ನವದೆಹಲಿ: ಕೆನಡಾದ ಪೌರತ್ವದ ಬಗ್ಗೆ ಆಗಾಗ್ಗೆ ಟೀಕೆಗಳನ್ನು ಎದುರಿಸುತ್ತಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ʻಭಾರತವೇ ನನಗೆ ಸರ್ವಸ್ವವಾಗಿದ್ದು, ಕೆನಡಾದ ಪೌರತ್ವ ಬದಲಾವಣೆಗೆ ಈಗಾಗಲೇ ಅರ್ಜಿ ಸಲ್ಲಿಸಿದ್ದೇನೆʼ ಎಂದು ಹೇಳಿದ್ದಾರೆ.
ಹಲವು ವರ್ಷಗಳಿಂದ ಭಾರತದಲ್ಲೇ ನೆಲೆಯೂರಿರುವ, ಭಾರತದವರೇ ಆಗಿರುವ ಅಕ್ಷಯ್ ಕುಮಾರ್ ಈವರೆಗೂ ಭಾರತದ ಪೌರತ್ವನ್ನು ಹೊಂದಿರಲಿಲ್ಲ. ಹಾಗಾಗಿ ಪೌರತ್ವದ ವಿಷಯದಲ್ಲಿ ಪದೇ ಪದೇ ಟೀಕೆಗೆ ಒಳಗಾಗುತ್ತಿದ್ದರು.
ಆದ್ರೆ, ಇದೀಗ ಕೆನಡಾ ಪೌರತ್ವ ಬದಲಾಯಿಸಲು ನಿರ್ಧರಿಸಿರುವುದಾಗಿ ಸ್ವತಃ ಅವರೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅಕ್ಷಯ್, ʻಭಾರತವೇ ನನಗೆ ಸರ್ವಸ್ವ. ಅದು ಎಲ್ಲವನ್ನೂ ನನಗೆ ಕೊಟ್ಟಿದೆ. ನಾನು ಇಲ್ಲಿಯವನು ಎಂದು ಹೇಳಿಕೊಳ್ಳಲು ಹೆಮ್ಮೆ ಅನಿಸುತ್ತದೆ. ನಾನು ಗಳಿಸಿದ್ದೆಲ್ಲ ಇಲ್ಲಿಂದ, ಅದನ್ನು ಮರಳಿ ಕೊಡುವ ಅವಕಾಶ ಸಿಕ್ಕಿರುವುದು ನನ್ನ ಅದೃಷ್ಟ. ಆದ್ರೆ, ಜನರು ಅದನ್ನು ತಿಳಿಯದೇ ಮಾತನಾಡೋದು ಬೇಸರವಾಗುತ್ತದೆʼ ಎಂದಿದ್ದಾರೆ.
1990ರ ದಶಕದಲ್ಲಿ ಅಕ್ಷಯ್ ಬಹುತೇಕ ಚಿತ್ರಗಳು ಬಾಕ್ಸ್ ಆಫೀಸಿನಲ್ಲಿ ಮಕಾಡೆ ಮಲಗಿದವು. ರಿಲೀಸ್ ಆದ ಅಷ್ಟೂ ಸಿನಿಮಾಗಳು ಸೋತವು. ಈ ಕಾರಣದಿಂದಾಗಿ ಅವರು ಕೆನಡಾ ಪೌರತ್ವಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಹೇಳಿಕೊಂಡಿದ್ದಾರೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…