ಹೊಸದಿಲ್ಲಿ: ಲೆಫ್ಟಿನೆಂಟ್ ಜನರಲ್ (ನಿವೃತ್ತ) ಎನ್.ಎಸ್. ರಾಜಾ ಸುಬ್ರಮಣಿ ಅವರನ್ನು ದೇಶದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್)ರನ್ನಾಗಿ ನೇಮಕ ಮಾಡಲಾಗಿದೆ. ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರು ನೌಕಾಪಡೆಯ ಮುಖ್ಯಸ್ಥರಾಗಿ ನಿಯೋಜಿತರಾಗಿದ್ದಾರೆ.
ಲೆಫ್ಟಿನೆಂಟ್ ಜನರಲ್ ಸುಬ್ರಮಣಿಯವರು ಭಾರತ ಸರ್ಕಾರದ ಮಿಲಿಟರಿ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ. ಹಾಲಿ ಸಿಡಿಎಸ್ ಆಗಿರುವ ಜನರಲ್ ಅನಿಲ್ ಚೌಹಾಣ್ ಅವರ ಆಡಳಿತಾವಧಿ ಈ ತಿಂಗಳ 30ರಂದು ಕೊನೆಗೊಳ್ಳಲಿದೆ.
ಇದನ್ನೂ ಓದಿ :
ಸುಬ್ರಮಣಿಯವರು ಪ್ರಸ್ತುತ ರಾಷ್ಟ್ರೀಯ ಭದ್ರತಾ ಮಂಡಳಿ ಕಾರ್ಯಾಲಯದಲ್ಲಿ ಮಿಲಿಟರಿ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ ವರ್ಷದ ಸೆಪ್ಟೆಂಬರ್ 1ರಂದು ಅವರು ಅಧಿಕಾರ ವಹಿಸಿಕೊಂಡಿದ್ದರು. ಅದಕ್ಕೂ ಮುನ್ನ, 2024ರ ಜುಲೈ 1ರಿಂದ 2025ರ ಜುಲೈ 31ರವರೆಗೆ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಹಾಗೂ 2023ರ ಮಾರ್ಚ್ನಿಂದ 2024ರ ಜೂನ್ವರೆಗೆ ಸೆಂಟ್ರಲ್ ಕಮಾಂಡ್ನ ಜನರಲ್ ಆಫೀಸರ್ ಕಮಾಂಡರ್-ಇನ್-ಚೀಫ್ ಆಗಿ ಕಾರ್ಯ ನಿರ್ವಹಿಸಿದ್ದರು.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವ ವೇಳೆ ಲೆಫ್ಟಿನೆಂಟ್ ಜನರಲ್ ಸುಬ್ರಮಣಿಯವರಿಗೆ ಹಲವು ಸೇನಾ ಗೌರವಗಳು ಸಂದಿವೆ. ಇದರಲ್ಲಿ ಪರಮ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ, ಸೇನಾ ಪದಕ ಹಾಗೂ ವಿಶಿಷ್ಟ ಸೇವಾ ಪದಕಗಳು ಸೇರಿವೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…