ಭಾರತೀಯ ಕ್ರೀಡಾ ಪ್ರಾಧಿಕಾರದ ಉನ್ನತ ತರಬೇತುದಾರರ ಬಳಿ ನಾನು ಕರ್ನಾಟಕದ ಶ್ರೀನಿವಾಸ ಗೌಡರನ್ನು ಆಹ್ವಾನಿಸುತ್ತೇನೆ. : ಕ್ರೀಡಾ ಸಚಿವ ಕಿರಣ್‌‌ ರಿಜಿಜು -Vishwanews24

ಹೊಸದಿಲ್ಲಿ:ಶ್ರೀನಿವಾಸ ಗೌಡರನ್ನು ಕರೆಸಿ ಪರಿಣಿತರಿಂದ ತರಬೇತಿ ಕೊಡಿಸಲಾಗುವುದು ಎಂದು ಕ್ರೀಡಾ ಸಚಿವ ಕಿರಣ್‌‌ ರಿಜಿಜು ಅವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಈ ಸಂಬಂಧ ಟ್ಟೀಟ್‌ ಮಾಡಿರುವ ಅವರು, “ಭಾರತೀಯ ಕ್ರೀಡಾ ಪ್ರಾಧಿಕಾರದ ಉನ್ನತ ತರಬೇತುದಾರರ ಬಳಿಗೆ ಟ್ರಯಲ್ಸ್‌ಗೆ ನಾನು ಕರ್ನಾಟಕದ ಶ್ರೀನಿವಾಸ ಗೌಡರನ್ನು ಆಹ್ವಾನಿಸುತ್ತೇನೆ. ಒಲಿಂಪಿಕ್ಸ್‌ನ ಮಾನದಂಡಗಳ ಬಗ್ಗೆ ಜನಸಾಮಾನ್ಯರಲ್ಲಿ ಜ್ಞಾನದ ಕೊರತೆಯಿದೆ. ವಿಶೇಷವಾಗಿ ಅಥ್ಲೆಟಿಕ್ಸ್‌ನಲ್ಲಿ ಮಾನವನ ಸಾಮರ್ಥ್ಯ ಮತ್ತು ಶಕ್ತಿಯ ಅಂತಿಮಘಟ್ಟವನ್ನು ಮೀರಿಸಲಾಗುತ್ತದೆ. ಭಾರತದಲ್ಲಿ ಯಾವುದೇ ಪ್ರತಿಭೆಗಳನ್ನು ಪರೀಕ್ಷಿಸದೆ ಬಿಡುವುದಿಲ್ಲ ಎಂಬುದನ್ನು ನಾನು ಖಾತರಿಪಡಿಸುತ್ತೇನೆ,” ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 1ರಂದು ಮಂಗಳೂರು ಸಮೀಪದ ಐಕಳ ಎಂಬಲ್ಲಿ ನಡೆದ ಕಂಬಳ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಮೂಡಬಿದಿರೆ ಮೀಯಾರಿನ ಶ್ರೀನಿವಾಸಗೌಡ ಅವರು 142.50 ಮೀಟರ್‌ ಉದ್ದದ ಕಂಬಳದ ಗದ್ದೆಯಲ್ಲಿ ಕೇವಲ 13.62 ಸೆಕೆಂಡುಗಳಲ್ಲಿ ಕೋಣಗಳನ್ನು ಓಡಿಸಿಕೊಂಡು ಗುರಿ ತಲುಪಿದ್ದರು. ಇದನ್ನು 100 ಮೀಟರ್‌ ಇಳಿಸಿದರೆ ತಗುಲುವ ಸೆಕೆಂಡುಗಳು ಕೇವಲ 9.55! ಅಂದರೆ ಉಸೇನ್‌ ಬೋಲ್ಟ್‌ ನಿರ್ಮಿಸಿದ ದಾಖಲೆಗಿಂತ 0.3 ಸೆಕೆಂಡ್‌ ಕಡಿಮೆ ಅವಧಿಯಲ್ಲೇ ತಲುಪಿದ್ದರು.

ಈ ಸುದ್ದಿ ಗುರುವಾರ, ಶುಕ್ರವಾರವಿಡೀ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗಿತ್ತು. ಹಲವರು ಶ್ರೀನಿವಾಸ ಗೌಡ ಅವರಿಗೆ ತರಬೇತಿ ನೀಡಿ ಕ್ರೀಡಾಕೂಟದಲ್ಲಿ ಅವರನ್ನು ಓಡಿಸುವಂತೆ ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು ಅವರರಿಗೆ ಮನವಿ ಮಾಡಿಕೊಂಡಿದ್ದರು. ಇದಕ್ಕೀಗ ಕಿರಣ್‌ ರಿಜಿಜು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

 

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

15 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

15 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

15 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

18 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

18 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

18 hours ago