ಬೆಂಗಳೂರು: ಶ್ರೀ ಹರಿಕೋಟಾದಿಂದ ಜು. 22 ರಂದು ನಭಕ್ಕೆ ಚಿಮ್ಮಿದ ಚಂದ್ರಯಾನ 2 ನೌಕೆ ಚಂದ್ರನ ಕಕ್ಷೆ ಪ್ರವೇಶಿಸಿದೆ.ಉಡಾವಣೆ ಮಾಡಿದ 28 ದಿನಗಳ ಬಳಿಕ ಮಂಗಳವಾರ ಬೆಳಗ್ಗೆ 9.02ಕ್ಕೆ ಉಪಗ್ರಹವನ್ನು ಚಂದ್ರನ ಕಕ್ಷೆಗೆ ಸೇರ್ಪಡೆಗೊಳಿಸಲಾಯಿತು ಎಂದು ಇಸ್ರೋ ಹೇಳಿದೆ.
ಬೆಳಗ್ಗೆ 8.30-9.30ರ ಅವಧಿಯಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಚಂದ್ರಯಾನ 2 ಉಪಗ್ರಹವನ್ನು ಚಂದ್ರನ ಕಕ್ಷೆಗೆ ಸೇರಿಸುವ ಕಾರ್ಯ ಮಾಡಿತ್ತು ಇದೊಂದು ಕಷ್ಟದ ಕೆಲಸ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್ ತಿಳಿಸಿದ್ದಾರೆ.
ಕಕ್ಷೆ ಬದಲಾವಣೆಯ ಮೊದಲ ಹಂತ ಇಂದು ನಡೆದಿದೆ. ಚಂದ್ರನ ಪ್ರಭಾವಳಿಯನ್ನು ಪ್ರವೇಶಿಸಿದ ಬಳಿಕ ಈ ಭಾಹ್ಯಾಕಾಶ ನೌಕೆ ತನ್ನ ಚಲನೆಯ ವೇಗವನ್ನು ಕುಂಠಿತಗೊಳಿಸುತ್ತಾ, ಚಂದ್ರನ ಗುರುತ್ವಾಕರ್ಷಣೆಗೆ ಒಳಗಾಗುವಂತೆ ಮಾಡಲಾಗುತ್ತದೆ. ಬಳಿಕ ಚಂದ್ರನ ಕಕ್ಷೆಯು 100 ಕಿ.ಮೀ ಸುತ್ತ ಈ ಬಾಹ್ಯಕಾಶ ನೌಕೆ ಚಲಿಸುವಂತೆ ಮಾಡಲು ಐದು ಹಂತದ ಕಾರ್ಯಾಚರಣೆ ಕೈಗೊಳ್ಳಲಾಗುತ್ತದೆ.ಲ್ಯಾಂಡರ್ ಅನ್ನು ಚಂದ್ರನಿಗೆ ಮತ್ತಷ್ಟು ಹತ್ತಿರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಎರಡು ಬಾರಿ ಅದರ ಕಕ್ಷೆಯ ಎತ್ತರವನ್ನು ಎತ್ತರಿಸಲಾಗುವುದು. ಸೆ.7ರಂದು ಅದನ್ನು ಚಂದಾಮಾಮನ ಅಂಗಳದ ಮೇಲೆ ಇಳಿಸಲಾಗುವುದು ಎಂದು ಇಸ್ರೋ ತಿಳಿಸಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಉಪಗ್ರಹ ಉಡಾವಣಾ ನೆಲೆಯಿಂದ ಚಂದ್ರಯಾನ-2 ಉಪಗ್ರಹವನ್ನು ಜಿಎಸ್ಎಲ್ವಿ ಮಾರ್ಕ್ 3 ಉಡಾಹಕದ ಮೂಲಕ ಜು.22ರಂದು ಉಡಾವಣೆ ಮಾಡಲಾಗಿತ್ತು. ಮೊದಲಿಗೆ ಉಪಗ್ರಹವನ್ನು ಭೂ ಕಕ್ಷೆಯಲ್ಲಿರಿಸಿ, ಹಂತ ಹಂತರವಾಗಿ ಕಕ್ಷೆಯನ್ನು ಎತ್ತರಿಸಿ, ಇದೀಗ ಚಂದ್ರನ ಕಕ್ಷೆಗೆ ರವಾನಿಸಲಾಗಿದೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…