ಬೆಂಗಳೂರು: ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಯುವ ಕಾಂಗ್ರೆಸ್ ಮುಖಂಡ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ.
ರಕ್ಷಾ ರಾಮಯ್ಯ ಅವರು ಭಾರತೀಯ ಯುವ ಕಾಂಗ್ರೆಸ್ಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಭಡ್ತಿ ನೀಡಲಾಗುತ್ತಿದೆ. ನೇಮಕಾತಿಯು ತತ್ಕ್ಷಣ ಜಾರಿಗೆ ಬರಲಿದೆ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದ್ದಾರೆ.
ಪಕ್ಷ ಸಂಘಟನೆಗಾಗಿ ಪೂರ್ಣ ಸಮಯ ಮತ್ತು ಶಕ್ತಿಯನ್ನು ಉಪಯೋಗಿಸುವುದರೊಂದಿಗೆ ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಪಕ್ಷ ಬಲವರ್ಧನೆಯಲ್ಲಿ ಸದಾ ನಮ್ಮೊಂದಿಗೆ ಶ್ರಮಿಸುತ್ತೀರಿ ಎಂಬ ನಂಬಿಕೆಯನ್ನು ಹೊಂದಿದ್ದೇವೆ ಎಂದು ಅವರು ನೇಮಕಾತಿ ಆದೇಶದಲ್ಲಿ ತಿಳಿಸಿದ್ದಾರೆ.
ಹೊಸ ಜವಾಬ್ದಾರಿಯು ಕುರಿತು ಪ್ರತಿಕ್ರಿಯಿಸಿದ ರಕ್ಷಾ ರಾಮಯ್ಯ, ಪಕ್ಷ ನೀಡಿದ ಜವಾಬ್ದಾರಿಯನ್ನು ಸ್ವೀಕರಿಸಲು ಖುಷಿಯಾಗುತ್ತಿದೆ. ರಾಷ್ಟ್ರಮಟ್ಟದಲ್ಲಿ ಪಕ್ಷ ಬಲವರ್ಧನೆಗೆ ಸಂಘಟಿತನಾಗಿ ಶ್ರಮಿಸುತ್ತೇನೆ. ಉದಯಪುರದಲ್ಲಿ ನಡೆದ ಕಾಂಗ್ರೆಸ್ ಚಿಂತನಾ ಸಮಾವೇಶದಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನಕ್ಕೆ ನನ್ನೆಲ್ಲಾ ಶ್ರಮ ಹಾಕಿ ಕೆಲಸ ಮಾಡುತ್ತೇನೆ. ಯುವ ಕಾಂಗ್ರೆಸ್ ಬಲವರ್ಧನೆ ಮತ್ತು ಯುವಕರ ಧ್ವನಿಯಾಗಿ ಪಕ್ಷನಿಷ್ಠನಾಗಿ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…