Featured

ಭಾರತೀಯ ನಾಗರಿಕರಿಗೆ ಸೆ. 21ರವರೆಗೆ ಕೆನಡಾ ಪ್ರಯಾಣ ರದ್ದು -Vishwanews24

ಭಾರತೀಯ ನಾಗರಿಕರಿಗೆ ಸೆ. 21ರವರೆಗೆ ಕೆನಡಾ ಪ್ರಯಾಣ ರದ್ದು -Vishwanews24

ಟೊರೆಂಟೋ : ಕೋವಿಡ್ ಸೋಂಕು ಹರಡುವ ಆತಂಕದಿಂದ ಭಾರತೀಯ ನಾಗರಿಕ ವಿಮಾನಗಳ ಪ್ರಯಾಣವನ್ನು ರದ್ದುಗೊಳಿಸಿ ಕೆನಡಾ ಸರ್ಕಾರ ಹೊರಡಿಸಿರುವ ಆದೇಶವನ್ನು ಸೆಪ್ಟಂಬರ್ 21ರವರೆಗೆ ಮುಂದುವರೆಸಿದೆ. ಕೋವಿಡ್‍ನ ಎರಡನೇ ಅಲೆ ಹೆಚ್ಚಾಗಿದ್ದ ಕಳೆದ ಏಪ್ರಿಲ್‍ನಲ್ಲಿ ಕೆನಡಾದ ಒಕ್ಕೂಟ ಸಾರಿಗೆ ಸಚಿವಾಲಯ ಕಳೆದ ಭಾರತದಿಂದ ನೇರವಾಗಿ ಆಗಮಿಸುವ ವಿಮಾನಗಳ ಸೇವೆಯನ್ನು ತಡೆ ಹಿಡಿದಿತ್ತು. ಅದನ್ನು ಮತ್ತೆ ಮುಂದುವರೆಸಲಾಗಿದ್ದು ಸೆಪ್ಟಂಬರ್ 21ರವರೆಗೆ ನೇರ ವಿಮಾನಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟ ಪಡಿಸಿದೆ.

ಕೆನೆಡಿಯನ್ನರ ಸುರಕ್ಷತೆ ಮತ್ತು ಆರೋಗ್ಯ ರಕ್ಷಣೆ ನಮ್ಮ ಮೊದಲ ಆಧ್ಯತೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದ ಅಂಕಿ ಅಂಶಗಳನ್ನು ಪರಿಶೀಲಿಸಿದ ಬಳಿಕ ಸದ್ಯಕ್ಕೆ ವಿಮಾನಗಳ ಪ್ರಯಾಣಕ್ಕೆ ಅವಕಾಶ ನೀಡುವುದು ಸೂಕ್ತವಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಸಾರಿಗೆ ಸಚಿವ ಒಮರ್ ಅಲ್‍ಗೋಬ್ರಾ ತಿಳಿಸಿದ್ದಾರೆ.

ಭಾರತದಿಂದ ನೇರವಾಗಿ ಕೆನಡಾಗೆ ಪ್ರಯಾಣ ಮಾಡಲು ಅವಕಾಶ ಇಲ್ಲವಾದರೂ, ಬೇರೆ ದೇಶಗಳ ಮೂಲಕ ಭಾರತೀಯರು ಕೆನಡಾಗೆ ಭೇಟಿ ನೀಡಬಹುದು. ಆದರೆ ಅದಕ್ಕೂ ಮೊದಲು ಭಾರತ ಹೊರತು ಪಡಿಸಿ ಬೇರೆ ದೇಶದಲ್ಲಿ ಕೋವಿಡ್ ಪತ್ತೆಗೆ ಮೋಲ್ಯಾಕ್ಯೂಲರ್ ಪರೀಕ್ಷೆ ಮಾಡಿಸಿ, ನೆಗೆಟಿವ್ ಫಲಿತಾಂಶ ಬಂದಿರಬೇಕು. ಅಂತಹ ವ್ಯಕ್ತಿಗಳು ಪ್ರಯಾಣ ಮಾಡಬಹುದು.

ಈ ಮೊದಲು ಕೋವಿಡ್ ಸೋಂಕಿಗೆ ಸಿಲುಕಿದ್ದವರು ತಮ್ಮ ಪ್ರಯಾಣಕ್ಕೆ ಮೊದಲು 14ರಿಂದ 90 ದಿನಗಳ ನಡುವೆ ಬೇರೆ ದೇಶದಲ್ಲಿ ಪರೀಕ್ಷೆ ಮಾಡಿಸಿರಬೇಕು. ಅದಕ್ಕೂ ಮೊದಲು ಅನ್ಯ ದೇಶದಲ್ಲಿ 14 ದಿನ ನೆಲೆಸಿರಬೇಕು ಎಂಬ ಕಠಿಣ ನಿಯಮಾವಳಿಗಳನ್ನು ವಿಧಿಸಲಾಗಿದೆ. ಭಾರತದಲ್ಲಿ ಕೋವಿಡ್‍ನಲ್ಲಿ ಡೆಲ್ಟಾ, ಡೆಲ್ಟಾ ಪ್ಲಸ್ ಸೇರಿದಂತೆ ನಾನಾ ರೀತಿಯ ರೂಪಾಂತರ ಸೋಂಕುಗಳ ಹರಡುತ್ತಿದ್ದು, ಬಹಳಷ್ಟು ದೇಶಗಳು ಇತರ ಬಗ್ಗೆ ಕಾಳಜಿ ವಹಿಸಿವೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago