ನವದೆಹಲಿ: ಬಾಲಿವುಡ್ನ ಹಿರಿಯ ನಟ ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಮೋದಿ, ಧರ್ಮೇಂದ್ರ ಅವರ ನಿಧನದಿಂದ ಭಾರತೀಯ ಚಿತ್ರರಂಗದ ಒಂದು ಯುಗ ಅಂತ್ಯವಾಗಿದೆ. ಧರ್ಮೇಂದ್ರ ಅವರದ್ದು ಅಪ್ರತಿಮವಾದ ಚಲನಚಿತ್ರ ವ್ಯಕ್ತಿತ್ವ. ಯಾವುದೇ ಪಾತ್ರವಿದ್ದರೂ ಕೂಡ ಆ ಪಾತ್ರದ ಆಳಕ್ಕಿಳಿದು ನಟನೆ ಮಾಡಿ, ಎಲ್ಲರನ್ನು ಮೋಡಿ ಮಾಡುತ್ತಿದ್ದರು. ತಮ್ಮ ವಿಭಿನ್ನ ಪಾತ್ರಗಳ ಮೂಲಕವೇ ಜನರನ್ನು ಸೆಳೆದುಕೊಂಡಿದ್ದರು. ಅವರ ಸರಳತೆ, ನಮ್ರತೆ ಮತ್ತು ಆತ್ಮೀಯ ಮನೋಭಾವ ಎಲ್ಲರಿಗೂ ಇಷ್ಟವಾಗುವಂತದ್ದು.
ಈ ಸಂದರ್ಭದಲ್ಲಿ ಧರ್ಮೇಂದ್ರ ಅವರ ಕುಟುಂಬಸ್ಥರಿಗೆ, ಸ್ನೇಹಿತರಿಗೆ ಹಾಗೂ ಅಭಿಮಾನಿ ವರ್ಗಕ್ಕೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ದೇವರಲ್ಲಿ ಪಾರ್ಥಿಸುತ್ತೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
ಬಾಲಿವುಡ್ನ ಹಿರಿಯ ನಟ, ಎವರ್ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಧರ್ಮೇಂದ್ರ ಅವರು 89ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ತಿಂಗಳಿನಿಂದಲೂ ದೀರ್ಘ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು (ನ.34) ತಮ್ಮ ಮುಂಬೈ ನಿವಾಸದಲ್ಲಿ ನಿಧನ ಹೊಂದಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…