ಮುಂಬೈ, :ಡಿಸೆಂಬರ್ 2017ರಲ್ಲಿ ಅರುಣಾಚಲ ಪ್ರದೇಶದ ಗಡಿಭಾಗ ತವಾಂಗ್ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಮೇಜರ್ ಪ್ರಸಾದ್ ಮಹದಿಕ್ ಅವರ ಪತ್ನಿ ಗೌರಿ ಮಹದಿಕ್ ಭಾರತೀಯ ಸೇನೆ ಸೇರುವ ಮೂಲಕ ದೇಶಸೇವೆ ಮಾಡಲು ಮುಂದಾಗಿದ್ದಾರೆ.
ಮೂಲತಃ ಮುಂಬೈ ವಿರಾರ್ ಪ್ರದೇಶದ ನಿವಾಸಿಯಾದ ಗೌರಿಗೆ ಈಗ 32 ವರ್ಷ. ತನ್ನ ಪತಿಗೆ ಗೌರವ ಸಲ್ಲಿಸುವುದಕ್ಕಾಗಿ ತಾನು ಸೇನೆ ಸೇರಲು ನಿರ್ಧರಿಸಿದ್ದೇನೆ ಎಂದು ಗೌರಿ ಹೇಳಿದ್ದಾರೆ. ಪತಿ ಸಾವನ್ನಪ್ಪಿದ ಕೆಲವೇ ದಿನಗಳಲ್ಲಿ ಗೌರಿ ಸೇನೆಗೆ ಸೇರ್ಪಡೆಯಾಗಲು ನಿರ್ಧರಿಸಿದರಂತೆ. ಒಂದು ವರ್ಷ ಮಿಲಿಟರಿ ತರಬೇತಿ ಪಡೆದ ಗೌರಿ ಲೆಫ್ಟಿನೆಂಟ್ ಆಗಿ ಸೇನೆಗೆ ಸೇರಲಿದ್ದಾರೆ. ಸರ್ವೀಸಸ್ ಸೆಲೆಕ್ಷನ್ ಬೋರ್ಡ್ (ಎಸ್ಎಸ್ಬಿ) ಪರೀಕ್ಷೆಯಲ್ಲಿ ಎರಡನೇ ಪ್ರಯತ್ನದಲ್ಲಿ ವಿಧವೆಯರ ಕೆಟಗರಿಯಲ್ಲಿ ಗೌರಿ ಟಾಪರ್ ಆಗಿದ್ದಾರೆ.
ಒಂದು ವರ್ಷದ ನಂತರ ಇದೀಗ ಅಧಿಕಾರಿಗಳ ತರಬೇತಿ ಸಂಸ್ಥೆಗೆ ಸೇರಲು ಎಲ್ಲ ಸಿದ್ಧತೆ ನಡೆಸಿದ್ದಾರೆ. “ನಾನು ವಕೀಲೆ ಹಾಗೂ ಕಂಪನಿ ಸೆಕ್ರೆಟರಿ. ಉದ್ಯೋಗ ಮಾಡಿಕೊಂಡಿದ್ದೆ. ನನ್ನ ಪತಿಯ ಮರಣದ ನಂತರ ಉದ್ಯೋಗವನ್ನು ಬಿಟ್ಟೆ. ಸೇನೆಗೆ ಸೇರಲು ತಯಾರಿ ನಡೆಸಿದೆ. ಆ ಮೂಲಕ ನನ್ನ ಪತಿಗೆ ಗೌರವ ಸಲ್ಲಿಸಬೇಕು ಅಂದುಕೊಂಡೆ.
ಮಿಲಿಟರಿ ಸೇವೆ ಸಲ್ಲಿಸುತ್ತಿರುವ ಬಗ್ಗೆ ಗೌರವ ಮತ್ತು ಹೆಮ್ಮೆ ಇದೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ನನ್ನ ಧೀರ ಪತಿಗೆ ನನ್ನ ಈ ಸಾಧನೆಯನ್ನು ಅರ್ಪಿಸುತ್ತಿದ್ದೇನೆ ಎಂದು ಗೌರಿ ಹೇಳಿದ್ದಾರೆ. ನನ್ನ ಜೀವನದಲ್ಲಿ ಅದು ಕಷ್ಟದ ದಿನಗಳಾಗಿದ್ದವು. ಆಗ ನಾನು ವಾಸ್ತವವನ್ನು ಸ್ವೀಕರಿಸಲು ಸಿದ್ಧಳಿರಲಿಲ್ಲ. ಕೆಲವು ತಿಂಗಳ ನಂತರ ನಾನು ಸೇನೆ ಸೇರಲು ನಿರ್ಧರಿಸಿದೆ. ಈ ಕನಸನ್ನು ನನಸು ಮಾಡಲು ನಾನು ಮಾನಸಿಕವಾಗಿ ತುಂಬಾ ಗಟ್ಟಿಯಾದೆ ಎಂದು ಗೌರಿ ಹೇಳಿಕೊಂಡಿದ್ದಾರೆ.
ಕಳೆದ ವರ್ಷ ಸರ್ವೀಸ್ ಸೆಲೆಕ್ಷನ್ ಬೋರ್ಡ್ (SSB) ಪರೀಕ್ಷೆ ಎದುರಿಸಿ ತೇರ್ಗಡೆಯಾಗಿದ್ದ ಅವರು OTA ದಲ್ಲಿ ತರಬೇತಿಗೆಂದು ಆಯ್ಕೆಯಾಗಿದ್ದಾರೆ. ಏಪ್ರಿಲ್ ತಿಂಗಳಿಂದ ಆರಂಭವಾಗುವ 49 ವಾರಗಳ ತರಬೇತಿ ಮುಗಿಸಿದ ಬಳಿಕ ಮಾರ್ಚ್ 20 ರಿಂದ ಅವರು ಸೈನ್ಯ ಸೇರಲಿದ್ದಾರೆ.
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…