ಬೆಂಗಳೂರು: ಶ್ರೀ ಹರಿಕೋಟಾದಿಂದ ಜು. 22 ರಂದು ನಭಕ್ಕೆ ಚಿಮ್ಮಿದ ಚಂದ್ರಯಾನ 2 ನೌಕೆ ಚಂದ್ರನ ಕಕ್ಷೆ ಪ್ರವೇಶಿಸಿದೆ.ಉಡಾವಣೆ ಮಾಡಿದ 28 ದಿನಗಳ ಬಳಿಕ ಮಂಗಳವಾರ ಬೆಳಗ್ಗೆ 9.02ಕ್ಕೆ ಉಪಗ್ರಹವನ್ನು ಚಂದ್ರನ ಕಕ್ಷೆಗೆ ಸೇರ್ಪಡೆಗೊಳಿಸಲಾಯಿತು ಎಂದು ಇಸ್ರೋ ಹೇಳಿದೆ.
ಬೆಳಗ್ಗೆ 8.30-9.30ರ ಅವಧಿಯಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಚಂದ್ರಯಾನ 2 ಉಪಗ್ರಹವನ್ನು ಚಂದ್ರನ ಕಕ್ಷೆಗೆ ಸೇರಿಸುವ ಕಾರ್ಯ ಮಾಡಿತ್ತು ಇದೊಂದು ಕಷ್ಟದ ಕೆಲಸ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್ ತಿಳಿಸಿದ್ದಾರೆ.
ಕಕ್ಷೆ ಬದಲಾವಣೆಯ ಮೊದಲ ಹಂತ ಇಂದು ನಡೆದಿದೆ. ಚಂದ್ರನ ಪ್ರಭಾವಳಿಯನ್ನು ಪ್ರವೇಶಿಸಿದ ಬಳಿಕ ಈ ಭಾಹ್ಯಾಕಾಶ ನೌಕೆ ತನ್ನ ಚಲನೆಯ ವೇಗವನ್ನು ಕುಂಠಿತಗೊಳಿಸುತ್ತಾ, ಚಂದ್ರನ ಗುರುತ್ವಾಕರ್ಷಣೆಗೆ ಒಳಗಾಗುವಂತೆ ಮಾಡಲಾಗುತ್ತದೆ. ಬಳಿಕ ಚಂದ್ರನ ಕಕ್ಷೆಯು 100 ಕಿ.ಮೀ ಸುತ್ತ ಈ ಬಾಹ್ಯಕಾಶ ನೌಕೆ ಚಲಿಸುವಂತೆ ಮಾಡಲು ಐದು ಹಂತದ ಕಾರ್ಯಾಚರಣೆ ಕೈಗೊಳ್ಳಲಾಗುತ್ತದೆ.ಲ್ಯಾಂಡರ್ ಅನ್ನು ಚಂದ್ರನಿಗೆ ಮತ್ತಷ್ಟು ಹತ್ತಿರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಎರಡು ಬಾರಿ ಅದರ ಕಕ್ಷೆಯ ಎತ್ತರವನ್ನು ಎತ್ತರಿಸಲಾಗುವುದು. ಸೆ.7ರಂದು ಅದನ್ನು ಚಂದಾಮಾಮನ ಅಂಗಳದ ಮೇಲೆ ಇಳಿಸಲಾಗುವುದು ಎಂದು ಇಸ್ರೋ ತಿಳಿಸಿದೆ.
ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಉಪಗ್ರಹ ಉಡಾವಣಾ ನೆಲೆಯಿಂದ ಚಂದ್ರಯಾನ-2 ಉಪಗ್ರಹವನ್ನು ಜಿಎಸ್ಎಲ್ವಿ ಮಾರ್ಕ್ 3 ಉಡಾಹಕದ ಮೂಲಕ ಜು.22ರಂದು ಉಡಾವಣೆ ಮಾಡಲಾಗಿತ್ತು. ಮೊದಲಿಗೆ ಉಪಗ್ರಹವನ್ನು ಭೂ ಕಕ್ಷೆಯಲ್ಲಿರಿಸಿ, ಹಂತ ಹಂತರವಾಗಿ ಕಕ್ಷೆಯನ್ನು ಎತ್ತರಿಸಿ, ಇದೀಗ ಚಂದ್ರನ ಕಕ್ಷೆಗೆ ರವಾನಿಸಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…