Featured

ಭಾರತ್‌ ಜೋಡೋ ಐಕ್ಯತಾ ಯಾತ್ರೆ – ಗಾಂಧೀಜಿ ಬ್ರಿಟಿಷರನ್ನು ದೇಶ ಬಿಟ್ಟು ತೊಲಗಿಸಿದಂತೆ ರಾಹುಲ್‌ ಗಾಂಧಿಯಿಂದ ಬಿಜೆಪಿ ಅಧಿಕಾರದಿಂದ ತೊಲಗಲಿದೆ : ಮಯೂರ್‌ ಜಯಕುಮಾರ್‌ – Vishwanews24

ಭಾರತ್‌ ಜೋಡೋ ಐಕ್ಯತಾ ಯಾತ್ರೆ – ಗಾಂಧೀಜಿ ಬ್ರಿಟಿಷರನ್ನು ದೇಶ ಬಿಟ್ಟು ತೊಲಗಿಸಿದಂತೆ ರಾಹುಲ್‌ ಗಾಂಧಿ ಯಾತ್ರೆಯಿಂದ ಬಿಜೆಪಿ ಅಧಿಕಾರದಿಂದ ತೊಲಗಲಿದೆ

ಹರಿಹರ  : ಮಹಾತ್ಮ ಗಾಂಧೀಜಿ ಬ್ರಿಟಿಷರನ್ನು ದೇಶ ಬಿಟ್ಟು ತೊಲಗಿಸಿದಂತೆ ರಾಹುಲ್‌ ಗಾಂಧಿ ಭಾರತ್‌ ಜೋಡೋ ಐಕ್ಯತಾ ಯಾತ್ರೆಯಿಂದ ಬಿಜೆಪಿ ಅಧಿಕಾರದಿಂದ ತೊಲಗಲಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಮಯೂರ್‌ ಜಯಕುಮಾರ್‌ ಹೇಳಿದ್ದಾರೆ.

ನಗರದ ಎಚ್‌.ಕೆ.ವೀರಪ್ಪ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್‌ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ರಾಹುಲ್‌ಗಾಂಧಿ 3,570 ಕಿಮೀ ದೂರ ಭಾರತ್‌ ಜೋಡೋ ಪಾದಯಾತ್ರೆ ಮಾಡುತ್ತಿದ್ದು, ಅ.12ಕ್ಕೆ ದಾವಣಗೆರೆಗೆ ಆಗಮಿಸಲಿದೆ. ಪಾದಯಾತ್ರೆಗೆ ಸಂಪೂರ್ಣ ಸಹಕಾರ ನೀಡಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಶಾಸಕ ಎಸ್‌.ರಾಮಪ್ಪ ಮಾತನಾಡಿ, ರಾಹುಲ್‌ ಗಾಂಧಿಯವರು ಕಾಂಗ್ರೆಸ್‌ನ್ನು ಗೆಲ್ಲಿಸಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಅಭೂತಪೂರ್ವ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಪಕ್ಷದ ಮುಖಂಡರು, ಕಾರ್ಯಕರ್ತರು ಜನರಲ್ಲಿ ಜಾಗೃತಿ ಮೂಡಿಸಿ ಪಾದಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಮಾಡಬೇಕಿದೆ ಎಂದು ತಿಳಿಸಿದರು.

ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ…? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ? ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್‌

ಮುಖಂಡ ಎನ್‌.ಎಚ್‌.ಶ್ರೀನಿವಾಸ್‌ ನಂದಿಗಾವಿ, ಆಡಳಿತದಲ್ಲಿರುವ ಬಿಜೆಪಿ ಪರಿಶಿಷ್ಟಜಾತಿ ಮತ್ತು ವರ್ಗ ಹಾಗೂ ಹಿಂದುಳಿದವರ ಕಾಳಜಿ ಮರೆತಿದೆ. ಇದು 40 ಪರ್ಸೆಂಟ್‌ ಕಮಿಷನ್‌ ಸರ್ಕಾರವಾಗಿದೆ. ಮುಂದೆ ಇದು 50 ಪರ್ಸೆಂಟ್‌ ಆಗುವ ಸಾಧ್ಯತೆ ಇದ್ದು, ಜನರು ಈ ಸರ್ಕಾರವನ್ನು ಕಿತ್ತೊಗೆಯುವ ನಿರ್ಧಾರ ಕೈಗೊಂಡಿದ್ದಾರೆ. ಹಾಗಾಗಿ ಕಾಂಗ್ರೆಸ್‌ ಪಕ್ಷವನ್ನು ಗೆಲ್ಲಿಸಬೇಕು ಎಂದು ಹೇಳಿದರು. ದೇವೇಂದ್ರಪ್ಪ ಕುಣೆಬೆಳೆಕೆರೆ ಮಾತನಾಡಿ, ಜೀವನಾವಶ್ಯಕ ವಸ್ತುಗಳ ಬೆಲೆಯನ್ನು ಏರಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಜನರು ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಜಿಲ್ಲಾ ವಕ್ತಾರರಾದ ಎಂ.ನಾಗೇಂದ್ರಪ್ಪ, ಬಿಜೆಪಿ ಕೆಟ್ಟಸರ್ಕಾರವನ್ನು ಕಿತ್ತೊಗೆಯುವ ನಿರ್ಧಾರದಿಂದ ನಮ್ಮ ನಾಯಕ ರಾಹುಲ್‌ ಗಾಂಧಿ 3570 ಕಿಲೋಮೀಟರ್‌ ಐಕ್ಯತಾ ಪಾದ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ ಎಂದು ಹೇಳಿದರು.

PFI ನಿಷೇಧ : ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ – Vishwanews24

ಪಕ್ಷದ ವೀಕ್ಷಕರಾದ ಕವಿತಾ ರೆಡ್ಡಿ, ಅಮೃತೇಶ ಸ್ವಾಮಿ, ವಿಜಯಕುಮಾರ್‌, ಬಿ. ರೇವಣಸಿದ್ದಪ್ಪ, ಎ.ಗೋವಿಂದರೆಡ್ಡಿ, ಕುಂಬಳೂರು ವಿರೂಪಾಕ್ಷಪ್ಪ, ನಗರಸಭೆ ಸದಸ್ಯರಾದ ಶಂಕರ್‌ ಕಟಾವ್ಕರ್‌, ಎಂ.ಎಸ್‌. ಬಾಬುಲಾಲ್‌, ಅಬ್ದುಲ್‌ ಅಲೀಮ್‌, ದಾದಾಪೀರ್‌, ಅಶೋಕ್‌ ಮಾಸ್ಟರ್‌, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ನಿಖಿಲ್‌ ಕೊಂಡಜ್ಜಿ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

52 minutes ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

59 minutes ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

1 hour ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

16 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

17 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

17 hours ago