Featured

ಭಾರತ್‌ ಜೋಡೋ ಐಕ್ಯತಾ ಯಾತ್ರೆ – ಗಾಂಧೀಜಿ ಬ್ರಿಟಿಷರನ್ನು ದೇಶ ಬಿಟ್ಟು ತೊಲಗಿಸಿದಂತೆ ರಾಹುಲ್‌ ಗಾಂಧಿಯಿಂದ ಬಿಜೆಪಿ ಅಧಿಕಾರದಿಂದ ತೊಲಗಲಿದೆ : ಮಯೂರ್‌ ಜಯಕುಮಾರ್‌ – Vishwanews24

ಭಾರತ್‌ ಜೋಡೋ ಐಕ್ಯತಾ ಯಾತ್ರೆ – ಗಾಂಧೀಜಿ ಬ್ರಿಟಿಷರನ್ನು ದೇಶ ಬಿಟ್ಟು ತೊಲಗಿಸಿದಂತೆ ರಾಹುಲ್‌ ಗಾಂಧಿ ಯಾತ್ರೆಯಿಂದ ಬಿಜೆಪಿ ಅಧಿಕಾರದಿಂದ ತೊಲಗಲಿದೆ

ಹರಿಹರ  : ಮಹಾತ್ಮ ಗಾಂಧೀಜಿ ಬ್ರಿಟಿಷರನ್ನು ದೇಶ ಬಿಟ್ಟು ತೊಲಗಿಸಿದಂತೆ ರಾಹುಲ್‌ ಗಾಂಧಿ ಭಾರತ್‌ ಜೋಡೋ ಐಕ್ಯತಾ ಯಾತ್ರೆಯಿಂದ ಬಿಜೆಪಿ ಅಧಿಕಾರದಿಂದ ತೊಲಗಲಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಮಯೂರ್‌ ಜಯಕುಮಾರ್‌ ಹೇಳಿದ್ದಾರೆ.

ನಗರದ ಎಚ್‌.ಕೆ.ವೀರಪ್ಪ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್‌ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ರಾಹುಲ್‌ಗಾಂಧಿ 3,570 ಕಿಮೀ ದೂರ ಭಾರತ್‌ ಜೋಡೋ ಪಾದಯಾತ್ರೆ ಮಾಡುತ್ತಿದ್ದು, ಅ.12ಕ್ಕೆ ದಾವಣಗೆರೆಗೆ ಆಗಮಿಸಲಿದೆ. ಪಾದಯಾತ್ರೆಗೆ ಸಂಪೂರ್ಣ ಸಹಕಾರ ನೀಡಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಶಾಸಕ ಎಸ್‌.ರಾಮಪ್ಪ ಮಾತನಾಡಿ, ರಾಹುಲ್‌ ಗಾಂಧಿಯವರು ಕಾಂಗ್ರೆಸ್‌ನ್ನು ಗೆಲ್ಲಿಸಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಅಭೂತಪೂರ್ವ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು ಜನರಲ್ಲಿ ಜಾಗೃತಿ ಮೂಡಿಸಿ ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಮಾಡಬೇಕಿದೆ ಎಂದು ತಿಳಿಸಿದರು.

ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ…? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ? ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್‌

ಮುಖಂಡ ಎನ್‌.ಎಚ್‌.ಶ್ರೀನಿವಾಸ್‌ ನಂದಿಗಾವಿ, ಆಡಳಿತದಲ್ಲಿರುವ ಬಿಜೆಪಿ ಪರಿಶಿಷ್ಟಜಾತಿ ಮತ್ತು ವರ್ಗ ಹಾಗೂ ಹಿಂದುಳಿದವರ ಕಾಳಜಿ ಮರೆತಿದೆ. ಇದು 40 ಪರ್ಸೆಂಟ್‌ ಕಮಿಷನ್‌ ಸರ್ಕಾರವಾಗಿದೆ. ಮುಂದೆ ಇದು 50 ಪರ್ಸೆಂಟ್‌ ಆಗುವ ಸಾಧ್ಯತೆ ಇದ್ದು, ಜನರು ಈ ಸರ್ಕಾರವನ್ನು ಕಿತ್ತೊಗೆಯುವ ನಿರ್ಧಾರ ಕೈಗೊಂಡಿದ್ದಾರೆ. ಹಾಗಾಗಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಬೇಕು ಎಂದು ಹೇಳಿದರು. ದೇವೇಂದ್ರಪ್ಪ ಕುಣೆಬೆಳೆಕೆರೆ ಮಾತನಾಡಿ, ಜೀವನಾವಶ್ಯಕ ವಸ್ತುಗಳ ಬೆಲೆಯನ್ನು ಏರಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಜನರು ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಜಿಲ್ಲಾ ವಕ್ತಾರರಾದ ಎಂ.ನಾಗೇಂದ್ರಪ್ಪ, ಬಿಜೆಪಿ ಕೆಟ್ಟಸರ್ಕಾರವನ್ನು ಕಿತ್ತೊಗೆಯುವ ನಿರ್ಧಾರದಿಂದ ನಮ್ಮ ನಾಯಕ ರಾಹುಲ್‌ ಗಾಂಧಿ 3570 ಕಿಲೋಮೀಟರ್‌ ಐಕ್ಯತಾ ಪಾದ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ ಎಂದು ಹೇಳಿದರು.

PFI ನಿಷೇಧ : ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ – Vishwanews24

ಪಕ್ಷದ ವೀಕ್ಷಕರಾದ ಕವಿತಾ ರೆಡ್ಡಿ, ಅಮೃತೇಶ ಸ್ವಾಮಿ, ವಿಜಯಕುಮಾರ್‌, ಬಿ. ರೇವಣಸಿದ್ದಪ್ಪ, ಎ.ಗೋವಿಂದರೆಡ್ಡಿ, ಕುಂಬಳೂರು ವಿರೂಪಾಕ್ಷಪ್ಪ, ನಗರಸಭೆ ಸದಸ್ಯರಾದ ಶಂಕರ್‌ ಕಟಾವ್ಕರ್‌, ಎಂ.ಎಸ್‌. ಬಾಬುಲಾಲ್‌, ಅಬ್ದುಲ್‌ ಅಲೀಮ್‌, ದಾದಾಪೀರ್‌, ಅಶೋಕ್‌ ಮಾಸ್ಟರ್‌, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ನಿಖಿಲ್‌ ಕೊಂಡಜ್ಜಿ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 days ago