Featured

ಭಾರತ್ ಜೋಡೋ ಯಾತ್ರೆ – ನಮ್ಮ ವಿಚಾರಗಳನ್ನು ಹೇಳಲು ಅವಕಾಶವಿಲ್ಲ , ಪಾದಯಾತ್ರೆ ಬಿಟ್ಟು ಜನರ ಬಗ್ಗೆ ಮಾತನಾಡಲು ನಮಗೆ ಬೇರೆ ದಾರಿಯಿಲ್ಲ : ರಾಹುಲ್ ಗಾಂಧಿ – Vishwanews24

ಭಾರತ್ ಜೋಡೋ ಯಾತ್ರೆ – ನಮ್ಮ ವಿಚಾರಗಳನ್ನು ಹೇಳಲು ಅವಕಾಶವಿಲ್ಲ , ಪಾದಯಾತ್ರೆ ಬಿಟ್ಟು ಜನರ ಬಗ್ಗೆ ಮಾತನಾಡಲು ನಮಗೆ ಬೇರೆ ದಾರಿಯಿಲ್ಲ..

ಈ ಯಾತ್ರೆಯನ್ನು ತಡೆಯಲು ಯಾವ ವ್ಯಕ್ತಿ, ಶಕ್ತಿಗೂ ಸಾಧ್ಯವಿಲ್ಲ..

‘ಬಿಜೆಪಿ, ಆರ್ ಎಸ್‌ಎಸ್ ವಿಚಾರಧಾರೆಗಳು ದೇಶದಲ್ಲಿ ದ್ವೇಷ, ಹಿಂಸೆಯನ್ನು ಸೃಷ್ಟಿಸುತ್ತಿವೆ..

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

ಚಾಮರಾಜನಗರ: ನಮ್ಮ ವಿಚಾರಗಳನ್ನು ಹೇಳಲು ಅವಕಾಶವಿಲ್ಲ. ಸಂಸತ್ತಿನಲ್ಲಿ ಮಾತನಾಡುವಾಗ ಮೈಕ್ ಬಂದ್ ಮಾಡಲಾಗುತ್ತದೆ, ವಿಧಾನಸಭೆಗಳಲ್ಲೂ ಮಾತನಾಡಲು ಅವಕಾಶವಿಲ್ಲ. ಆದ್ದರಿಂದ ಪಾದಯಾತ್ರೆ ಬಿಟ್ಟು ಬೇರೆ ದಾರಿ ನಮಗಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ಐತಿಹಾಸಿಕ ಭಾರತ ಐಕ್ಯತಾ ಯಾತ್ರೆ ಕರ್ನಾಟಕವನ್ನು ಪ್ರವೇಶಿಸಿದೆ, ಗುಂಡ್ಲುಪೇಟೆಯ ಅಂಬೇಡ್ಕರ್ ಮೈದಾನದಲ್ಲಿ ನಡೆಯುತ್ತಿರುವ ಸ್ವಾಗತ ಕಾರ್ಯಕ್ರಮದ ವೇದಿಕೆಗೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ರಾಷ್ಟ್ರಧ್ವಜವನ್ನು ನೀಡಿ ಸ್ವಾಗತಿಸಲಾಯ್ತು.

ಗುಂಡ್ಲುಪೇಟೆಯ ‘ಭಾರತ್ ಜೋಡೋ ಯಾತ್ರೆ’ಯ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ‘ಈ ಯಾತ್ರೆ ದೇಶದ ಧ್ವನಿ. ಇಲ್ಲಿ ನಾನೊಬ್ಬನೇ ಅಲ್ಲ.‌ ಲಕ್ಷಾಂತರ ಜನರು ಭಾಗವಹಿಸುತ್ತಿದ್ದಾರೆ. ಅವರ ಕಷ್ಟಗಳನ್ನು ಸಮಸ್ಯೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಲ್ಲಿ ಜಾತಿ, ಧರ್ಮ, ಭಾಷೆ ಎಂಬ ಭೇದ ಭಾವ ಇಲ್ಲ. ಸಂವಿಧಾನ ರಕ್ಷಣೆಯ ಉದ್ದೇಶವನ್ನು ಹೊಂದಿರುವ ಈ ಯಾತ್ರೆಯನ್ನು ತಡೆಯಲು ಯಾವ ವ್ಯಕ್ತಿ, ಶಕ್ತಿಗೂ ಸಾಧ್ಯವಿಲ್ಲ’ ಎಂದರು.

ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ದೇಶ ಎದುರಿಸುತ್ತಿರುವ ಸಮಸ್ಯೆಗಳು, ಇಲ್ಲಿ ನಡೆಯುತ್ತಿರುವ ಹಿಂಸೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾತನಾಡಲು ಇರುವ ಮಾರ್ಗಗಳನ್ನು ವಿರೋಧ ಪಕ್ಷದ ಪಾಲಿಗೆ‌ ಮುಚ್ಚಲಾಗಿದೆ. ಪಾದಯಾತ್ರೆ ಬಿಟ್ಟು ಜನರ ಬಗ್ಗೆ ಮಾತನಾಡಲು ಬೇರೆ ದಾರಿಯೇ ಇಲ್ಲ ಎಂದರು.

‘ಬಿಜೆಪಿ, ಆರ್ ಎಸ್‌ಎಸ್ ವಿಚಾರಧಾರೆಗಳು ದೇಶದಲ್ಲಿ ದ್ವೇಷ, ಹಿಂಸೆಯನ್ನು ಸೃಷ್ಟಿಸುತ್ತಿವೆ. ದೇಶದ ಸಂವಿಧಾನ ಇಲ್ಲದಿದ್ದರೆ, ತ್ರಿವರ್ಣ ಧ್ಬಜಕ್ಕೆ ಬೆಲೆ ಇಲ್ಲ. ಸಂವಿಧಾನವನ್ಜು ರಕ್ಷಿಸಬೇಕಾಗಿದೆ. ನಮ ಯಾತ್ರೆಯಲ್ಲಿ ದ್ವೇಷ, ಹಿಂಸೆ‌ ಇಲ್ಲ. ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆಯುತ್ತೇವೆ. ಯಾತ್ರೆಯಲ್ಲಿ ಯಾರಾದರೂ ಎಡವಿ ಬಿದ್ದರೆ, ಉಳಿದವರು ಅವರನ್ನು ಮೇಲಕ್ಕೆತ್ತಿ ಮುನ್ನಡೆಸುತ್ತಾರೆ. ಬಿದ್ದವನ ಜಾತಿ, ಧರ್ಮ, ಭಾಷೆ ಎಂದು ಯಾರೂ ಕೇಳುವುದಿಲ್ಲ’ ಎಂದು ರಾಹುಲ್ ಹೇಳಿದರು.

‘ನಾವಿಲ್ಲಿ ಉದ್ದುದ್ದ ಭಾಷಣ ಮಾಡುವುದಿಲ್ಲ. ಆರೇಳು ಗಂಟೆ ನಡೆಯುತ್ತೇವೆ. 15 ನಿಮಿಷ ಮಾತನಾಡುತ್ತೇವೆ. ಜನರ ಮಾತುಗಳನ್ನು ಕೇಳುತ್ತೇವೆ. ಭ್ರಷ್ಟಾಚಾರ, ಬೆಲೆ ಏರಿಕೆ, ನಿರುದ್ಯೋಗ, ಸರ್ಕಾರಿ ಸಂಸ್ಥೆಗಳ ಖಾಸಗೀಕರರಣ ಬಗ್ಗೆ ಜನರು ಮಾತನಾಡುತ್ತಿದ್ದಾರೆ’ ಎಂದರು.

ಇದನ್ನೂ ಓದಿ: ಸೇನಾಪಡೆಗಳ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಜನರಲ್ ಅನಿಲ್ ಚೌಹಾಣ್ – Vishwanews24

ರಾಜ್ಯ ಪ್ರವೇಶಿಸಿದ ಪಾದಯಾತ್ರೆಯ ಮೊದಲ ದಿನ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಚ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಧ್ರುವನಾರಾಯಣ, ಬಿ ಕೆ ಹರಿಪ್ರಸಾದ್, ಆರ್ ವಿ ದೇಶಪಾಂಡೆ, ಎಂಬಿ ಪಾಟೀಲ್ ಸೇರಿದಂತೆ ಹಲವಾರು ಪ್ರಮುಖ ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago