ಹೊಸದಿಲ್ಲಿ: ಲೆಫ್ಟಿನೆಂಟ್ ಜನರಲ್ (ನಿವೃತ್ತ) ಎನ್.ಎಸ್. ರಾಜಾ ಸುಬ್ರಮಣಿ ಅವರನ್ನು ದೇಶದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್)ರನ್ನಾಗಿ ನೇಮಕ ಮಾಡಲಾಗಿದೆ. ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರು ನೌಕಾಪಡೆಯ ಮುಖ್ಯಸ್ಥರಾಗಿ ನಿಯೋಜಿತರಾಗಿದ್ದಾರೆ.
ಲೆಫ್ಟಿನೆಂಟ್ ಜನರಲ್ ಸುಬ್ರಮಣಿಯವರು ಭಾರತ ಸರ್ಕಾರದ ಮಿಲಿಟರಿ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸಲಿದ್ದಾರೆ. ಹಾಲಿ ಸಿಡಿಎಸ್ ಆಗಿರುವ ಜನರಲ್ ಅನಿಲ್ ಚೌಹಾಣ್ ಅವರ ಆಡಳಿತಾವಧಿ ಈ ತಿಂಗಳ 30ರಂದು ಕೊನೆಗೊಳ್ಳಲಿದೆ.
ಇದನ್ನೂ ಓದಿ :
ಸುಬ್ರಮಣಿಯವರು ಪ್ರಸ್ತುತ ರಾಷ್ಟ್ರೀಯ ಭದ್ರತಾ ಮಂಡಳಿ ಕಾರ್ಯಾಲಯದಲ್ಲಿ ಮಿಲಿಟರಿ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ ವರ್ಷದ ಸೆಪ್ಟೆಂಬರ್ 1ರಂದು ಅವರು ಅಧಿಕಾರ ವಹಿಸಿಕೊಂಡಿದ್ದರು. ಅದಕ್ಕೂ ಮುನ್ನ, 2024ರ ಜುಲೈ 1ರಿಂದ 2025ರ ಜುಲೈ 31ರವರೆಗೆ ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಹಾಗೂ 2023ರ ಮಾರ್ಚ್ನಿಂದ 2024ರ ಜೂನ್ವರೆಗೆ ಸೆಂಟ್ರಲ್ ಕಮಾಂಡ್ನ ಜನರಲ್ ಆಫೀಸರ್ ಕಮಾಂಡರ್-ಇನ್-ಚೀಫ್ ಆಗಿ ಕಾರ್ಯ ನಿರ್ವಹಿಸಿದ್ದರು.
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವ ವೇಳೆ ಲೆಫ್ಟಿನೆಂಟ್ ಜನರಲ್ ಸುಬ್ರಮಣಿಯವರಿಗೆ ಹಲವು ಸೇನಾ ಗೌರವಗಳು ಸಂದಿವೆ. ಇದರಲ್ಲಿ ಪರಮ ವಿಶಿಷ್ಟ ಸೇವಾ ಪದಕ, ಅತಿ ವಿಶಿಷ್ಟ ಸೇವಾ ಪದಕ, ಸೇನಾ ಪದಕ ಹಾಗೂ ವಿಶಿಷ್ಟ ಸೇವಾ ಪದಕಗಳು ಸೇರಿವೆ.
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…
ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಇಂದು ಪ್ರಮಾಣ ವಚನ ಕೋಲ್ಕತ್ತಾ,: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ…
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…