Featured

ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಯಶಸ್ವಿ ಸಾಧಿಸಿದ ಇಸ್ರೋ ; ಚಂದ್ರನ ಕಕ್ಷೆ ಸೇರಿದ ಚಂದ್ರಯಾನ-2 -Vishwanews24

ಬೆಂಗಳೂರು:  ಶ್ರೀ ಹರಿಕೋಟಾದಿಂದ ಜು. 22 ರಂದು ನಭಕ್ಕೆ ಚಿಮ್ಮಿದ ಚಂದ್ರಯಾನ 2 ನೌಕೆ ಚಂದ್ರನ ಕಕ್ಷೆ ಪ್ರವೇಶಿಸಿದೆ.ಉಡಾವಣೆ ಮಾಡಿದ 28 ದಿನಗಳ ಬಳಿಕ ಮಂಗಳವಾರ ಬೆಳಗ್ಗೆ 9.02ಕ್ಕೆ ಉಪಗ್ರಹವನ್ನು ಚಂದ್ರನ ಕಕ್ಷೆಗೆ ಸೇರ್ಪಡೆಗೊಳಿಸಲಾಯಿತು ಎಂದು ಇಸ್ರೋ ಹೇಳಿದೆ.

ಬೆಳಗ್ಗೆ 8.30-9.30ರ ಅವಧಿಯಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಚಂದ್ರಯಾನ 2 ಉಪಗ್ರಹವನ್ನು ಚಂದ್ರನ ಕಕ್ಷೆಗೆ ಸೇರಿಸುವ ಕಾರ್ಯ ಮಾಡಿತ್ತು ಇದೊಂದು ಕಷ್ಟದ ಕೆಲಸ ಎಂದು ಇಸ್ರೋ ಅಧ್ಯಕ್ಷ ಕೆ. ಶಿವನ್​ ತಿಳಿಸಿದ್ದಾರೆ.

ಕಕ್ಷೆ ಬದಲಾವಣೆಯ ಮೊದಲ ಹಂತ ಇಂದು ನಡೆದಿದೆ. ಚಂದ್ರನ ಪ್ರಭಾವಳಿಯನ್ನು ಪ್ರವೇಶಿಸಿದ ಬಳಿಕ ಈ ಭಾಹ್ಯಾಕಾಶ ನೌಕೆ ತನ್ನ ಚಲನೆಯ ವೇಗವನ್ನು ಕುಂಠಿತಗೊಳಿಸುತ್ತಾ, ಚಂದ್ರನ ಗುರುತ್ವಾಕರ್ಷಣೆಗೆ ಒಳಗಾಗುವಂತೆ ಮಾಡಲಾಗುತ್ತದೆ. ಬಳಿಕ ಚಂದ್ರನ ಕಕ್ಷೆಯು 100 ಕಿ.ಮೀ ಸುತ್ತ ಈ ಬಾಹ್ಯಕಾಶ ನೌಕೆ ಚಲಿಸುವಂತೆ ಮಾಡಲು ಐದು ಹಂತದ ಕಾರ್ಯಾಚರಣೆ ಕೈಗೊಳ್ಳಲಾಗುತ್ತದೆ.ಲ್ಯಾಂಡರ್​ ಅನ್ನು ಚಂದ್ರನಿಗೆ ಮತ್ತಷ್ಟು ಹತ್ತಿರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಎರಡು ಬಾರಿ ಅದರ ಕಕ್ಷೆಯ ಎತ್ತರವನ್ನು ಎತ್ತರಿಸಲಾಗುವುದು. ಸೆ.7ರಂದು ಅದನ್ನು ಚಂದಾಮಾಮನ ಅಂಗಳದ ಮೇಲೆ ಇಳಿಸಲಾಗುವುದು ಎಂದು ಇಸ್ರೋ ತಿಳಿಸಿದೆ.

ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಉಪಗ್ರಹ ಉಡಾವಣಾ ನೆಲೆಯಿಂದ ಚಂದ್ರಯಾನ-2 ಉಪಗ್ರಹವನ್ನು ಜಿಎಸ್​ಎಲ್​ವಿ ಮಾರ್ಕ್​ 3 ಉಡಾಹಕದ ಮೂಲಕ ಜು.22ರಂದು ಉಡಾವಣೆ ಮಾಡಲಾಗಿತ್ತು. ಮೊದಲಿಗೆ ಉಪಗ್ರಹವನ್ನು ಭೂ ಕಕ್ಷೆಯಲ್ಲಿರಿಸಿ, ಹಂತ ಹಂತರವಾಗಿ ಕಕ್ಷೆಯನ್ನು ಎತ್ತರಿಸಿ, ಇದೀಗ ಚಂದ್ರನ ಕಕ್ಷೆಗೆ ರವಾನಿಸಲಾಗಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

4 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

5 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

5 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

5 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

5 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

6 hours ago