ನವದೆಹಲಿ : ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ ಅವರು ಇಂದು ಆಯ್ಕೆಗೊಂಡಿದ್ದಾರೆ.
ಪಕ್ಷದ ವಲಯದಲ್ಲಿ ಜೆ.ಪಿ, ನಡ್ಡಾ ಎಂದೇ ಕರೆಯಲ್ಪಡುವ ನಡ್ಡಾ ಅವರು ನಿರ್ಗಮನ ಅಧ್ಯಕ್ಷರಾಗಿರುವ ಅಮಿತ್ ಶಾ ಅವರಂತೆಯೇ ಸಂಘಟನಾ ಚತುರ ಎಂದೇ ಪಕ್ಷದೊಳಗೆ ಗುರುತಿಸಲ್ಪಟ್ಟಿದ್ದು ನಡ್ಡಾ ಅವರು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಪರಮಾಪ್ತರಾಗಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯ ಬಳಿಕ ಪಕ್ಷದ ರಾಷ್ಟ್ರಾಧ್ಯಕ್ಷರಾಗಿದ್ದ ಅಮಿತ್ ಶಾ ಅವರು ಗೃಹಮಂತ್ರಿಯಾದ ನಂತರ ಜೆ.ಪಿ. ನಡ್ಡಾ ಅವರು ಕಾರ್ಯಾಧ್ಯಕ್ಷರಾಗಿ ನಿಯುಕ್ತಿಗೊಂಡಿದ್ದರು.
ಕೇಂದ್ರ ಸಚಿವರು, ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಸಚಿವರು ಪಕ್ಷದ ಕೇಂದ್ರ ಕಛೇರಿಯಲ್ಲಿ ನಡ್ಡಾ ಅವರ ಪರ ನಾಮಪತ್ರ ಸಲ್ಲಿಸಲು ಹಾಜರಿದ್ದರು.
36 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪೈಕಿ 21 ಕಡೆಗಳಲ್ಲಿ ಪಕ್ಷದ ಆಂತರಿಕ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಾಂಸ್ಥಿಕ ಚುನಾವಣಾ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಪಕ್ಷದ ಹಿರಿಯ ನಾಯಕ ರಾಧಾ ಮೋಹನ್ ಸಿಂಗ್ ಅವರು ಚುನಾವಣಾ ಕಾರ್ಯಸೂಚಿಯನ್ನು ಪ್ರಕಟಿಸಿ ಪಿ. ನಡ್ಡಾ ಅವರು ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ಅಧಿಕೃತವಾಗಿ ಆಯ್ಕೆಯಾಗಿರುವುದನ್ನು ಪ್ರಕಟಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…