Featured

ಭಾರತೀಯ ಸೇನೆ ಸೇರಿ ಹುತಾತ್ಮ ಯೋಧನಿಗೆ ನಿಜವಾದ ಗೌರವ ಸಲ್ಲಿಸಿದ ಪತ್ನಿ – Vishwanews24

ಮುಂಬೈ, :ಡಿಸೆಂಬರ್ 2017ರಲ್ಲಿ ಅರುಣಾಚಲ ಪ್ರದೇಶದ ಗಡಿಭಾಗ ತವಾಂಗ್‍ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಮೇಜರ್ ಪ್ರಸಾದ್ ಮಹದಿಕ್ ಅವರ ಪತ್ನಿ ಗೌರಿ ಮಹದಿಕ್ ಭಾರತೀಯ ಸೇನೆ ಸೇರುವ ಮೂಲಕ ದೇಶಸೇವೆ ಮಾಡಲು ಮುಂದಾಗಿದ್ದಾರೆ.

ಮೂಲತಃ ಮುಂಬೈ ವಿರಾರ್ ಪ್ರದೇಶದ ನಿವಾಸಿಯಾದ ಗೌರಿಗೆ ಈಗ 32 ವರ್ಷ. ತನ್ನ ಪತಿಗೆ ಗೌರವ ಸಲ್ಲಿಸುವುದಕ್ಕಾಗಿ ತಾನು ಸೇನೆ ಸೇರಲು ನಿರ್ಧರಿಸಿದ್ದೇನೆ ಎಂದು ಗೌರಿ ಹೇಳಿದ್ದಾರೆ. ಪತಿ ಸಾವನ್ನಪ್ಪಿದ ಕೆಲವೇ ದಿನಗಳಲ್ಲಿ ಗೌರಿ ಸೇನೆಗೆ ಸೇರ್ಪಡೆಯಾಗಲು ನಿರ್ಧರಿಸಿದರಂತೆ. ಒಂದು ವರ್ಷ ಮಿಲಿಟರಿ ತರಬೇತಿ ಪಡೆದ ಗೌರಿ ಲೆಫ್ಟಿನೆಂಟ್ ಆಗಿ ಸೇನೆಗೆ ಸೇರಲಿದ್ದಾರೆ. ಸರ್ವೀಸಸ್ ಸೆಲೆಕ್ಷನ್ ಬೋರ್ಡ್ (ಎಸ್‍ಎಸ್‍ಬಿ) ಪರೀಕ್ಷೆಯಲ್ಲಿ ಎರಡನೇ ಪ್ರಯತ್ನದಲ್ಲಿ ವಿಧವೆಯರ ಕೆಟಗರಿಯಲ್ಲಿ ಗೌರಿ ಟಾಪರ್ ಆಗಿದ್ದಾರೆ.

ಒಂದು ವರ್ಷದ ನಂತರ ಇದೀಗ ಅಧಿಕಾರಿಗಳ ತರಬೇತಿ ಸಂಸ್ಥೆಗೆ ಸೇರಲು ಎಲ್ಲ ಸಿದ್ಧತೆ ನಡೆಸಿದ್ದಾರೆ. “ನಾನು ವಕೀಲೆ ಹಾಗೂ ಕಂಪನಿ ಸೆಕ್ರೆಟರಿ. ಉದ್ಯೋಗ ಮಾಡಿಕೊಂಡಿದ್ದೆ. ನನ್ನ ಪತಿಯ ಮರಣದ ನಂತರ ಉದ್ಯೋಗವನ್ನು ಬಿಟ್ಟೆ. ಸೇನೆಗೆ ಸೇರಲು ತಯಾರಿ ನಡೆಸಿದೆ. ಆ ಮೂಲಕ ನನ್ನ ಪತಿಗೆ ಗೌರವ ಸಲ್ಲಿಸಬೇಕು ಅಂದುಕೊಂಡೆ.

ಮಿಲಿಟರಿ ಸೇವೆ ಸಲ್ಲಿಸುತ್ತಿರುವ ಬಗ್ಗೆ ಗೌರವ ಮತ್ತು ಹೆಮ್ಮೆ ಇದೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ನನ್ನ ಧೀರ ಪತಿಗೆ ನನ್ನ ಈ ಸಾಧನೆಯನ್ನು ಅರ್ಪಿಸುತ್ತಿದ್ದೇನೆ ಎಂದು ಗೌರಿ ಹೇಳಿದ್ದಾರೆ. ನನ್ನ ಜೀವನದಲ್ಲಿ ಅದು ಕಷ್ಟದ ದಿನಗಳಾಗಿದ್ದವು. ಆಗ ನಾನು ವಾಸ್ತವವನ್ನು ಸ್ವೀಕರಿಸಲು ಸಿದ್ಧಳಿರಲಿಲ್ಲ. ಕೆಲವು  ತಿಂಗಳ ನಂತರ ನಾನು ಸೇನೆ  ಸೇರಲು ನಿರ್ಧರಿಸಿದೆ. ಈ ಕನಸನ್ನು ನನಸು ಮಾಡಲು ನಾನು ಮಾನಸಿಕವಾಗಿ ತುಂಬಾ ಗಟ್ಟಿಯಾದೆ ಎಂದು ಗೌರಿ ಹೇಳಿಕೊಂಡಿದ್ದಾರೆ.

ಕಳೆದ ವರ್ಷ ಸರ್ವೀಸ್ ಸೆಲೆಕ್ಷನ್ ಬೋರ್ಡ್ (SSB) ಪರೀಕ್ಷೆ ಎದುರಿಸಿ ತೇರ್ಗಡೆಯಾಗಿದ್ದ ಅವರು OTA ದಲ್ಲಿ ತರಬೇತಿಗೆಂದು ಆಯ್ಕೆಯಾಗಿದ್ದಾರೆ. ಏಪ್ರಿಲ್ ತಿಂಗಳಿಂದ ಆರಂಭವಾಗುವ 49 ವಾರಗಳ ತರಬೇತಿ ಮುಗಿಸಿದ ಬಳಿಕ ಮಾರ್ಚ್ 20 ರಿಂದ ಅವರು ಸೈನ್ಯ ಸೇರಲಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago