Featured

ಭಾರತೀಯ ವೈದ್ಯಕೀಯ ಸಂಘ ಉಡುಪಿ : ಕರಾವಳಿ ಅಧ್ಯಕ್ಷರಾಗಿ ಡಾ.ರಾಜಲಕ್ಷ್ಮೀ ಆಯ್ಕೆ – Vishwanews24

ಭಾರತೀಯ ವೈದ್ಯಕೀಯ ಸಂಘ ಉಡುಪಿ – ಕರಾವಳಿ ಅಧ್ಯಕ್ಷರಾಗಿ ಡಾ.ರಾಜಲಕ್ಷ್ಮೀ ಆಯ್ಕೆ

ಉಡುಪಿ: ಭಾರತೀಯ ವೈದ್ಯಕೀಯ ಸಂಘ ಉಡುಪಿ – ಕರಾವಳಿ ಇದರ ಅಧ್ಯಕ್ಷರಾಗಿ ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞರಾದ ಡಾ.ರಾಜಲಕ್ಷ್ಮೀ ಇವರು ಅವಿರೋಧವಾಗಿ ಆಯ್ಕೆಯಾಗಿ ಅಕ್ಟೋಬರ್ 8 ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಇವರು ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ MBBS ಪದವಿಯ ಬಳಿಕ ಬೆಂಗಳೂರು ಮೆಡಿಕಲ್ ಕಾಲೇಜಿನಿಂದ ಹೆರಿಗೆ ಮತ್ತು ಸ್ತ್ರೀರೋಗ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದರು. ಕಳೆದ 20 ವರ್ಷಗಳಿಂದ ಸಂತೆಕಟ್ಟೆಯ ವಾತ್ಸಲ್ಯ ಕ್ಲಿನಿಕ್ ಮೂಲಕ ಸ್ತ್ರೀರೋಗ ತಜ್ಞರಾಗಿ ಸೇವೆ ಸಲ್ಲಿಸುವುದರ ಜೊತೆಗೆ ಜನಸಾಮಾನ್ಯರಿಗೆ ಆರೋಗ್ಯ ಮಾಹಿತಿಗಳನ್ನು ನೀಡಿ ಜಾಗೃತಿ ಮಾಡಿಸುವಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಉಪಾದ್ಯಕ್ಷರಾಗಿ ಡಾ.ನವೀನ್ ಬಲ್ಲಾಳ್, ಕಾರ್ಯದರ್ಶಿಯಾಗಿ ಡಾ.ಅರ್ಚನಾ ಭಕ್ತಾ, ಜೊತೆ ಕಾರ್ಯದರ್ಶಿಯಾಗಿ ಡಾ.ಶರತ್ ಚಂದ್ರ ರಾವ್, ಕೊಶಾಧಿಕಾರಿಯಾಗಿ ಡಾ.ಆಮ್ನಾ ಹೆಗ್ಡೆ, ಜೊತೆ ಕೊಶಾಧಿಕಾರಿಯಾಗಿ ಡಾ.ಪ್ರವೀಣ್ ಶಾಸ್ತ್ರೀ ಇವರು ಆಯ್ಕೆಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಡಾ.ವತ್ಸಲಾ ರಾವ್, ಡಾ.ವೀಣಾ ಉಮೇಶ್, ಡಾ.ಮೇಘಾ ಪೈ, ಡಾ.ಅಂಜಲಿ ಮುಂಡ್ಕೂರ್, ಡಾ.ಸಿಂಧೂರಾ ಲಕ್ಷ್ಮೀ, ಡಾ. ಗಣಪತಿ ಹೆಗ್ಡೆ, ಡಾ.ಅರುಣ್ ವರ್ಣೇಕರ್, ಡಾ.ಉಮೇಶ್ ನಾಯಕ್, ಡಾ.ಹರೀಶ್ ನಾಯಕ್, ಡಾ.ರಾಜಗೋಪಾಲ್ ಭಂಡಾರಿ, ಡಾ. ರಾಜೇಶ್ ಭಕ್ತಾ, ಡಾ.ವಾಸುದೇವ್ ಎಸ್, ಡಾ. ವೈ ಎಸ್ ರಾವ್, ಡಾ.ಸುನೀಲ್ ಮುಂಡ್ಕೂರ್, ಡಾ.ವಿಜಯಾ ವೈ.ಬಿ, ಡಾ.ಉಮೇಶ್ ಪ್ರಭು, ಡಾ.ಅಶೋಕ್ ಕುಮಾರ್ , ಡಾ.ಗೀತಾ ಪುತ್ರನ್, ಡಾ. ನರೇಂದ್ರ ಶೆಣೈ, ಡಾ. ವಿಜಯ್ ಕುಮಾರ್ ಶೇಟ್, ಡಾ.ಸನತ್ ರಾವ್, ಡಾ.ಪಿ.ವಿ ಭಂಡಾರಿ, ಡಾ.ಕೇಶವ್ ನಾಯಕ್ ಮತ್ತು ಡಾ.ದೀಪಕ್ ಮಲ್ಯ ಇವರು ಆಡಳಿತ ಮಂಡಳಿಯ ಸದಸ್ಯರಾಗಿರುತ್ತಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago