ಭಾರತೀಯ ಚಿತ್ರರಂಗದ ಒಂದು ಯುಗಾಂತ್ಯ : ಧರ್ಮೇಂದ್ರ ನಿಧನಕ್ಕೆ ಮೋದಿ ಸಂತಾಪ – vishwanews24

Featured, ರಾಷ್ಟ್ರ ನ್ಯೂಸ್

ಭಾರತೀಯ ಚಿತ್ರರಂಗದ ಒಂದು ಯುಗಾಂತ್ಯ : ಧರ್ಮೇಂದ್ರ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಮೋದಿ, ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ. ಧರ್ಮೇಂದ್ರ ಅವರದ್ದು ಅಪ್ರತಿಮವಾದ ಚಲನಚಿತ್ರ ವ್ಯಕ್ತಿತ್ವ. ಯಾವುದೇ ಪಾತ್ರವಿದ್ದರೂ ಕೂಡ ಆ ಪಾತ್ರದ ಆಳಕ್ಕಿಳಿದು ನಟನೆ ಮಾಡಿ, ಎಲ್ಲರನ್ನು ಮೋಡಿ ಮಾಡುತ್ತಿದ್ದರು. ತಮ್ಮ ವಿಭಿನ್ನ ಪಾತ್ರಗಳ ಮೂಲಕವೇ ಜನರನ್ನು ಸೆಳೆದುಕೊಂಡಿದ್ದರು. ಅವರ ಸರಳತೆ, ನಮ್ರತೆ ಮತ್ತು ಆತ್ಮೀಯ ಮನೋಭಾವ ಎಲ್ಲರಿಗೂ ಇಷ್ಟವಾಗುವಂತದ್ದು.

ಈ ಸಂದರ್ಭದಲ್ಲಿ ಧರ್ಮೇಂದ್ರ ಅವರ ಕುಟುಂಬಸ್ಥರಿಗೆ, ಸ್ನೇಹಿತರಿಗೆ ಹಾಗೂ ಅಭಿಮಾನಿ ವರ್ಗಕ್ಕೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ದೇವರಲ್ಲಿ ಪಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ನ.28 ರಂದು ಉಡುಪಿಗೆ ಪ್ರಧಾನಿ : ಜಿಲ್ಲೆಯಾದ್ಯಂತ ರಜೆ ಘೋಷಣೆಗೆ ಜಿಲ್ಲಾಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ – vishwanews24

ಬಾಲಿವುಡ್‌ನ ಹಿರಿಯ ನಟ, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಧರ್ಮೇಂದ್ರ ಅವರು 89ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದಲೂ ದೀರ್ಘ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು (ನ.34) ತಮ್ಮ ಮುಂಬೈ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

Leave a Reply