ಉಡುಪಿ: ಭಾರತೀಯ ವೈದ್ಯಕೀಯ ಸಂಘ ಉಡುಪಿ – ಕರಾವಳಿ ಇದರ ಅಧ್ಯಕ್ಷರಾಗಿ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರಾದ ಡಾ.ರಾಜಲಕ್ಷ್ಮೀ ಇವರು ಅವಿರೋಧವಾಗಿ ಆಯ್ಕೆಯಾಗಿ ಅಕ್ಟೋಬರ್ 8 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಇವರು ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ MBBS ಪದವಿಯ ಬಳಿಕ ಬೆಂಗಳೂರು ಮೆಡಿಕಲ್ ಕಾಲೇಜಿನಿಂದ ಹೆರಿಗೆ ಮತ್ತು ಸ್ತ್ರೀರೋಗ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದರು. ಕಳೆದ 20 ವರ್ಷಗಳಿಂದ ಸಂತೆಕಟ್ಟೆಯ ವಾತ್ಸಲ್ಯ ಕ್ಲಿನಿಕ್ ಮೂಲಕ ಸ್ತ್ರೀರೋಗ ತಜ್ಞರಾಗಿ ಸೇವೆ ಸಲ್ಲಿಸುವುದರ ಜೊತೆಗೆ ಜನಸಾಮಾನ್ಯರಿಗೆ ಆರೋಗ್ಯ ಮಾಹಿತಿಗಳನ್ನು ನೀಡಿ ಜಾಗೃತಿ ಮಾಡಿಸುವಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಉಪಾದ್ಯಕ್ಷರಾಗಿ ಡಾ.ನವೀನ್ ಬಲ್ಲಾಳ್, ಕಾರ್ಯದರ್ಶಿಯಾಗಿ ಡಾ.ಅರ್ಚನಾ ಭಕ್ತಾ, ಜೊತೆ ಕಾರ್ಯದರ್ಶಿಯಾಗಿ ಡಾ.ಶರತ್ ಚಂದ್ರ ರಾವ್, ಕೊಶಾಧಿಕಾರಿಯಾಗಿ ಡಾ.ಆಮ್ನಾ ಹೆಗ್ಡೆ, ಜೊತೆ ಕೊಶಾಧಿಕಾರಿಯಾಗಿ ಡಾ.ಪ್ರವೀಣ್ ಶಾಸ್ತ್ರೀ ಇವರು ಆಯ್ಕೆಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಡಾ.ವತ್ಸಲಾ ರಾವ್, ಡಾ.ವೀಣಾ ಉಮೇಶ್, ಡಾ.ಮೇಘಾ ಪೈ, ಡಾ.ಅಂಜಲಿ ಮುಂಡ್ಕೂರ್, ಡಾ.ಸಿಂಧೂರಾ ಲಕ್ಷ್ಮೀ, ಡಾ. ಗಣಪತಿ ಹೆಗ್ಡೆ, ಡಾ.ಅರುಣ್ ವರ್ಣೇಕರ್, ಡಾ.ಉಮೇಶ್ ನಾಯಕ್, ಡಾ.ಹರೀಶ್ ನಾಯಕ್, ಡಾ.ರಾಜಗೋಪಾಲ್ ಭಂಡಾರಿ, ಡಾ. ರಾಜೇಶ್ ಭಕ್ತಾ, ಡಾ.ವಾಸುದೇವ್ ಎಸ್, ಡಾ. ವೈ ಎಸ್ ರಾವ್, ಡಾ.ಸುನೀಲ್ ಮುಂಡ್ಕೂರ್, ಡಾ.ವಿಜಯಾ ವೈ.ಬಿ, ಡಾ.ಉಮೇಶ್ ಪ್ರಭು, ಡಾ.ಅಶೋಕ್ ಕುಮಾರ್ , ಡಾ.ಗೀತಾ ಪುತ್ರನ್, ಡಾ. ನರೇಂದ್ರ ಶೆಣೈ, ಡಾ. ವಿಜಯ್ ಕುಮಾರ್ ಶೇಟ್, ಡಾ.ಸನತ್ ರಾವ್, ಡಾ.ಪಿ.ವಿ ಭಂಡಾರಿ, ಡಾ.ಕೇಶವ್ ನಾಯಕ್ ಮತ್ತು ಡಾ.ದೀಪಕ್ ಮಲ್ಯ ಇವರು ಆಡಳಿತ ಮಂಡಳಿಯ ಸದಸ್ಯರಾಗಿರುತ್ತಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…