ಭಾರತ ಅಂಚೆ ಇಲಾಖೆಯು ಇಂಡಿಯಾ ಪೋಸ್ಟ್ ಗ್ರಾಮೀಣ್ ಡಾಕ್ ಸೇವಾ ಜಿಡಿಎಸ್ ಪೋಸ್ಟ್ ಗೆ ನೇಮಕಾತಿಗಾಗಿ ಅಧಿಕೃತ ವೆಬ್ಸೈಟ್ನಲ್ಲಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿ ಸುಮಾರು 28000+ ಹುದ್ದೆಗಳಿಗೆ ಆಗುತ್ತಿದೆ. ಭಾರತ ಅಂಚೆ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯು 2026 ಜನವರಿ 31ರಂದು ಪ್ರಾರಂಭವಾಗಿದೆ ಮತ್ತು ಅಭ್ಯರ್ಥಿಗಳು 2026 ಫೆಬ್ರವರಿ 14ರವರೆಗೆ ಅರ್ಜಿ ಸಲ್ಲಿಸಬಹುದು. ಅಗತ್ಯವಿರುವ ಕನಿಷ್ಠ ವಯಸ್ಸು 2026 ಜನವರಿ 01ರಂತೆ 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 40 ವರ್ಷಗಳು. ಅಭ್ಯರ್ಥಿಗಳು ಭಾರತ ಅಂಚೆ ಜಿಡಿಎಸ್ ನೇಮಕಾತಿ 2026 ಗಾಗಿ ಸಂಪೂರ್ಣ ವಿವರಗಳನ್ನು ಕೆಳಗೆ ಪರಿಶೀಲಿಸಬೇಕು. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ನಲ್ಲಿ ಅರ್ಜಿ ಸಲ್ಲಿಸಬಹುದು:
https://indiapost.gov.in/gdsonlineengagement
ಪ್ರಮುಖ ದಿನಾಂಕಗಳು
ಅಧಿಸೂಚನೆ ದಿನಾಂಕ: 30 ಜನವರಿ 2026
ಆನ್ಲೈನ್ ಅರ್ಜಿ ಆರಂಭ: 31 ಜನವರಿ 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14 ಫೆಬ್ರವರಿ 2026
ಶುಲ್ಕ ಪಾವತಿಗೆ ಕೊನೆಯ ದಿನಾಂಕ: 16 ಫೆಬ್ರವರಿ 2026
ತಿದ್ದುಪಡಿ ದಿನಾಂಕ: 18 – 19 ಫೆಬ್ರವರಿ 2026
ಮೆರಿಟ್ ಪಟ್ಟಿ: ಶೀಘ್ರವೇ ಅಪ್ಡೇಟ್ ಮಾಡಲಾಗುವುದು.
ವಿವರಗಳಿಗೆ ಅಭ್ಯರ್ಥಿಗಳು ಇಂಡಿಯಾ ಪೋಸ್ಟ್ ಜಿಡಿಎಸ್ ಅಧಿಕೃತ ವೆಬ್ತಾಣವನ್ನು ಪರೀಕ್ಷಿಸಿ ದೃಢಪಡಿಸಬಹುದು.
ಯಾರು ಅರ್ಜಿ ಸಲ್ಲಿಸಬಹದು?
ಅಭ್ಯರ್ಥಿಗಳು 10ನೇ ತರಗತಿಯನ್ನು ಗಣಿತ, ಇಂಗ್ಲಿಷ್ ಭಾಷೆಯ ಜೊತೆಗೆ ಸ್ಥಳೀಯ ಭಾಷೆಯಲ್ಲಿ ಪಾಸಾಗಿರಬೇಕು. ವಿವರಗಳಿಗೆ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಅರ್ಜಿ ಶುಲ್ಕ
ಜನರಲ್/ಒಬಿಸಿ:100 ರೂ. ಎಸ್ಸಿ/ಎಸ್ಟಿ/ ಪಿಡಬ್ಲ್ಯುಡಿ/ಮಹಿಳೆಯರು: 0 ರೂ.
ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ ಮೊಬೈಲ್ ವಾಲೆಟ್ ಮೂಲಕ ಪಾವತಿಸುವ ಅವಕಾಶವಿದೆ.
ವಯೋಮಿತಿ
ಕನಿಷ್ಠ ವಯಸ್ಸು- 18 ವರ್ಷಗಳು
ಗರಿಷ್ಠ ವಯಸ್ಸು 40 ವರ್ಷಗಳು
2026 ಜನವರಿ 1ಕ್ಕೆ ಅನ್ವಯಿಸುವಂತೆ ವಯೋಮಿತಿ ನಿರ್ಧರಿಸಲಾಗುವುದು. ಹೆಚ್ಚುವರಿ ವಯೋಮಿತಿ ಸಡಿಲಿಕೆಯನ್ನು ಗ್ರಾಮೀಣ್ ಡಾಕ್ ಸೇವಕ್ ಜಿಡಿಎಸ್ 2026 ನೇಮಕಾತಿ ನಿಯಮಗಳಿಗೆ ತಕ್ಕಂತೆ ನೀಡಲಾಗುವುದು.
ಒಟ್ಟು ಹುದ್ದೆಗಳು
ಸುಮಾರು 28000+ ಹುದ್ದೆಗಳು
ಹುದ್ದೆಯ ಹೆಸರು
ಗ್ರಾಮೀಣ್ ಡಾಕ್ ಸೇವಕ್ ಜಿಡಿಎಸ್ 2026
ಬ್ರಾಂಚ್ ಪೋಸ್ಟ್ಮಾಸ್ಟರ್ (ಬಿಪಿಎಂ), ಅಸಿಸ್ಟಂಟ್ ಬ್ರಾಂಚ್ ಪೋಸ್ಟ್ಮಾಸ್ಟರ್ (ಎಬಿಪಿಎಂ), ಡಾಕ್ ಸೇವಕ್
* ವಿದ್ಯಾರ್ಹತೆ
ಅಭ್ಯರ್ಥಿಗಳು 10ನೇ ತರತಿಯನ್ನು ಗಣಿತ, ಇಂಗ್ಲಿಷ್ ಭಾಷೆಯ ಜೊತೆಗೆ ಸ್ಥಳೀಯ ಭಾಷೆಯಲ್ಲಿ ಪಾಸಾಗಿರಬೇಕು. ವಿವರಗಳಿಗೆ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
* ಆಯ್ಕೆ ಪ್ರಕ್ರಿಯೆ
ಮೆರಿಟ್ ಪಟ್ಟಿಯ ಆಧಾರದಲ್ಲಿ ಆಯ್ಕೆ
ದಾಖಲೆ ಪರಿಶೀಲನೆ
ಅಂತಿಮ ಆಯ್ಕೆ
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…