Featured

ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡ ಅಮೇರಿಕಾದ 2 ಎಂಹೆಚ್ -60 ಆರ್ ಹೆಲಿಕಾಪ್ಟರ್‌‌ಗಳು -Vishwanews24

ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡ ಅಮೇರಿಕಾದ 2 ಎಂಹೆಚ್ -60 ಆರ್ ಹೆಲಿಕಾಪ್ಟರ್‌‌ಗಳು -Vishwanews24

ಜಲಾಂತರ್ಗಾಮಿಗಳನ್ನು ಪತ್ತೆ ಮಾಡುವ ಹಾಗೂ ರಕ್ಷಣಾ ಕಾರ್ಯದಲ್ಲಿ ಮಹತ್ವದ ಪಾತ್ರ ವಹಿಸುವ ಅಮೇರಿಕಾ ನಿರ್ಮಿತ, ಎಂಹೆಚ್‌‌-60 ಆರ್ ಹೆಲಿಕಾಪ್ಟರ್‌…

ವಾಷಿಂಗ್ಟನ್ : ಜಲಾಂತರ್ಗಾಮಿಗಳನ್ನು ಪತ್ತೆ ಮಾಡುವ ಹಾಗೂ ರಕ್ಷಣಾ ಕಾರ್ಯದಲ್ಲಿ ಮಹತ್ವದ ಪಾತ್ರ ವಹಿಸುವ ಅಮೇರಿಕಾ ನಿರ್ಮಿತ, ಎಂಹೆಚ್‌‌-60 ಆರ್ ಹೆಲಿಕಾಪ್ಟರ್‌ ಶುಕ್ರವಾರ ಭಾರತೀಯ ನೌಕಾಪಡೆಗೆ ಸೇರ್ಪಡೆಯಾಗಿದೆ.

ಭಾರತೀಯ ನೌಕಾಪಡೆಗೆ ಮಲ್ಟಿ ರೋಲ್ ಹೆಲಿಕಾಪ್ಟರ್‌‌ ಎಂಆರ್‌ಹೆಚ್‌ ಅನ್ನು ಔಪಚಾರಿಕವಾಗಿ ಹಸ್ತಾಂತರಿಸುವ ಸಮಾರಂಭವನ್ನು ನೇವಲ್‌‌ ಏರ್‌ ಸ್ಟೇಷನ್‌‌ ನಾರ್ತ್‌ ಐಲ್ಯಾಂಡ್‌, ಸ್ಯಾನ್‌ ಡಿಯೊಗೋದಲ್ಲಿ ನಡೆಸಲಾಯಿತು.

ಈ ಬಗ್ಗೆ ಟ್ವೀಟ್‌ ಮಾಡಿರುವ ಅಮೇರಿಕಾ ನೌಕಾ ವಾಯುಪಡೆ, “ಇಂದು ಉತ್ತರ ಐಲ್ಯಾಂಡ್ನ ಅಮೇರಿಕಾದ ನೌಕಾ ವಾಯುನೆಲೆಯಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ವಾಯುಪಡೆಯು ಅಮೇರಿಕಾದಿಂದ ಮೊದಲ ಎರಡು ಎಂಹೆಚ್-60 ರೋಮಿಯೊ-ಸೀಹಾಕ್‌ಗಳನ್ನು ಪಡೆದುಕೊಂಡಿದೆ” ಎಂದು ತಿಳಿಸಿದೆ.

“ಅಮೇರಿಕಾದ ಜೊತೆಗಿನ ಒಪ್ಪಂದದಲ್ಲಿ ಭಾರತೀಯ ನೌಕಾಪಡೆಯು ಒಟ್ಟು 24 ಹೆಲಿಕಾಷ್ಟರ್‌ಗಳನ್ನು ಸ್ವೀಕರಿಸಿದೆ. ಅಮೇರಿಕಾ ಹಾಗೂ ಭಾರತೀಯ ನೌಕಾಪಡೆಗಳ ನಡುವಿನ ಸಹಕಾರವನ್ನು ಇದು ಹೆಚ್ಚಿಸುತ್ತದೆ” ಎಂದು ಹೇಳಿದೆ.

ಭಾರತದ ರಾಯಭಾರಿ ತಾರಂಜಿತ್ ಸಿಂಗ್ ಸಂಧು ಈ ಬಗ್ಗೆ ಟ್ವೀಟ್‌ ಮಾಡಿದ್ದು, “ಹೆಲಿಕಾಪ್ಟರ್‌ಗಳ ಸೇರ್ಪಡೆಯಿಂದ ಭಾರತ ಹಾಗೂ ಅಮೇರಿಕಾದ ರಕ್ಷಣಾ ಸಂಬಂಧಗಳು ಬಲಗೊಳ್ಳುತ್ತವೆ” ಎಂದಿ‌ದ್ದಾರೆ.

ಎಂಹೆಚ್‌‌-60 ಆರ್‌ ಹೆಲಿಕಾಪ್ಟರ್‌‌ ಎಲ್ಲಾ ಹವಾಮಾನದಲ್ಲಿಯೂ ಚಲಾಯಿಸಬಲ್ಲ ಸಮುದ್ರ ಹೆಲಿಕಾಪ್ಟರ್‌ ಆಗಿದ್ದು, ಅತ್ಯಾಧುನಿಕ ಏವಿಯಾನಿಕ್ಸ್‌ ನೊಂದಿಗೆ ಅನೇಕ ಕಾರ್ಯಾಚರಣೆಗಳನ್ನು ನಡೆಸಲು ವಿನ್ಯಾಸಗೊಳಿಸಲಾಗಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

21 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

1 day ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago