ನವದೆಹಲಿ: ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಮೋದಿ, ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ. ಧರ್ಮೇಂದ್ರ ಅವರದ್ದು ಅಪ್ರತಿಮವಾದ ಚಲನಚಿತ್ರ ವ್ಯಕ್ತಿತ್ವ. ಯಾವುದೇ ಪಾತ್ರವಿದ್ದರೂ ಕೂಡ ಆ ಪಾತ್ರದ ಆಳಕ್ಕಿಳಿದು ನಟನೆ ಮಾಡಿ, ಎಲ್ಲರನ್ನು ಮೋಡಿ ಮಾಡುತ್ತಿದ್ದರು. ತಮ್ಮ ವಿಭಿನ್ನ ಪಾತ್ರಗಳ ಮೂಲಕವೇ ಜನರನ್ನು ಸೆಳೆದುಕೊಂಡಿದ್ದರು. ಅವರ ಸರಳತೆ, ನಮ್ರತೆ ಮತ್ತು ಆತ್ಮೀಯ ಮನೋಭಾವ ಎಲ್ಲರಿಗೂ ಇಷ್ಟವಾಗುವಂತದ್ದು.
ಈ ಸಂದರ್ಭದಲ್ಲಿ ಧರ್ಮೇಂದ್ರ ಅವರ ಕುಟುಂಬಸ್ಥರಿಗೆ, ಸ್ನೇಹಿತರಿಗೆ ಹಾಗೂ ಅಭಿಮಾನಿ ವರ್ಗಕ್ಕೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ದೇವರಲ್ಲಿ ಪಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
ಬಾಲಿವುಡ್ನ ಹಿರಿಯ ನಟ, ಎವರ್ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಧರ್ಮೇಂದ್ರ ಅವರು 89ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದಲೂ ದೀರ್ಘ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು (ನ.34) ತಮ್ಮ ಮುಂಬೈ ನಿವಾಸದಲ್ಲಿ ನಿಧನ ಹೊಂದಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…