Featured

ಭಾರತೀಯ ನೌಕಾಪಡೆ ದಿನ : ಗಣ್ಯರಿಂದ ಶುಭಾಶಯ – Vishwanews24

ಭಾರತೀಯ ನೌಕಾಪಡೆ ದಿನ : ಗಣ್ಯರಿಂದ ಶುಭಾಶಯ – Vishwanews24

ನವದೆಹಲಿ, : ಭಾರತೀಯ ನೌಕಾಪಡೆ ದಿನದ ಅಂಗವಾಗಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಸೇರಿದಂತೆ ಪ್ರಧಾನಿ ನರೇಂದರರ ಮೋದಿ, ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಹಲವು ಮಂದಿ ಶುಭ ಕೋರಿದ್ದಾರೆ.

ಟ್ವೀಟ್‌ ಮೂಲಕ ಶುಭ ಕೋರಿದ ರಾಷ್ಟ್ರಪತಿ, “ನೌಕಾಪಡೆಯ ದಿನದಂದು ನಮ್ಮ ನೌಕಾಪಡೆಯ ಸಿಬ್ಬಂದಿಗೆ, ನಿವೃತ್ತ ಹಿರಿಯ ಸಿಬ್ಬಂದಿಗಳು ಸೇರಿದಂತೆ ಅವರ ಕುಟುಂಬಗಳಿಗೆ ನನ್ನ ಶುಭಾಶಯಗಳು. ನಮ್ಮ ಕಡಲ ಗಡಿನಾಡುಗಳನ್ನು ರಕ್ಷಿಸುವಲ್ಲಿ, ನಮ್ಮ ವ್ಯಾಪಾರ ಮಾರ್ಗಗಳನ್ನು ಭದ್ರಪಡಿಸುವಲ್ಲಿ ಹಾಗೂ ನಾಗರಿಕ ತುರ್ತು ಸಂದರ್ಭಗಳಲ್ಲಿ ಸಹಾಯವನ್ನು ನೀಡುವಲ್ಲಿ ನಿಮ್ಮ ಬದ್ಧತೆಯ ಬಗ್ಗೆ ರಾಷ್ಟ್ರ ಹೆಮ್ಮೆಪಡುತ್ತದೆ” ಎಂದಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದು, “ನಮ್ಮ ಎಲ್ಲಾ ಶೌರ್ಯ ನೌಕಾಪಡೆಯ ಸಿಬ್ಬಂದಿ ಹಾಗೂ ಅವರ ಕುಟುಂಗಳಿಗೆ ನೌಕಾಪಡೆ ದಿನದ ಶುಭಾಶಯಗಳು. ಭಾರತೀಯ ನೌಕಾಪಡೆಯು ನಮ್ಮ ಕರಾವಳಿಯನ್ನು ನಿರ್ಭಯವಾಗಿ ರಕ್ಷಿಸುತ್ತದೆ ಹಾಗೂ ಅಗತ್ಯವಾದ ಸಮಯದಲ್ಲಿ ಮಾನವೀಯ ನೆರವು ನೀಡುತ್ತದೆ” ಎಂದು ಹೇಳಿದ್ದಾರೆ.\

“ನೌಕಾಪಡೆ ದಿನದ ಈ ಸಂದರ್ಭ ನೌಕಾಪಡೆಯ ಸಿಬ್ಬಂದಿಗಳಿಗೆ ನನ್ನ ಶುಭಾಶಯಗಳು. ಅವರ ಶೌರ್ಯ, ಧೈರ್ಯ ಹಾಗೂ ವೃತ್ತಿಪರತೆಗೆ ನನ್ನ ವಂದನೆಗಳು” ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌ಯಡಿಯೂರಪ್ಪ ಅವರು ಟ್ವೀಟ್‌ ಮಾಡಿದ್ದು, “ನಮ್ಮ ರಾಷ್ಟ್ರವನ್ನು ರಕ್ಷಿಸುವ ನಮ್ಮ ಕೆಚ್ಚೆದೆಯ ನೌಕಾಪಡೆಯ ಸಿಬ್ಬಂದಿಗಳಿಗೆ ಹಾಗೂ ಅವರ ಕುಟುಂಬದವರಿಗೆ ನನ್ನ ಶುಭಾಶಯಗಳು” ಎಂದು ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಟ್ವೀಟ್‌ ಮಾಡಿದ್ದು, “ನೌಕಾಪಡೆ ಯೋಧರ ಸೇವೆ, ತ್ಯಾಗ ಮತ್ತು ಬಲಿದಾನದಿಂದಾಗಿ ಭಾರತ ಸುರಕ್ಷಿತ ಹಾಗೂ ಸುಭದ್ರವಾಗಿದೆ. ಭಾರತೀಯ ನೌಕಾದಳ ದಿನದ ಶುಭಾಶಯಗಳು” ಎಂದಿದ್ದಾರೆ.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

2 days ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

2 days ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

2 days ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

2 days ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

2 days ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

2 days ago