಮಾಡಬೇಕು ಎಂದು ಬಿಜೆಪಿಯ ಮಿತ್ರಪಕ್ಷ ಶಿವಸೇನಾ ತನ್ನ ಮುಖವಾಣಿ ‘ಸಾಮ್ನಾ’ ಪತ್ರಿಕೆಯ ಸಂಪಾದಕೀಯದಲ್ಲಿ ಹೇಳಿದೆ.
ಭಾರತದಲ್ಲಿ ತ್ರಿವಳಿ ತಲಾಖ್ ಮಾತ್ರವಲ್ಲ, ಬುರ್ಖಾವನ್ನೂ ಕೂಡ ಈಗ ನಿಷೇಧ ಮಾಡಬೇಕಿದೆ. ರಾವಣದ ರಾಜ್ಯವಾದ ಶ್ರೀಲಂಕಾದಲ್ಲಿ ಬುರ್ಖಾ ನಿಷೇಧ ಆಗಿರಬೇಕಾದರೆ, ರಾಮನ ದೇಶವಾಗಿರುವ ಭಾರತದಲ್ಲಿ ಏಕೆ ಅದನ್ನು ಜಾರಿಗೊಳಿಸಲು ಸಾಧ್ಯವಿಲ್ಲ? ಎಂದು ಶಿವಸೇನಾ ಪ್ರಶ್ನಿಸಿದೆ.
ಮಂಗಳವಾರ ಬಲಪಂಥೀಯ ಸಂಘಟನೆ ಹಿಂದೂ ಸೇನಾ ಗೃಹಸಚಿವಾಲಯಕ್ಕೆ ಪತ್ರ ಬರೆದಿತ್ತು. ದೇಶದಲ್ಲಿ ಮುಖ ಮುಚ್ಚುವ ದಿರಿಸುಗಳನ್ನು, ಬುರ್ಖಾ ಮತ್ತು ನಿಕಾಬ್ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಸಂಪೂರ್ಣವಾಗಿ ನಿಷೇಧಿಸಬೇಕೆಂದು ಒತ್ತಾಯಿಸಿತ್ತು.
‘ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಒಳಗೆ ಬುರ್ಖಾ, ನಿಕಾಬ್ನಂತಹ ಸಂಪೂರ್ಣ ಮುಖ ಮುಚ್ಚುವ ವಸ್ತ್ರಗಳನ್ನು ಧರಿಸುವುದನ್ನು ನಿಷೇಧಿಸಬೇಕು. ಈ ರೀತಿಯ ತಲೆಯನ್ನು ಸಂಪೂರ್ಣವಾಗಿ ಮುಚ್ಚುವ ಉಡುಪುಗಳು ಉಗ್ರರು ತಮ್ಮ ಗುರುತನ್ನು ಸಿಸಿಟಿವಿ ಕ್ಯಾಮೆರಾಗಳಿಂದ ಮುಚ್ಚಿಡಲು ನೆರವಾಗುತ್ತವೆ. ಶ್ರೀಲಂಕಾ ಈಗಾಗಲೇ ಈ ನೀತಿಯನ್ನು ಜಾರಿ ಮಾಡಿದೆ’ ಎಂದು ಪತ್ರದಲ್ಲಿ ಹೇಳಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…