ಬೆಂಗಳೂರು: ಶ್ರೀ ಹರಿಕೋಟಾದಿಂದ ಜು. 22 ರಂದು ನಭಕ್ಕೆ ಚಿಮ್ಮಿದ ಚಂದ್ರಯಾನ 2 ನೌಕೆ ಚಂದ್ರನ ಕಕ್ಷೆ ಪ್ರವೇಶಿಸಿದೆ.ಉಡಾವಣೆ ಮಾಡಿದ 28 ದಿನಗಳ ಬಳಿಕ ಮಂಗಳವಾರ ಬೆಳಗ್ಗೆ 9.02ಕ್ಕೆ ಉಪಗ್ರಹವನ್ನು ಚಂದ್ರನ ಕಕ್ಷೆಗೆ ಸೇರ್ಪಡೆಗೊಳಿಸಲಾಯಿತು ಎಂದು ಇಸ್ರೋ ಹೇಳಿದೆ.
ಬೆಳಗ್ಗೆ 8.30-9.30ರ ಅವಧಿಯಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಚಂದ್ರಯಾನ 2 ಉಪಗ್ರಹವನ್ನು ಚಂದ್ರನ ಕಕ್ಷೆಗೆ ಸೇರಿಸುವ ಕಾರ್ಯ ಮಾಡಿತ್ತು ಇದೊಂದು ಕಷ್ಟದ ಕೆಲಸ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್ ತಿಳಿಸಿದ್ದಾರೆ.
ಕಕ್ಷೆ ಬದಲಾವಣೆಯ ಮೊದಲ ಹಂತ ಇಂದು ನಡೆದಿದೆ. ಚಂದ್ರನ ಪ್ರಭಾವಳಿಯನ್ನು ಪ್ರವೇಶಿಸಿದ ಬಳಿಕ ಈ ಭಾಹ್ಯಾಕಾಶ ನೌಕೆ ತನ್ನ ಚಲನೆಯ ವೇಗವನ್ನು ಕುಂಠಿತಗೊಳಿಸುತ್ತಾ, ಚಂದ್ರನ ಗುರುತ್ವಾಕರ್ಷಣೆಗೆ ಒಳಗಾಗುವಂತೆ ಮಾಡಲಾಗುತ್ತದೆ. ಬಳಿಕ ಚಂದ್ರನ ಕಕ್ಷೆಯು 100 ಕಿ.ಮೀ ಸುತ್ತ ಈ ಬಾಹ್ಯಕಾಶ ನೌಕೆ ಚಲಿಸುವಂತೆ ಮಾಡಲು ಐದು ಹಂತದ ಕಾರ್ಯಾಚರಣೆ ಕೈಗೊಳ್ಳಲಾಗುತ್ತದೆ.ಲ್ಯಾಂಡರ್ ಅನ್ನು ಚಂದ್ರನಿಗೆ ಮತ್ತಷ್ಟು ಹತ್ತಿರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಎರಡು ಬಾರಿ ಅದರ ಕಕ್ಷೆಯ ಎತ್ತರವನ್ನು ಎತ್ತರಿಸಲಾಗುವುದು. ಸೆ.7ರಂದು ಅದನ್ನು ಚಂದಾಮಾಮನ ಅಂಗಳದ ಮೇಲೆ ಇಳಿಸಲಾಗುವುದು ಎಂದು ಇಸ್ರೋ ತಿಳಿಸಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಉಪಗ್ರಹ ಉಡಾವಣಾ ನೆಲೆಯಿಂದ ಚಂದ್ರಯಾನ-2 ಉಪಗ್ರಹವನ್ನು ಜಿಎಸ್ಎಲ್ವಿ ಮಾರ್ಕ್ 3 ಉಡಾಹಕದ ಮೂಲಕ ಜು.22ರಂದು ಉಡಾವಣೆ ಮಾಡಲಾಗಿತ್ತು. ಮೊದಲಿಗೆ ಉಪಗ್ರಹವನ್ನು ಭೂ ಕಕ್ಷೆಯಲ್ಲಿರಿಸಿ, ಹಂತ ಹಂತರವಾಗಿ ಕಕ್ಷೆಯನ್ನು ಎತ್ತರಿಸಿ, ಇದೀಗ ಚಂದ್ರನ ಕಕ್ಷೆಗೆ ರವಾನಿಸಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…