Featured

ಭಾರತೀಯ ಜನತಾ ಪಕ್ಷವೂ 300ಕ್ಕೂ ಹೆಚ್ಚು ಸೀಟುಗಳನ್ನು ಗೆದ್ದು, ಮತ್ತೆ ಆಡಳಿತ ಪಕ್ಷವಾಗಿ ಹೊರಹೊಮ್ಮಲಿದೆ : ಪ್ರಧಾನಿ ಸಹೋದರ ಪ್ರಹ್ಲಾದ್ – Vishwanews24

ಮಂಗಳೂರು, :ಒಬ್ಬ ಮೋದಿ ಬಂದೇ ವಿರೋಧಿಗಳ ಸ್ಥಿತಿ ಹೀಗಾಗಿದೆ. ಇನ್ನು ನಾನೂ ಬಂದರೆ ಏನಾಗಬೇಡ. ನಾನು ರಾಜಕೀಯಕ್ಕೆ ಬರುವುದಿಲ್ಲ, ನಮ್ಮ ಪರಿವಾರದಿಂದ ನರೇಂದ್ರ ಭಾಯ್ ಒಬ್ಬರೇ ಸಾಕು, ದೇಶವನ್ನು ಉನ್ನತಿಗೆ ಕೊಂಡೊಯ್ಯುವುದಕ್ಕೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಕರಾವಳಿಯ ದೇವಾಲಯ ಭೇಟಿಗಾಗಿ, ಬಜ್ಪೆ ವಿಮಾನ ನಿಲ್ದಾಣದ ಮೂಲಕ ಮಂಗಳೂರಿಗೆ ಬಂದಿಳಿದ ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ, ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಾತನಾಡಿ . ಮಹಾಘಟ ಬಂಧನ್ ಬಗ್ಗೆ ಕಿಡಿಕಾರಿದ್ದಾರೆ.

2014 ರಲ್ಲಿ ದೇಶದ ಜನತೆ ಮೋದಿ ನಾಯಕತ್ವವನ್ನು ಮೆಚ್ಚಿ ಬಿಜೆಪಿ ಪರ ಫಲಿತಾಂಶ ನೀಡಿದ್ದಾರೆ. ಇದೇ ಫಲಿತಾಂಶ 2019 ರ ಲೋಕಸಭೆ ಚುನಾವಣೆಯಲ್ಲೂ ಮರುಕಳಿಸಲಿದೆ. ಭಾರತೀಯ ಜನತಾ ಪಕ್ಷವೂ 300ಕ್ಕೂ ಹೆಚ್ಚು ಸೀಟುಗಳನ್ನು ಗೆದ್ದು, ಮತ್ತೆ ಆಡಳಿತ ಪಕ್ಷವಾಗಿ ಹೊರಹೊಮ್ಮಲಿದೆ. ಕಳೆದ ಐದು ವರ್ಷದ ಆಡಳಿತಾವಧಿಯಲ್ಲಿ ಮೋದಿ ಸರ್ಕಾರ ಏನು ಮಾಡಲಿಲ್ಲ ಹೇಳಿ? ಆದರೆ ಇದ್ಯಾವುದು ಕೂಡಾ ಕಾಂಗ್ರೆಸ್ ಮನೆಗೆ ತಲುಪಲಿಲ್ಲ ಎಂದು ಹೇಳಿದರು.

ಮಮತಾ ಬ್ಯಾನರ್ಜಿಗೆ ನಾನೆಂದೂ ಬೆಂಬಲ ಕೊಟ್ಟಿಲ್ಲ, ಕೊಡುವುದೂ ಇಲ್ಲ, ನಮ್ಮ ಪರಿವಾರದ ನರೇಂದ್ರರನ್ನು ಬಿಡುವ ಪ್ರಶ್ನೆಯೇ ಬರುವುದಿಲ್ಲ, ಯಾರೋ ಮಾಧ್ಯಮದವರು ಹಿಂದೆ ನನ್ನ ಹೇಳಿಕೆ ತಿರುಚಿ ಬರೆದಿದ್ದಾರೆ.

ಘಟಬಂಧನ ಬರಲಿ, ಪ್ರಿಯಾಂಕ ಗಾಂಧಿ ಬರಲಿ, ಪ್ರಿಯದರ್ಶಿನಿಯೇ ಬರಲಿ, 2019ರಲ್ಲೂ ನರೇಂದ್ರ ಮೋದಿ ಪ್ರಧಾನಿಯಾಗುವುದನ್ನು ಯಾರೂ ತಪ್ಪಿಸಲಾಗದು, ಜನರ ಆಶೀರ್ವಾದ ಮೋದಿ ಮೇಲಿದೆ ಎಂದು ಪ್ರಹ್ಲಾದ್ ಮೋದಿ ವಿಶ್ವಾಸವ್ಯಕ್ತಪಡಿಸಿದರು.

ಎನ್ ಡಿಎ ಸರಕಾರ ಕಳೆದ 5 ವರುಷಗಳಲ್ಲಿ ಯಾವ ಅಭಿವೃದ್ಧಿ ಮಾಡಿಲ್ಲ ಹೇಳಿ? ಬಹಳಷ್ಟು ಅಭಿವೃದ್ಧಿ ಮಾಡಿದ್ದಾರೆ, ಜನ ಸ್ವೀಕರಿಸಿದ್ದಾರೆ. ಕಾಂಗ್ರೆಸ್ ನವರಿಗೆ ಮಾತ್ರ ಏನು ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. ಯಾಕೆಂದರೆ ಅವರ ಮನೆಗೆ ಏನೂ ಹೋಗಿಲ್ಲ. ದೇಶದ ಜನತೆಯ ಹೃದಯದಲ್ಲಿ ಮತ್ತೆ ಮೋದಿ ಪ್ರಧಾನಿಯಾಗಲಿ ಅನ್ನೋದಿದೆ.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

13 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

17 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

17 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

18 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

18 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

19 hours ago