ನವದೆಹಲಿ : ಭಾರತೀಯ ಜನತಾ ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ ಅವರು ಇಂದು ಆಯ್ಕೆಗೊಂಡಿದ್ದಾರೆ.
ಪಕ್ಷದ ವಲಯದಲ್ಲಿ ಜೆ.ಪಿ, ನಡ್ಡಾ ಎಂದೇ ಕರೆಯಲ್ಪಡುವ ನಡ್ಡಾ ಅವರು ನಿರ್ಗಮನ ಅಧ್ಯಕ್ಷರಾಗಿರುವ ಅಮಿತ್ ಶಾ ಅವರಂತೆಯೇ ಸಂಘಟನಾ ಚತುರ ಎಂದೇ ಪಕ್ಷದೊಳಗೆ ಗುರುತಿಸಲ್ಪಟ್ಟಿದ್ದು ನಡ್ಡಾ ಅವರು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಪರಮಾಪ್ತರಾಗಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯ ಬಳಿಕ ಪಕ್ಷದ ರಾಷ್ಟ್ರಾಧ್ಯಕ್ಷರಾಗಿದ್ದ ಅಮಿತ್ ಶಾ ಅವರು ಗೃಹಮಂತ್ರಿಯಾದ ನಂತರ ಜೆ.ಪಿ. ನಡ್ಡಾ ಅವರು ಕಾರ್ಯಾಧ್ಯಕ್ಷರಾಗಿ ನಿಯುಕ್ತಿಗೊಂಡಿದ್ದರು.
ಕೇಂದ್ರ ಸಚಿವರು, ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಸಚಿವರು ಪಕ್ಷದ ಕೇಂದ್ರ ಕಛೇರಿಯಲ್ಲಿ ನಡ್ಡಾ ಅವರ ಪರ ನಾಮಪತ್ರ ಸಲ್ಲಿಸಲು ಹಾಜರಿದ್ದರು.
36 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪೈಕಿ 21 ಕಡೆಗಳಲ್ಲಿ ಪಕ್ಷದ ಆಂತರಿಕ ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಾಂಸ್ಥಿಕ ಚುನಾವಣಾ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಪಕ್ಷದ ಹಿರಿಯ ನಾಯಕ ರಾಧಾ ಮೋಹನ್ ಸಿಂಗ್ ಅವರು ಚುನಾವಣಾ ಕಾರ್ಯಸೂಚಿಯನ್ನು ಪ್ರಕಟಿಸಿ ಪಿ. ನಡ್ಡಾ ಅವರು ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ಅಧಿಕೃತವಾಗಿ ಆಯ್ಕೆಯಾಗಿರುವುದನ್ನು ಪ್ರಕಟಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…