ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ ನವೀನ್ ಆಲ್ಮೆಡಾ ಹಾಗೂ ಕ್ರಿಸ್ ಎವರ್ಟ್ ಡಿಸೋಜ ದಂಪತಿಯ ಪುತ್ರಿ ನಿಶೆಲ್ ಫ್ಲೋರಾ ಆಲ್ಮೆಡಾ ಅವರು ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಅಧಿಕಾರಿಯಾಗಿ ಆಯ್ಕೆಯಾಗುವ ಮೂಲಕ ಮಂಗಳೂರಿಗೆ ಮತ್ತೊಂದು ಹೆಮ್ಮೆಯ ಸಾಧನೆ ತಂದುಕೊಟ್ಟಿದ್ದಾರೆ.
2016ರಲ್ಲಿ ಮಂಗಳೂರಿನ ಕೊಡಿಯಾಲ್ಬೈಲ್ನ ಸಂತ ಎಲೋಶಿಯಸ್ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಆರಂಭಿಸಿದ ನಿಶೆಲ್, ವಿದ್ಯಾರ್ಥಿ ಜೀವನದಲ್ಲಿಯೇ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದರು. ಎನ್ಸಿಸಿ ತರಬೇತಿ ಪಡೆದು, ಆರ್ಡಿಸಿ ಕ್ಯಾಂಪ್ ಮೂಲಕ ಗಣರಾಜ್ಯೋತ್ಸವ ಪರೇಡ್ನಲ್ಲಿ ಶಾಲೆಯನ್ನು ಪ್ರತಿನಿಧಿಸಿದ ಪ್ರಪ್ರಥಮ ವಿದ್ಯಾರ್ಥಿನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಇದನ್ನೂ ಓದಿ:
ನಾಯಕತ್ವ, ನೃತ್ಯ, ಸಂಗೀತ, ಚಿತ್ರಕಲೆ, ಕ್ರೀಡೆ, ಕರಾಟೆ, ಶಿಕ್ಷಣ ಹಾಗೂ ಕಾರ್ಯಕ್ರಮ ನಿರೂಪಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ತಮ್ಮ ಸಾಮರ್ಥ್ಯ ತೋರಿದ ನಿಶೆಲ್, ಬಳಿಕ ಏರೋನಾಟಿಕಲ್ ಇಂಜಿನಿಯರಿಂಗ್ನಲ್ಲಿ ಉನ್ನತ ಶ್ರೇಣಿ ಪಡೆದು ಸರ್ವಿಸ್ ಸೆಲೆಕ್ಷನ್ ಬೋರ್ಡ್ (SSB) ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.
ಪ್ರಸ್ತುತ ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಅಧಿಕಾರಿಯಾಗಿ ಆಯ್ಕೆಯಾಗಿರುವ ಅವರು ನಗರಕ್ಕೆ ಆಗಮಿಸುತ್ತಿದ್ದು, ಯುವಜನತೆ ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ಪರಿಶ್ರಮ, ಸಮರ್ಪಣೆ ಮತ್ತು ಪ್ರಾಮಾಣಿಕತೆಯ ಮೂಲಕ ಮಾದರಿಯಾಗಿದ್ದಾರೆ.
ಇದನ್ನೂ ಓದಿ:
ಈ ಸಾಧನೆಯ ಅಂಗವಾಗಿ ಕೊಂಗೂರು ನಿವಾಸಿಗಳು ಹಾಗೂ ವಾರ್ಡ್ ಸದಸ್ಯರು ಮೇ 29ರಂದು ನಿಶೆಲ್ ಫ್ಲೋರಾ ಆಲ್ಮೆಡಾ ಅವರಿಗೆ ಗೌರವಾದರದ ಸ್ವಾಗತ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ತೆರೆದ ವಾಹನದಲ್ಲಿ ಅವರನ್ನು ತವರಿಗೆ ಬರಮಾಡಿಕೊಂಡು, ಬಳಿಕ ಅವರ ನಿವಾಸದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…