Featured

ಭಾರತೀಯ ರಾಜಕಾರಣದಲ್ಲಿನ ಒಂದು ಅದ್ಭುತ ಅಧ್ಯಾಯವು ಕೊನೆಗೊಂಡಿದೆ, ಅವರೊಂದಿಗೆ ಕಾರ್ಯನಿರ್ವಹಿಸಿದ್ದ 5 ವರ್ಷದ ಅವಧಿ ಸ್ಮರಣೀಯ : ಪ್ರಧಾನಿ ಮೋದಿ -Vishwanews24

ನವದೆಹಲಿ,: ಭಾರತೀಯ ರಾಜಕಾರಣದಲ್ಲಿನ ಒಂದು ಅದ್ಭುತ ಅಧ್ಯಾಯವು ಕೊನೆಗೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸುಷ್ಮಾ ಸ್ವರಾಜ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

“ಸುಷ್ಮಾ ಸ್ವರಾಜ್ ಕೋಟ್ಯಾಂತರ ಜನರಿಗೆ ಸ್ಫೂರ್ತಿಯ ಮೂಲವಾಗಿದ್ದರು. ಸುಷ್ಮಾ ಅವರು ಅತ್ಯುತ್ತಮ ಸಂಸದೆಯಾಗಿದ್ದರು. ಕೇವಲ ಅವರು ಪಕ್ಷ ಮಾತ್ರವಲ್ಲ, ಅದರ ಆಚೆಗೂ ಸಹ ಮೆಚ್ಚುಗೆ ಪಡೆದವರು ಮತ್ತು ಗೌರವಿಸಲ್ಪಟ್ಟವರು. ಬಿಜೆಪಿಯ ಸಿದ್ಧಾಂತ ಮತ್ತು ಹಿತಾಸಕ್ತಿಗಳ ವಿಷಯಕ್ಕೆ ಬಂದಾಗ ಅವರು ರಾಜಿಯಾಗುತ್ತಿರಲಿಲ್ಲ. ಪಕ್ಷದ ಬೆಳವಣಿಗೆಗೆ ಅವರ ಕೊಡುಗೆ ಅಪಾರವಾದದ್ದು” ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಅಪ್ರತಿಮ ಸಂಸದೀಯ ಪಟುವಾಗಿದ್ದ ಸುಷ್ಮಾ ಅವರು, ಸರ್ಕಾರದ ಸಚಿವರಾಗಿ ಭಾರತದ ಸಂಬಂಧಗಳನ್ನು ಇತರೇ ದೇಶಗಳೊಂದಿಗೆ ಉತ್ತಮವಾಗಿಸಲು ಕಾರ್ಯನಿರ್ವಹಿಸಿದ್ದರು. ಅವರ ಅಗಲಿಕೆಯಿಂದ ನನಗೆ ವೈಯಕ್ತಿಕ ನಷ್ಟವಾಗಿದೆ. ಅವರೊಂದಿಗೆ ಕಾರ್ಯನಿರ್ವಹಿಸಿದ್ದ 5 ವರ್ಷದ ಅವಧಿ ಸ್ಮರಣೀಯವಾಗಿದ್ದು, ಅವರು ಅನಾರೋಗ್ಯದಿಂದಿದ್ದರೂ ಕೂಡ, ತಮ್ಮ ಕಾರ್ಯವನ್ನು ದೇಶಕ್ಕಾಗಿ ಮಾಡುತ್ತಿದ್ದರು ಎಂದು ಪ್ರಧಾನಿ ಮೋದಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.

ಸುಷ್ಮಾ ಅತ್ಯುತ್ತಮ ಆಡಳಿತಾಧಿಕಾರಿ. ಅವರು ನಿರ್ವಹಿಸಿದ ಪ್ರತಿಯೊಂದು ಜವಾಬ್ದಾರಿಯೂ ಉನ್ನತ ಗುಣಮಟ್ಟದ್ದಾಗಿತ್ತು. ಹಾಗೂ ಅವರು ಅದರಲ್ಲಿ ಅತ್ಯಂತ ಕಾಳಜಿಯನ್ನು, ಶ್ರದ್ದೆಯನ್ನೂ ಹೊಂದಿದ್ದರು. ವಿವಿಧ ರಾಷ್ಟ್ರಗಳೊಂದಿಗಿನ ಭಾರತ ಸಂಬಂಧಗಳನ್ನು ಉತ್ತಮಗೊಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಸಚಿವರಾಗಿ ನಾವು ಆಕೆಯ ಸಹಾನುಭೂತಿಯ ಮುಖವನ್ನು ಕಂಡಿದ್ದೇವೆ. ವಿಶ್ವದ ಯಾವುದೇ ಭಾಗದಲ್ಲಿ ಸಂಕಷ್ಟದಲ್ಲಿರುವ ಭಾರತೀಯರ ಪಾಲಿಗೆ ಸುಷ್ಮಾ ಅವರು ಸಹಾಯ ನೀಡದಿರುತ್ತಿರಲಿಲ್ಲ ಎಂದು ಹೇಳಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

6 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

6 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

7 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

7 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

8 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

8 hours ago