Featured

ಭಾರತೀಯರ ವಿರುದ್ಧ ಜಿಹಾದ್ ಆರಂಭಿಸಲು ಮಸೂದ್ ಅಜರ್ ಕರೆ – Vishwanews24

ಇಸ್ಲಾಮಾಬಾದ್ :,- ಜೈಷ್ ಎ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಉಗ್ರ ಮಸೂದ್ ಅಜರ್ ಆಡಿಯೋ ಧ್ವನಿಮುದ್ರಿಕೆಯನ್ನು ಬಿಡಗುಡೆ ಮಾಡಿದ್ದು, ಭಾರತಕ್ಕೆ ಬೇಕಾಗಿರುವ ಉಗ್ರ ಮಸೂದ್ ಅಜರ್ ಇನ್ನೂ ಬದುಕಿದ್ದೇನೆ. ಚೆನ್ನಾಗಿಯೇ ಇದ್ದೇನೆ ಎಂದಿದ್ದಾನೆ.

ಅಷ್ಟೇ ಅಲ್ಲದೆ ತನ್ನ ಹಿಂಬಾಲಕರಿಗೆ ಭಾರತೀಯರ ವಿರುದ್ಧ ಜಿಹಾದ್ ಆರಂಭಿಸಬೇಕು ಎಂದು ಕರೆ ನೀಡಿದ್ದಾನೆ. 11.41 ನಿಮಿಷಗಳ ತನ್ನಆಡಿಯೋದಲ್ಲಿ, ಪುಲ್ವಾಮಾ ದಾಳಿ ಹಾಗೂ ಪಾಕ್‍ನಲ್ಲಿರುವ ಪ್ರಗತಿಪರರ ಬಗ್ಗೆ ಮಾತನಾಡಿದ್ದು, ಮಾಧ್ಯಮಗಳಲ್ಲಿ ಹರಡುತ್ತಿರುವ ತನ್ನ ಸಾವಿನ ಕುರಿತು ಸುಳ್ಳು ವದಂತಿ ಬಗ್ಗೆ ಪ್ರಸ್ತಾಪಿಸಿದ್ದು, ನಾನು ಇನ್ನು ಬದುಕಿದ್ದೇನೆ ಎಂದ್ದಿದಾನೆ.

ಪಾಕಿಸ್ತಾನಕ್ಕೆ ಎಲ್ಲ ಕಡೆಗಳಿಂದಲೂ ಒತ್ತಡ ಹಾಕುತ್ತಿರುವ ಭಾರತದ ವಿರುದ್ಧ ಹರಿಹಾಯ್ದಿರುವ ಅಜರ್, ಭಾರತದ ಒತ್ತಡಕ್ಕೆ ಮಣಿದಿರುವ ಪಾಕಿಸ್ತಾನದ ಬಗ್ಗೆಯೂ ಕಿಡಿಕಾರಿದ್ದಾನೆ. ಜೊತೆಗೆ ಭಾರತದ ತಂತ್ರವನ್ನು ಅರ್ಥಮಾಡಿಕೊಳ್ಳುವಲ್ಲಿ ಪಾಕಿಸ್ತಾನ ರಾಜಕೀಯ ವಿಫಲವಾಗಿದೆ ಎಂದಿದ್ದಾನೆ.

ಭಾರತದಲ್ಲಿ ಭಯೋತ್ಪಾದನೆ ಮೂಲಕ ಅನೇಕ ವಿಧ್ವಂಸಕ ಕೃತ್ಯಗಳಿಗೆ ಕಾರಣವಾಗಿದ್ದ ಪಾಕಿಸ್ತಾನದ ಜೈಷ್-ಎ-ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಮತ್ತು ಕುಖ್ಯಾತ ಭಯೋತ್ಪಾದಕ ಮೌಲಾನಾ ಮಸೂದ್ ಅಜರ್ ಮೃತಪಟ್ಟಿದ್ದಾನೆ ಎಂಬ ಸುದ್ದಿ ಇತ್ತೀಚೆಗಷ್ಟೇ ಹರಿದಾಡಿತ್ತು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago