Featured

ಭಾರತೀಯ ಸೇನೆಗೆ ಪ್ರಧಾನಿ ಮೋದಿಯಿಂದ ಭರ್ಜರಿ ಗಿಫ್ಟ್ ; ಬೆಚ್ಚಿಬಿದ್ದ ಪಾಕಿಸ್ತಾನ ಸೇನೆ

ಬಿರು ಬಿಸಿಲು ಒಂದು ಕಡೆಯಾದರೆ ಮತ್ತೊಂದು ಕಡೆ ಪಾಕಿಸ್ತಾನದಿಂದ ಭಾರತವನ್ನ ರಕ್ಷಿಸುವ ಮಹತ್ತರವಾದ ಜವಾಬ್ದಾರಿ ಭಾರತೀಯ ಸೇನೆಯದ್ದಾಗಿದೆ. ಗುಜರಾತಿನ ಮರಿಭೂಮಿಯಲ್ಲಿ ಗಡಿ ಕಾಯುವ ಸೈನಿಕರಿಗಾಗಿ ಸ್ವಾತಂತ್ರ್ಯಾನಂತರದ ಹಲವು ದಶಕಗಳೇ ಕಳೆದಿದ್ದರೂ ಕುಡಿಯುವ ನೀರಿನ ವ್ಯವಸ್ಥೆ ಸರಿಯಾಗಿರಲಿಲ್ಲ. ಆದರೆ ಗುಜರಾತ್ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಜೀ ಅಧಿಕಾರ ಸ್ವೀಕರಿಸಿದ ತಕ್ಷಣ ಕೈಗೊಂಡ ಕ್ರಮವೆಂದರೆ ಹಿಂದೆ ಒಂಟೆಗಳ ಮೂಲಕ ನೀರು ತರಬೇಕಿದ್ದ ಸ್ಥಿತಿಯನ್ನ ಬದಲಿಸಿ ನರ್ಮದಾ ನದಿಯ ಮೂಲಕ ಭಾರತೀಯ ಸೇನೆಗೆ ನೀರುಣಿಸುವ ಮಹತ್ತರವಾದ ಕಾರ್ಯವನ್ನ ಮಾಡಿ ಭಾರತೀಯ ಸೇನೆಯ ಪಾಲಿಗೆ ಆಧುನಿಕ ಭಗೀರಥ ಎನಿಸಿಕೊಂಡಿದ್ದರು.

ನಂತರ ಭಾರತದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿಜೀ ಭಾರತೀಯ ಸೇನೆಗೆ ಬಲ ತುಂಬುವ ಹಾಗು ಮಾನಸಿಕ ಆತ್ಮಸ್ಥೈರ್ಯವನ್ನೂ ತುಂವುವ ಕೆಲಸ ಮಾಡುತ್ತ ಸೇನೆಗೆ ಬೇಕಿರುವ ಪ್ರತಿಯೊಂದು ಸೌಲಭ್ಯಗಳನ್ನೂ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹಿಂದೆ ಹಳೆಯ ರೈಫಲ್‌ಗಳು, ಮಿಸೈಲ್‌ಗಳು, ಆಧುನಿಕ ಶಸ್ತ್ರಾಸ್ತ್ರಗಳನ್ನೇ ಇಟ್ಟುಕೊಂಡು ಪಾಪಿ ಪಾಕಿಸ್ತಾನ, ಭಯೋತ್ಪಾದಕರು, ಚೀನಾದ ವಿರುದ್ಧ ಸೆಣೆಸುತ್ತಿದ್ದ ಭಾರತೀಯ ಸೇನೆಗೆ ಮೋದಿಜೀ ಆಶಾಕಿರಣವಾಗಿ ಬಂದು ಸೇನೆಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳು, ಮಿಸೈಲ್‌ಗಳು, ಯುದ್ಧ ವಿಮಾನಗಳನ್ನ ನೀಡಿ ಸೇನೆಯ ಆತ್ಮಸ್ಥೈರ್ಯ ಹಾಗು ಬಲವನ್ನ ನೂರ್ಮಡಿಗೊಳಿಸಿದ್ದರು.

ಈ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಹಾಗು ಲಾಲ್‌ಬಹದ್ದೂರ್ ಶಾಸ್ತ್ರೀಜೀ ಯನ್ನ ಬಿಟ್ಟರೆ ಯುದ್ಧಭೂಮಿಯಲ್ಲಿ ಅಥವ ಸೇನಾನೆಲೆಗಳಲ್ಲಿ ಭಾರತೀಯ ಸೇನೆಯ ಕುಂದುಕೊರತೆಗಳನ್ನ ಕೇಳಲು ಯಾವ ಪ್ರಧಾನಿಯೂ ಹೋಗಿರಲಿಲ್ಲ ಆದರೆ ನರೇಂದ್ರ ಮೋದಿಜೀ ಮಾತ್ರ ದೀಪಾವಳಿಯಂದು ರಜೆ ತೆಗೆದುಕೊಂಡು ಆರಾಮಾಗಿ ಮನೇಲಿರಬಹುದೆಂದು ಯೋಚನೆ ಮಾಡದೆ ಸೈನಿಕರ ಜೊತೆ ದೀಪಾವಳಿ ಆಚರಿಸಿ ಬಂದದ್ದು ನಮಗೆಲ್ಲಾ ತಿಳಿದ ವಿಷಯವೇ.

ಭಾರತೀಯ ಸೇನೆ ಈ ಹಿಂದೆಂದಿಗಿಂತಲೂ ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಬಲಿಷ್ಟವಾಗಿದೆ. ಸೈನಿಕರಿಗೆ ಬುಲೆಟ್‌ಪ್ರೂಫ್ ಜಾಕೆಟ್, ಹಲವಾರು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಒಂದು ಶ್ರೇಣಿ ಒಂದು ಪಿಂಚಣಿ (OROP- One Rank One Pension) ಯೋಜನೆಯನ್ನೂ ಜಾರಿಗೊಳಿಸಿ ಮಾಜಿ ಸೈನಿಕರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದ್ದರು. ಇದೇ ಕಾರಣಕ್ಕೋ ಏನೋ ನರೇಂದ್ರ ಮೋದಿಜೀ ಎಂದರೆ ಭಾರತೀಯ ಸೈನಿಕರಿಗೆ ಎಲ್ಲಿಲ್ಲದ ಅಭಿಮಾನ,‌ ಪ್ರೀತಿ.

ಈಗ ಭಾರತೀಯ ಸೇನೆಗೆ ಮೋದಿಜೀ ನೀಡಿದ್ದಾರೆ ಮತ್ತೊಂದು ಮಹತ್ವದ ಗಿಫ್ಟ್:

ಸೈನಿಕರ ಈ ಕಷ್ಟವನ್ನ ಅರಿತಿರುವ ಪ್ರಧಾನಿ ಮೋದಿ ಭಾರತೀಯ ಸೈನಿಕರಿಗಾಗಿ ಮಹತ್ವದ ಯೋಜನೆಯೊಂದನ್ನ ಜಾರಿಗೆ ತರಲು ಮುಂದಾಗಿದ್ದಾರೆ. ಪ್ರಧಾನಿ ಮೋದಿಯವರ ಈ ಯೋಜನೆ ಗಡಿ ಕಾಯುವ ಬಿಎಸ್‌ಎಫ್ (ಬಾರ್ಡರ್ ಸೆಕ್ಯೂರಿಟಿ ಫೋರ್ಸ್) ಯೋಧರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ರಾಜಸ್ಥಾನದ ಜೋಧಪುರ್, ಜೈಸಲ್ಮೇರ್ ಹಾಗು ಬಾಢಮೇರ್ ದಂತಹ ಮರುಭೂಮಿ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಬಿಸಿಲಿನ ತಾಪ 50 ಡಿಗ್ರಿ ಸೆಂಟಿಗ್ರೇಡ್ ಗೆ ಏರಿಬಿಟ್ಟಿರುತ್ತದೆಯಂತೆ. ಇದರ ಹೊರತಾಗಿಯೂ ಭಾರತೀಯ ಸೇನೆಯ ಬಿಎಸ್‌ಎಫ್ ಯೋಧರು ದೇಶದ ಸುರಕ್ಷತೆಗಾಗಿ ಬಿರಿಬಿಸಿಲಿನಲ್ಲಿ ಗಡಿ ಕಾಯುತ್ತಾರೆ

ಇಲ್ಲಿಯವರೆಗೆ ಇಂತಹ ಬಿರುಬಿಸಿಲಿನ ಗಡಿ ಪ್ರದೇಶಗಳಿರುವ ಜಾಗಗಳಲ್ಲಿ ‘ಅಬ್ಸರ್ವೇಷನ್ ಪೋಸ್ಟ್’ ಗಳು ಇರುತ್ತಿದ್ದವು. ಇವುಗಳಿಂದ ಸೈನಿಕರಿಗೆ ಕೊಂಚ ಮಟ್ಟಿನ ರಲೀಫ್ ಸಿಗುತ್ತಿತ್ತು. ಆದರೆ ಈಗ ಮೋದಿ ಸರ್ಕಾರ ಈ ಅಬ್ಸರ್ವೇಷನ್ ಪೋಸ್ಟ್ ಗಳನ್ನ ಏರ್‌ಕಂಡೀಷನ್ ಗಳಾಗಿ ಪರಿವರ್ತಿಸಲು ಮುಂದಾಗಿದ್ದಾರೆ.

ಗಂಟೆಗಳ ಕಾಲ ಮರುಭೂಮಿಯಲ್ಲಿ ಗಡಿ ಕಾಯುವ ಸೈನಿಕರಿಗೆ ಸಿಗಲಿದೆ ಈ ಸೌಲಭ್ಯ:

ರಾಜಸ್ಥಾನದ ಜೈಸಲ್ಮೇರ್ ನಿಂದ ಪಾಕಿಸ್ತಾನದ ಕುಕೃತ್ಯಗಳ ಮೇಲೆ ಕಣ್ಣಿಡಲು ಭಾರತೀಯ ಸೇನೆಯ ಬಿಎಸ್‌ಎಫ್ ಯೋಧರು ಭೀಕರ ಬಿರು ಬಿಸಿಲಿನಲ್ಲೂ ಹದ್ದಿನ ಕಣ್ಣಿಟ್ಟು ಗಡಿ ಕಾಯ ಬೇಕಾದ ಪರಿಸ್ಥಿತಿಯಿದೆ. ಗಡಿಯಲ್ಲಿನ ಸೈನಿಕರ ಈ ಸಮಸ್ಯೆಗೆ ಇದೀಗ ಮುಕ್ತಿ ಕಾಣಿಸಲು ಪ್ರಧಾನಿ ಮೋದಿ ಇದೀಗ ಸೈನಿಕರಿಗೆ ಏರ್‌ಕಂಡೀಷನ್ ಸೌಲಭ್ಯ ಒದಗಿಸಲಿದ್ದಾರೆ.

ಅಬ್ಸರ್ವೇಷನ್ ಪೋಸ್ಟ್‌ ಗಳನ್ನ ಏರ್‌ಕಂಡೀಷನ್ ಮಾಡಿಸುವುದರಿಂದ ಭಾರತೀಯ ಸೇನೆಯ ಸೈನಿಕರಿಗೆ ಇದೀಗ ಬಿರುಬಿಸಿಲಿನಲ್ಲಿ ಗಂಟೆಗಟ್ಟಲೆ ಗಡಿ ಕಾಯುವ ಕೆಲಸ ಹಾಗು ತಮ್ಮ ಆರೋಗ್ಯದ ರಕ್ಷಣೆಯೂ ಸುಲಭದಾಯಕವಾಗಲಿದೆ. ಸುದ್ದಿ ಮೂಲಗಳ ಪ್ರಕಾರ ಗಡಿಯಲ್ಲಿನ ಇಂತಹ ಕ್ಷೇತ್ರಗಳಲ್ಲಿ ಮೂರು ಕಿಲೋಮೀಟರ್‌ಗೊಂದರಂತೆ ಒಂದು ಅಬ್ಸರ್ವೇಷನ್ ಪೋಸ್ಟ್ ಗಳನ್ನ ಸ್ಥಾಪಿಸಲು ನಿರ್ಧರಿಸಲಿದ್ದು ಇವುಗಳೆಲ್ಲ ಏರ್‌ಕಂಡೀಷನ್ ಸೌಲಭ್ಯ ಹೊಂದಿರಲಿವೆ.

ಬಿರುಬಿಸಿಲಿರುವ ಮರುಭೂಮಿಯ ಸ್ಥಳಗಳಲ್ಲಿ ಸಾಮಾನ್ಯವಾಗಿ ಬಿಸಿಲು 50 ಡಿಗ್ರಿ ತಲುಪಿಬಿಡುತ್ತದೆ, ಮೇ ತಿಂಗಳಿನಲ್ಲಂತೂ ಇನ್ನೂ ಹೆಚ್ಚಾದರೂ ಆಶ್ಚರ್ಯಪಡಬೇಕಿಲ್ಲ ಡಂಬ ಪರಿಸ್ಥಿತಿ ಮರುಭೂಮಿ ಪ್ರದೇಶಗಳಲ್ಲಿದೆ. ಇಂತಹ ವಿಷಮ ಪರಿಸ್ಥಿಯನ್ನ ಎದುರಿಸಲು ಭಾಎತೀಯ ಸೈನಿಕರಿಗೆ ನಿರಂತರವಾಗಿ ನಿಂಬೆ ಹಣ್ಣಿನ ಪಾನಕ ಹಾಗು ಗ್ಲೂಕೋಸ್‌ನ್ನ ನೀಡಲಾಗುತ್ತಿರುತ್ತದೆ. ಪ್ರತಿ ಎರಡು ಗಂಟೆಗಳಿಗೊಮ್ಮೆ ಸೈನಿಕರ ಶಿಫ್ಟ್ ಬದಲಾಗುವುದರಿಂದ ಸೈನಿಕರು ಅನಾರೋಗ್ಯದಿಂದ ಬಳಲುವುದನ್ನ ತಪ್ಪಿಸಲಾಗುವಂತ ವ್ಯವಸ್ಥೆಯಿದೆ. ಇದರ ಜೊತೆ ಜೊತೆಗೆ ಭಾರತೀಯ ಸೇನೆಯ ಸೈನಿಕರು ಡೆಸರ್ಟ್ ಸ್ಕೂಟರ್(ಮರುಭೂಮಿಯಲ್ಲಿ ಚಲಿಸುವ ಬೈಕ್) ಕೂಡ ಗಡಿ ಸರ್ವೇಕ್ಷಣೆ ಕಾರ್ಯಕ್ಕಾಗಿ ಮಾಡಬೇಕಾಗುತ್ತದೆ.

ಬಿರುಬಿಸಿಲಿನಿಂದ ಕಣ್ಣುಗಳನ್ನ ರಕ್ಷಿಸಿಕೊಳ್ಳಲು ಕಣ್ಣಿಗೆ ಕೂಲಿಂಗ್ ಗ್ಲಾಸ್, ಒಂದು ಬಾಟಲಿಯಲ್ಲಿ ನೀರು ಹಾಗು ತಲೆಗೆ ಟೋಪಿ ಹಾಕಿಕೊಳ್ಳುವುದು ಗಡಿ ಕಾಯುವ ಸೈನಿಕರ ದಿನನಿತ್ಯದ ಕಾರ್ಯವಾಗಿದೆ. ಇಂತಹ ಪ್ರದೇಶಗಳಲ್ಲಿ‌ನ ಅಬ್ಸರ್ವೇಷನ್ ಪೋಸ್ಟ್ ಗಳಲ್ಲಿ ಏರ್‌ಕಂಡೀಷನ್ ಅಳವಡಿಸಿರುವ ಮೋದಿ ಸರ್ಕಾರದ ಕಾರ್ಯಕ್ಕೆ ಸೈನಿಕರು ಖುಷ್ ಆಗಿದ್ದು ಪ್ರಧಾನಿ ಮೋದಿಗೆ ಧನ್ಯವಾದ ಹೇಳಿದ್ದಾರೆ.

 

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

7 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

7 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

7 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

9 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

10 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

10 hours ago