ಭಾರತ ಅಂಚೆ ಇಲಾಖೆಯು ಇಂಡಿಯಾ ಪೋಸ್ಟ್ ಗ್ರಾಮೀಣ್ ಡಾಕ್ ಸೇವಾ ಜಿಡಿಎಸ್ ಪೋಸ್ಟ್ ಗೆ ನೇಮಕಾತಿಗಾಗಿ ಅಧಿಕೃತ ವೆಬ್ಸೈಟ್ನಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಸುಮಾರು 28000+ ಹುದ್ದೆಗಳಿಗೆ ಆಗುತ್ತಿದೆ. ಭಾರತ ಅಂಚೆ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯು 2026 ಜನವರಿ 31ರಂದು ಪ್ರಾರಂಭವಾಗಿದೆ ಮತ್ತು ಅಭ್ಯರ್ಥಿಗಳು 2026 ಫೆಬ್ರವರಿ 14ರವರೆಗೆ ಅರ್ಜಿ ಸಲ್ಲಿಸಬಹುದು. ಅಗತ್ಯವಿರುವ ಕನಿಷ್ಠ ವಯಸ್ಸು 2026 ಜನವರಿ 01ರಂತೆ 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 40 ವರ್ಷಗಳು. ಅಭ್ಯರ್ಥಿಗಳು ಭಾರತ ಅಂಚೆ ಜಿಡಿಎಸ್ ನೇಮಕಾತಿ 2026 ಗಾಗಿ ಸಂಪೂರ್ಣ ವಿವರಗಳನ್ನು ಕೆಳಗೆ ಪರಿಶೀಲಿಸಬೇಕು. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ನಲ್ಲಿ ಅರ್ಜಿ ಸಲ್ಲಿಸಬಹುದು:
https://indiapost.gov.in/gdsonlineengagement
ಪ್ರಮುಖ ದಿನಾಂಕಗಳು
ಅಧಿಸೂಚನೆ ದಿನಾಂಕ: 30 ಜನವರಿ 2026
ಆನ್ಲೈನ್ ಅರ್ಜಿ ಆರಂಭ: 31 ಜನವರಿ 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14 ಫೆಬ್ರವರಿ 2026
ಶುಲ್ಕ ಪಾವತಿಗೆ ಕೊನೆಯ ದಿನಾಂಕ: 16 ಫೆಬ್ರವರಿ 2026
ತಿದ್ದುಪಡಿ ದಿನಾಂಕ: 18 – 19 ಫೆಬ್ರವರಿ 2026
ಮೆರಿಟ್ ಪಟ್ಟಿ: ಶೀಘ್ರವೇ ಅಪ್ಡೇಟ್ ಮಾಡಲಾಗುವುದು.
ವಿವರಗಳಿಗೆ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್ ಜಿಡಿಎಸ್ ಅಧಿಕೃತ ವೆಬ್ತಾಣವನ್ನು ಪರೀಕ್ಷಿಸಿ ದೃಢಪಡಿಸಬಹುದು.
ಯಾರು ಅರ್ಜಿ ಸಲ್ಲಿಸಬಹದು?
ಅಭ್ಯರ್ಥಿಗಳು 10ನೇ ತರಗತಿಯನ್ನು ಗಣಿತ, ಇಂಗ್ಲಿಷ್ ಭಾಷೆಯ ಜೊತೆಗೆ ಸ್ಥಳೀಯ ಭಾಷೆಯಲ್ಲಿ ಪಾಸಾಗಿರಬೇಕು. ವಿವರಗಳಿಗೆ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ
ಜನರಲ್/ಒಬಿಸಿ:100 ರೂ. ಎಸ್ಸಿ/ಎಸ್ಟಿ/ ಪಿಡಬ್ಲ್ಯುಡಿ/ಮಹಿಳೆಯರು: 0 ರೂ.
ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ ಮೊಬೈಲ್ ವಾಲೆಟ್ ಮೂಲಕ ಪಾವತಿಸುವ ಅವಕಾಶವಿದೆ.
ವಯೋಮಿತಿ
ಕನಿಷ್ಠ ವಯಸ್ಸು- 18 ವರ್ಷಗಳು
ಗರಿಷ್ಠ ವಯಸ್ಸು 40 ವರ್ಷಗಳು
2026 ಜನವರಿ 1ಕ್ಕೆ ಅನ್ವಯಿಸುವಂತೆ ವಯೋಮಿತಿ ನಿರ್ಧರಿಸಲಾಗುವುದು. ಹೆಚ್ಚುವರಿ ವಯೋಮಿತಿ ಸಡಿಲಿಕೆಯನ್ನು ಗ್ರಾಮೀಣ್ ಡಾಕ್ ಸೇವಕ್ ಜಿಡಿಎಸ್ 2026 ನೇಮಕಾತಿ ನಿಯಮಗಳಿಗೆ ತಕ್ಕಂತೆ ನೀಡಲಾಗುವುದು.
ಒಟ್ಟು ಹುದ್ದೆಗಳು
ಸುಮಾರು 28000+ ಹುದ್ದೆಗಳು
ಹುದ್ದೆಯ ಹೆಸರು
ಗ್ರಾಮೀಣ್ ಡಾಕ್ ಸೇವಕ್ ಜಿಡಿಎಸ್ 2026
ಬ್ರಾಂಚ್ ಪೋಸ್ಟ್ಮಾಸ್ಟರ್ (ಬಿಪಿಎಂ), ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ಮಾಸ್ಟರ್ (ಎಬಿಪಿಎಂ), ಡಾಕ್ ಸೇವಕ್
* ವಿದ್ಯಾರ್ಹತೆ
ಅಭ್ಯರ್ಥಿಗಳು 10ನೇ ತರತಿಯನ್ನು ಗಣಿತ, ಇಂಗ್ಲಿಷ್ ಭಾಷೆಯ ಜೊತೆಗೆ ಸ್ಥಳೀಯ ಭಾಷೆಯಲ್ಲಿ ಪಾಸಾಗಿರಬೇಕು. ವಿವರಗಳಿಗೆ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
* ಆಯ್ಕೆ ಪ್ರಕ್ರಿಯೆ
ಮೆರಿಟ್ ಪಟ್ಟಿಯ ಆಧಾರದಲ್ಲಿ ಆಯ್ಕೆ
ದಾಖಲೆ ಪರಿಶೀಲನೆ
ಅಂತಿಮ ಆಯ್ಕೆ
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…