Featured

ಭಾರತೀಯರ ವಿರುದ್ಧ ಜಿಹಾದ್ ಆರಂಭಿಸಲು ಮಸೂದ್ ಅಜರ್ ಕರೆ – Vishwanews24

ಇಸ್ಲಾಮಾಬಾದ್ :,- ಜೈಷ್ ಎ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಉಗ್ರ ಮಸೂದ್ ಅಜರ್ ಆಡಿಯೋ ಧ್ವನಿಮುದ್ರಿಕೆಯನ್ನು ಬಿಡಗುಡೆ ಮಾಡಿದ್ದು, ಭಾರತಕ್ಕೆ ಬೇಕಾಗಿರುವ ಉಗ್ರ ಮಸೂದ್ ಅಜರ್ ಇನ್ನೂ ಬದುಕಿದ್ದೇನೆ. ಚೆನ್ನಾಗಿಯೇ ಇದ್ದೇನೆ ಎಂದಿದ್ದಾನೆ.

ಅಷ್ಟೇ ಅಲ್ಲದೆ ತನ್ನ ಹಿಂಬಾಲಕರಿಗೆ ಭಾರತೀಯರ ವಿರುದ್ಧ ಜಿಹಾದ್ ಆರಂಭಿಸಬೇಕು ಎಂದು ಕರೆ ನೀಡಿದ್ದಾನೆ. 11.41 ನಿಮಿಷಗಳ ತನ್ನಆಡಿಯೋದಲ್ಲಿ, ಪುಲ್ವಾಮಾ ದಾಳಿ ಹಾಗೂ ಪಾಕ್‍ನಲ್ಲಿರುವ ಪ್ರಗತಿಪರರ ಬಗ್ಗೆ ಮಾತನಾಡಿದ್ದು, ಮಾಧ್ಯಮಗಳಲ್ಲಿ ಹರಡುತ್ತಿರುವ ತನ್ನ ಸಾವಿನ ಕುರಿತು ಸುಳ್ಳು ವದಂತಿ ಬಗ್ಗೆ ಪ್ರಸ್ತಾಪಿಸಿದ್ದು, ನಾನು ಇನ್ನು ಬದುಕಿದ್ದೇನೆ ಎಂದ್ದಿದಾನೆ.

ಪಾಕಿಸ್ತಾನಕ್ಕೆ ಎಲ್ಲ ಕಡೆಗಳಿಂದಲೂ ಒತ್ತಡ ಹಾಕುತ್ತಿರುವ ಭಾರತದ ವಿರುದ್ಧ ಹರಿಹಾಯ್ದಿರುವ ಅಜರ್, ಭಾರತದ ಒತ್ತಡಕ್ಕೆ ಮಣಿದಿರುವ ಪಾಕಿಸ್ತಾನದ ಬಗ್ಗೆಯೂ ಕಿಡಿಕಾರಿದ್ದಾನೆ. ಜೊತೆಗೆ ಭಾರತದ ತಂತ್ರವನ್ನು ಅರ್ಥಮಾಡಿಕೊಳ್ಳುವಲ್ಲಿ ಪಾಕಿಸ್ತಾನ ರಾಜಕೀಯ ವಿಫಲವಾಗಿದೆ ಎಂದಿದ್ದಾನೆ.

ಭಾರತದಲ್ಲಿ ಭಯೋತ್ಪಾದನೆ ಮೂಲಕ ಅನೇಕ ವಿಧ್ವಂಸಕ ಕೃತ್ಯಗಳಿಗೆ ಕಾರಣವಾಗಿದ್ದ ಪಾಕಿಸ್ತಾನದ ಜೈಷ್-ಎ-ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥ ಮತ್ತು ಕುಖ್ಯಾತ ಭಯೋತ್ಪಾದಕ ಮೌಲಾನಾ ಮಸೂದ್ ಅಜರ್ ಮೃತಪಟ್ಟಿದ್ದಾನೆ ಎಂಬ ಸುದ್ದಿ ಇತ್ತೀಚೆಗಷ್ಟೇ ಹರಿದಾಡಿತ್ತು.

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago